AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುಗಾದಿ ಹಬ್ಬದಂದು ಹೈಕಮಾಂಡ್​​ಗೆ ಹೊಸ ಸಂದೇಶ ರವಾನೆ: ಸಂಚಲನ ಮೂಡಿಸಿದ ಯತ್ನಾಳ್

ಬಿಜೆಪಿಯಿಂದ ಆರು ವರ್ಷಗಳ ಉಚ್ಛಾಟನೆಗೊಂಡಿರುವ ವಿಜಯಪುರ ನಗರ ಶಾಸಕ ಬಸನಗೌ ಪಾಟೀಲ್ ಯತ್ನಾಳ್​ ಮತ್ತೆ ಆ್ಯಕ್ಟೀವ್ ಆಗಿದ್ದಾರೆ. ಪಕ್ಷದಿಂದ ಅಮಾನತುಗೊಂಡಿರು ಬಳಿಕ ಯತ್ನಾಳ್ ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರ ವಿರುದ್ಧ ತಮ್ಮ ಮಾತಿನ ಸಮುರ ಮತ್ತಷ್ಟು ಹೆಚ್ಚು ಮಾಡಿದ್ದು, ಪರೋಕ್ಷವಾಗಿ ಹೈಕಮಾಂಡ್​ಗೆ ಎಚ್ಚರಿ ಸಂದೇಶ ರವಾನಿಸಿದ್ದಾರೆ. ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಯತ್ನಾಳ್​ ಇಂದು ಯುಗಾದಿ ಹಬ್ಬದಂದು ಸ್ಫೋಟಕ ಹೇಳಿಕೊಂದನ್ನು ನೀಡಿದ್ದಾರೆ.

ಯುಗಾದಿ ಹಬ್ಬದಂದು ಹೈಕಮಾಂಡ್​​ಗೆ ಹೊಸ ಸಂದೇಶ ರವಾನೆ: ಸಂಚಲನ ಮೂಡಿಸಿದ ಯತ್ನಾಳ್
Basangouda Patil Yatnal
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on:Mar 30, 2025 | 1:33 PM

Share

ವಿಜಯಪುರ, ,(ಮಾರ್ಚ್​ 30): ‘ಸತ್ಯವನ್ನೇ ಹೇಳುತ್ತೇನೆ, ನೇರವಾಗಿ ಮಾತನಾಡುತ್ತೇನೆ ಎಂಬ ಕಾರಣಕ್ಕಾಗಿ ಪಕ್ಷದಿಂದ ನನ್ನನ್ನು ಉಚ್ಛಾಟನೆ ಮಾಡಿಸಿದ್ದಾರೆ. ಇದರ ಹಿಂದೆ ಯಡಿಯೂರಪ್ಪ ಇದ್ದಾರೆ. ಆದರೆ, ನಾನು ಹೊಸ ಪಕ್ಷ ಕಟ್ಟುವುದಿಲ್ಲ. ಗೌರವಯುತವಾಗಿ, ‘ವಿತ್‌ ಪವರ್‌’ ಬಿಜೆಪಿಗೆ ವಾಪಸ್‌ ಬರುತ್ತೇನೆ’ ಎಂದು ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ (Basangouda Patil Yatnal) ಹೇಳಿದ್ದರು. ಆದ್ರೆ, ಯುಗಾದಿ ಹಬ್ಬದಿನದಂದು ತಮ್ಮ ವರಸೆ ಬದಲಿಸಿದ್ದು, ಹೊಸ ಪಕ್ಷ ಕಟ್ಟು ಸುಳಿವು ನೀಡಿದ್ದಾರೆ. ಈ ಮೂಲಕ ಯತ್ನಾಳ್ ಮುಂದಿನ ನಡೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಯಡಿಯೂರಪ್ಪ ವಿರುದ್ಧ ಗಂಭೀರ ಆರೋಪವಿದೆ, ಹಗರಣ ಮಾಡಿದ ಕುಟುಂಬ ಅದು. ಹಗರಣ ಮಾಡಿದ ಕುಟುಂಬವನ್ನು ಮುಂದುವರೆಸಿದರೆ . ರಾಜ್ಯದ ಜನರು ಒಂದು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಇವತ್ತಿನಿಂದಲೇ ಜನ ಜಾಗೃತಿ ಶುರು ಮಾಡುತ್ತೇವೆ ಎಂದು ಹೈಕಮಾಂಡ್​​ಗೆ ಪರೋಕ್ಷ ಎಚ್ಚರಿಕೆ ಸಂದೇಶ ರವಾನಿಸಿರು.

ಇದನ್ನೂ ಓದಿ: ಉಚ್ಚಾಟನೆ ಬಳಿಕ ಯತ್ನಾಳ್ ಮತ್ತೆ ಆ್ಯಕ್ಟೀವ್: ರಹಸ್ಯ ಸಭೆಯಲ್ಲಿ ಏನೆಲ್ಲಾ ಚರ್ಚೆ ಆಯ್ತು?

ಜನರು ಬಿಜೆಪಿಯಿಂದ ಹಿಂದೂಗಳ ರಕ್ಷಣೆ ಆಗಲ್ಲ ಎನ್ನುತ್ತಿದ್ದಾರೆ. ಹಿಂದೂ ಪರವಾದ ಪಕ್ಷ ಬೇಕು ಎಂದು ಹೇಳುತ್ತಿದ್ದಾರೆ. ಹಿಂದೂಗಳು ಸಹನೆ ಉಳ್ಳವರು, ಕಾಂಗ್ರೆಸ್ ಒಂದು ಮುಸ್ಲಿಂ ಪಕ್ಷ. ಬಿಜೆಪಿ ಹಿಂದೂ ಪಕ್ಷವಾಗದಿದ್ರೆ ಐತಿಹಾಸಿಕ ನಿರ್ಧಾರ ಮಾಡುತ್ತಾರೆ. BSY ಕುಟುಂಬಕ್ಕೆ ನಾಯಕತ್ವ ಕೊಟ್ರೆ ಬಿಜೆಪಿ ಹೀನಾಯವಾಗಿ ಸೋಲುತ್ತೆ/ ಬಿಎಸ್​ವೈ ಕುಟುಂಬ ಉತ್ತರ ಕರ್ನಾಟಕಕ್ಕೆ ಮಹಾಮೋಸ ಮಾಡಿದೆ. ಆಲಮಟ್ಟಿ ಡ್ಯಾಂಗೆ 25 ಸಾವಿರ ಕೋಟಿ ರೂ. ಕೊಡುವೆ ಎಂದು ಮೋಸ ಮಾಡಿದ್ದಾರೆ. ವಿಜಯಪುರ ನಗರಕ್ಕೆ ಬಂದಿದ್ದ 125 ಕೋಟಿ ರೂ. ಹಿಂಪಡೆದು ವಂಚಿಸಿದ್ದಾರೆ. ಬಿಎಸ್​ವೈ ಬಿಟ್ಟರೆ ಲಿಂಗಾಯತರು ಕೈಬಿಡುತ್ತಾರೆ ಎನ್ನುವ ಭಯ ಬಿಡಲಿ ಎಂದು ಹೈಕಮಾಂಡ್​ಗೆ ಯತ್ನಾಳ್ ಸಲಹೆ ನೀಡಿದರು.

ಇದನ್ನೂ ಓದಿ
Image
ಯತ್ನಾಳ್​ ಬೆನ್ನಿಗೆ ನಿಂತ ಪಂಚಮಸಾಲಿ ಸಮುದಾಯ: ಬೆಜೆಪಿ ಹೈಕಮಾಂಡ್​ಗೆ ಗಡುವು!
Image
ಯತ್ನಾಳ್​ಗೆ ಈ ಉಚ್ಛಾಟನೆ ಶಿಕ್ಷೆ ಮೊದಲಲ್ಲ...2 ಬಾರಿ ಅಮಾನತುಗೊಂಡು ವಾಪಸ್!
Image
ಯತ್ನಾಳ್​ ಉಚ್ಛಾಟನೆ ಬೆನ್ನಲ್ಲೇ ರಾಜೀನಾಮೆ ಪರ್ವ, ಮತ್ತೊಂದಡೆ ಸಂಭ್ರಮ
Image
ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಬಸನಗೌಡ ಪಾಟೀಲ್​​ ಯತ್ನಾಳ್​ ಉಚ್ಚಾಟನೆ

ಜನರ ಅಭಿಪ್ರಾಯ ಸಂಗ್ರಹಿಸಿ ಒಂದು ಹಿಂದು ಪಕ್ಷ ಆಸ್ತಿತ್ವಕ್ಕೆ ತರಬೇಕಾಗುತ್ತದೆ. ಬಹಳಷ್ಟು ಜನರು ಬಿಜೆಪಿಯಿಂದ ಹಿಂದು ರಕ್ಷಣೆ ಮಾಡುತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ. ಯಡಿಯೂರಪ್ಪ ಕುಟುಂಬ ಹೊಂದಾಣಿಕೆ ರಾಜಕೀಯ ಮಾಡಿ ಪಕ್ಷವನ್ನು ದುರ್ಬಲ ಮಾಡಿದೆ. ಹೀಗಾಗಿ ಹಿಂದುಗಳ ರಕ್ಷಣೆ, ದೇಶಕ್ಕಾಗಿ ಹಿಂದು ಪಕ್ಷ ಆಸ್ವಿತ್ವ ತರಬೇಕಾಗಿದೆ. ನಾವು, ಬಿಜೆಪಿ-ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳಲ್ಲ. ಯಡಿಯೂರಪ್ಪ ಬಿಟ್ಟು ನಮಗೆ ಬೇರೆ ಗತಿಯಿಲ್ಲ ಎಂದು ನೀವು ಹೇಳಿದರೆ ನಮ್ಮ ದಾರಿ ನಾವು ಕಂಡುಕೊಳ್ಳಬೇಕಾಗುತ್ತದೆ. ಹಿಂದು ಪಕ್ಷ ಕಟ್ಟುವ ಬಗ್ಗೆ ಬೀದರ್‌ನಿಂದ ಹಿಡಿದು ಚಾಮರಾಜನಗರವರೆಗೂ ಒತ್ತಾಯಿಸಿದ್ದಾರೆ. ಹೀಗಾಗಿ ಹೊಸ ಪಕ್ಷದ ಬಗ್ಗೆ ನಾವು ಜನಾಭಿಪ್ರಾಯ ಸಂಗ್ರಹಿಸುತ್ತೇವೆ ಎಂದಿದ್ದಾರೆ.

ತಮ್ಮ ಸ್ವಾರ್ಥಕ್ಕಾಗಿ ಬಿಎಸ್‌ವೈ-ವಿಜಯೇಂದ್ರ ಹಿಂದುತ್ವವಾದಿಗಳನ್ನ ತುಳಿಯುತ್ತಾ ಬಂದಿದ್ದಾರೆ. ಅದಕ್ಕೆ ನಾನು ಈಗ ಬಲಿಯಾಗಿದ್ದಾನೆ. ಪಕ್ಷದಲ್ಲಿ ವಂಶಪಾರಂಪರ್ಯ ಮುಂದುವರಿಸಲು ಬಿಎಸ್‌ವೈ ಕುಟುಂಬ ಮುಂದಾಗಿದೆ. ಇದೇ ರೀತಿ ಮುಂದುವರಿದರೆ ನಾವು ಪರ್ಯಾಯ ಮಾರ್ಗ ಕಂಡು ಕೊಳ್ಳಬೇಕಾಗುತ್ತದೆ. ಹೈಕಮಾಂಡ್ ಪಕ್ಷದಲ್ಲಿ ವಂಶಪಾರಪರ್ಯ ಭ್ರಷ್ಟಚಾರಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಪರ್ಯಾಯವಾಗಿ ನಾವು ನಿಲ್ಲಬೇಕಾಗುತ್ತದೆ. ಯುಗಾದಿ ಹಬ್ಬದ ಹೊಸ ವರ್ಷದಿಂದ ಈ ಸಂದೇಶ ನೀಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:32 pm, Sun, 30 March 25

Follow Us
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ