AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೃತ್ಯುಂಜಯ ಸ್ವಾಮೀಜಿ ಹಾಗೂ ಭಕ್ತರಿಂದ ಜೀವ ಬೆದರಿಕೆ: ಬಹಿರಂಗ ಕ್ಷಮೆಯಾಚಿಸಿದ ಮಾಜಿ MLC

ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಭಕ್ತರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ನಮ್ಮನ್ನು ಹೆದರಿಸುವ ತಂತ್ರ ಮಾಡುತ್ತಿದ್ದಾರೆ ಎಂದು ಮಾಜಿ ವಿಧಾನಪರಿಷತ್ ಸದಸ್ಯ ಆರೋಪಿಸಿದ್ದಾರೆ.

ಮೃತ್ಯುಂಜಯ ಸ್ವಾಮೀಜಿ ಹಾಗೂ ಭಕ್ತರಿಂದ ಜೀವ ಬೆದರಿಕೆ: ಬಹಿರಂಗ ಕ್ಷಮೆಯಾಚಿಸಿದ ಮಾಜಿ MLC
Mruthyunjaya Swamiji And puttasidda shetty
TV9 Web
| Edited By: |

Updated on: Oct 13, 2022 | 2:44 PM

Share

ಹುಬ್ಬಳ್ಳಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ (Basava Jaya Mruthyunjaya Swamiji ) ಹಾಗೂ ಅವರ ಭಕ್ತರು ನನಗೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ ಗಂಭೀರ ಆರೋಪ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು(ಅಕ್ಟೋಬರ್.13) ಮಾತನಾಡಿದ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಅವರ ಭಕ್ತರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎಂಬಂತೆ ನಮ್ಮನ್ನು ಹೆದರಿಸುವ ತಂತ್ರ ಮಾಡುತ್ತಿದ್ದಾರೆ. ಮೀಸಲಾತಿಯನ್ನು ವಾಮ ಮಾರ್ಗದಿಂದ ಪಡೆಯಲು ಸಾಧ್ಯವಿಲ್ಲ. ಪಂಚಮಸಾಲಿ ಸಮಾಜದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಅವರ ಭಕ್ತರ ಭಾವನೆಗಳಿಗೆ ಧಕ್ಕೆಯಾಗಿದ್ದರೇ ನಾನು ಬಹಿರಂಗ ಕ್ಷಮೆ ಕೋರುತ್ತೇನೆ ಎಂದು ಸ್ಪಷ್ಟಪಡಿಸಿದರು.

ಮೀಸಲಾತಿಗಾಗಿ ಜಯಮೃತ್ಯುಂಜಯ ಶ್ರೀ ನಡೆಸುತ್ತಿರುವ ಹೋರಾಟಕ್ಕೆ ಮಾಜಿ MLC ವಿರೋಧ

ಕರ್ನಾಟಕ ರಾಜ್ಯ ಕಾಯಕ ಸಮಾಜಗಳ ಒಕ್ಕೂಟವು ಅತಿ ಹಿಂದೂಳಿದ ವರ್ಗಗಳ ಜನರ ಧ್ವನಿಯಾಗಿದೆ. ಜನರ ಅಭಿವೃದ್ಧಿಗಿರುವ ಮೀಸಲಾತಿ ಸಂರಕ್ಷಣೆಗಾಗಿ ರಾಜ್ಯ ವ್ಯಾಪಿ ಹೋರಾಟ ಮಾಡಲಾಗುತ್ತಿದೆ‌. ಇದು ಯಾವುದೇ ಸಮಾಜದ ವಿರುದ್ಧವಲ್ಲ. ಆದರೆ ಕೂಡಲ ಸಂಗಮ ಪೀಠಾಧ್ಯಕ್ಷ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ಭಕ್ತರು ನಮ್ಮ ಮೇಲೆ ಜೀವ ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿದರು,

ಕಾಯಕ ಸಮಾಜಕ್ಕಿರುವ ಶೇ.15 ರಷ್ಟು ಮೀಸಲಾತಿ ಉಳಿವಿಗಾಗಿ ಮಾತನಾಡಿದ್ದೇನೆ. ಅಂದು ನಾನು ಆಡಿದ ಮಾತುಗಳು ಪಂಚಮಸಾಲಿ ಜನಾಂಗದ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಆ ಸಮಾಜದ ಧುರೀಣರು ವ್ಯಕ್ತಪಡಿಸಿದ್ದಾರೆ. ಅಲ್ಲದೇ ನನಗೆ ಮತ್ತು ನನ್ನ ಸ್ನೇಹಿತರಿಗೆ ಜೀವ ಬೆದರಿಕೆ ಕೂಡಾ ಹಾಕಿದ್ದಾರೆ ಎಂದರು.

ನಾವು ಅತಿ ಹಿಂದುಳಿದ ಸಮಾಜಗಳ ಜನರು. ನಮ್ಮ ಮೇಲೆ ತೋಳಬಲ ಪ್ರದರ್ಶಿಸುತ್ತಿದ್ದಾರೆ. ಹಿಂದೂಳಿದ ವರ್ಗಗಳಿಗೆ ಇರುವ ಮೀಸಲಾತಿ ಮತ್ತು ರಾಜಕಾರಣ ಕುರಿತು ಅ. 15 ರಂದು ಹುಬ್ಬಳ್ಳಿಯ ಅಕ್ಕನ ಬಳಗದಲ್ಲಿ ಚಿಂತನ ಮಂಥನ ಸಭೆ ಹಮ್ಮಿಕೊಳ್ಳಲಾಗಿದೆ. ಅಲ್ಲಿ ಸಂವಿಧಾನ ತಜ್ಞರು ಈ ಕುರಿತು ವಿಸ್ತ್ರತವಾಗಿ ಚರ್ಚೆ ಮಾಡಲಿದ್ದಾರೆ. ಹೀಗಾಗಿ ಚಿಂತನ ಮಂಥನ ಸಭೆ ವಂಚಿತ ಸಮಾಜಗಳಿಗೆ ಸಾಮಾಜಿಕ ನ್ಯಾಯ ಪಡೆಯಲು ನಡೆಸುತ್ತಿರುವ ಚಳವಳಿಯ ಒಂದು ಭಾಗವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ