AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಮೀಸಲಾತಿ ಹೋರಾಟ: ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

ನಿಗದಿತ ಸಮಯದೊಳಿಗೆ ಮುಖ್ಯಮಂತ್ರಿ ಸ್ಪಷ್ಟ ಉತ್ತರ ನೀಡಬೇಕು. ಸಚಿವ ಸಂಪುಟ ಸಭೆಯ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್​ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆಯನ್ನೂ ಒಪ್ಪುವುದಿಲ್ಲ ಎಂದು ಘೋಷಿಸಿದರು.

ಪಂಚಮಸಾಲಿ ಮೀಸಲಾತಿ ಹೋರಾಟ: ಉಪವಾಸ ಸತ್ಯಾಗ್ರಹ ಕೈಬಿಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ
ಬಸವಜಯ ಮೃತ್ಯುಂಜಯಶ್ರೀ ಸ್ವಾಮೀಜಿ
Ghanashyam D M | ಡಿ.ಎಂ.ಘನಶ್ಯಾಮ
|

Updated on: Mar 04, 2021 | 11:18 PM

Share

ಬೆಂಗಳೂರು: ಭಕ್ತರು ಭಾವೋದ್ವೇಗಗಕ್ಕೆ ಒಳಗಾಗುವ ಸಾಧ್ಯತೆ ಇರುವುದರಿಂದ ಶುಕ್ರವಾರದಿಂದ (ಮಾರ್ಚ್ 5) ಕರೆ ನೀಡಿದ್ದ ಪಂಚಮಸಾಲಿ ಉಪವಾಸ ಸತ್ಯಾಗ್ರಹವನ್ನು ಮುಂದೂಡಲಾಗಿದೆ. ಸದ್ಯದ ಮಟ್ಟಿಗೆ ಉಪವಾಸ ಸತ್ಯಾಗ್ರಹ ಮಾಡುವುದಿಲ್ಲ ಎಂದು ಪಂಚಮಸಾಲಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು.

ನಗರದಲ್ಲಿ ಗುರುವಾರ ರಾತ್ರಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಪರಮಾಧಿಕಾರ ಬಳಸಿ ಮೀಸಲಾತಿ ಬೇಡಿಕೆಯನ್ನು ಈಡೇರಿಸಬೇಕು. ನಮ್ಮ ಬೇಡಿಕೆ ಈಡೇರುವವರೆಗೆ ಫ್ರೀಡಂಪಾರ್ಕ್​ನಲ್ಲಿ ಧರಣಿ ಮುಂದುವರಿಯಲಿದೆ ಎಂದರು.

ನಿಗದಿತ ಸಮಯದೊಳಿಗೆ ಮುಖ್ಯಮಂತ್ರಿ ಸ್ಪಷ್ಟ ಉತ್ತರ ನೀಡಬೇಕು. ಸಚಿವ ಸಂಪುಟ ಸಭೆಯ ನಿರ್ಧಾರವನ್ನು ನಾವು ಒಪ್ಪುವುದಿಲ್ಲ. ಹೈಕೋರ್ಟ್​ನ ಮೂವರು ನಿವೃತ್ತ ನ್ಯಾಯಮೂರ್ತಿಗಳ ಸಮಿತಿ ರಚನೆಯನ್ನೂ ಒಪ್ಪುವುದಿಲ್ಲ ಎಂದು ಘೋಷಿಸಿದರು.

ಸಮುದಾಯದ ಶಾಸಕರು ಪಕ್ಷಭೇದ ಮರೆತು ಮುಖ್ಯಮಂತ್ರಿಗೆ ಈ ನಿಟ್ಟಿನಲ್ಲಿ ಮನವಿ ಮಾಡಬೇಕು. ನಮ್ಮ ಬೇಡಿಕೆಗಳು ಈಡೇರದಿದ್ದರೆ ಕೊನೆಯ ಘಟ್ಟವಾಗಿ ಆಮರಣಾಂತ ಉಪವಾಸಕ್ಕೆ ಮುಂದಾಗಬೇಕಾಗುತ್ತದೆ ಎಂದು ಅವರು ನುಡಿದರು.

ಇದನ್ನೂ ಓದಿ: ಸದ್ಯಕ್ಕೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಸಾಧ್ಯವೇ ಇಲ್ಲ: ಸಚಿವರುಗಳ ಸ್ಪಷ್ಟನೆ

ಇದನ್ನೂ ಓದಿ: ವಿಶ್ಲೇಷಣೆ | ಪಂಚಮಸಾಲಿ ಮೀಸಲಾತಿ ಮೂಸೆಯಲ್ಲಿ ಬೇಯುವುದು ಯಾರ ಬೇಳೆ?