AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

Panchamasali Community: ನಮ್ಮಲ್ಲಿ ಸುಮಾರು 80 ಲಕ್ಷ ಹಿಂದುಳಿದ ವರ್ಗದ ಜನರಿದ್ದಾರೆ. ಹೀಗಾಗಿ ನಮಗೆ 2A ಮೀಸಲಾತಿಯನ್ನು ಕೊಡಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ
ಬಸವ ಜಯಮೃತ್ಯುಂಜಯ ಶ್ರೀ
TV9 Web
| Updated By: ganapathi bhat|

Updated on: Aug 23, 2021 | 2:37 PM

Share

ಮೈಸೂರು: ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿ ಬೇಡಿಕೆ ವಿಚಾರವಾಗಿ ಮೈಸೂರಿನಲ್ಲಿ ಬಸವ ಜಯಮೃತ್ಯುಂಜಯಶ್ರೀ ಸುದ್ದಿಗೋಷ್ಠಿ ನಡೆಸಿದ್ದಾರೆ. ಸರ್ಕಾರ ಕೊಟ್ಟ ಗಡುವು ಮುಗಿಯುತ್ತಿದೆ. ಹೀಗಾಗಿ ಸರ್ಕಾರಕ್ಕೆ ಎಚ್ಚರಿಸಲು ಬೃಹತ್ ರಾಜ್ಯ ಅಭಿಯಾನ ನಡೆಸುತ್ತೇವೆ. ಪ್ರತಿಜ್ಞಾ ಪಂಚಾಯತ್ ಘೋಷವಾಕ್ಯದೊಂದಿಗೆ ಅಭಿಯಾನ ನಡೆಸಲಿದ್ದೇವೆ. ಮಲೆಮಹದೇಶ್ವರ ಬೆಟ್ಟದಲ್ಲಿ ಅಭಿಯಾನ ಉದ್ಘಾಟಿಸಿ ಆರಂಭ ಆಗಲಿದೆ ಎಂದು ಬಸವ ಜಯಮೃತ್ಯುಂಜಯ ಶ್ರೀ ತಿಳಿಸಿದ್ದಾರೆ.

ಹೋರಾಟದಿಂದ ಹಿಂದೆ ಸರಿಯದಿರುವುದು ಇದರ ಉದ್ದೇಶ. ಯುವಕರನ್ನು ಹೆಚ್ಚಾಗಿ ಇದರಲ್ಲಿ ಅಳವಡಿಸಿಕೊಳ್ಳುತ್ತೇವೆ. ಯಾವುದೇ ಕಾರಣಕ್ಕೂ ಈ ಬೇಡಿಕೆಯಿಂದ ಹೊರಗೆ ಬರಬಾರದು. ಆ ರೀತಿ ಈ ಪ್ರತಿಜ್ಞೆಯನ್ನ ತೆಗೆದುಕೊಳ್ಳುತ್ತೇವೆ. ನಮ್ಮಲ್ಲಿ ಸುಮಾರು 80 ಲಕ್ಷ ಹಿಂದುಳಿದ ವರ್ಗದ ಜನರಿದ್ದಾರೆ. ಹೀಗಾಗಿ ನಮಗೆ 2A ಮೀಸಲಾತಿಯನ್ನು ಕೊಡಲೇಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ. ನಮಗೆ 3A ಮೀಸಲಾತಿ ಕೊಟ್ಟಿದ್ದಾರೆ. ಬದಲಾಗಿ ನಮಗೆ 2A ಮೀಸಲಾತಿ ಕೊಡಲೇಬೇಕು. ಸರ್ಕಾರ ನಮ್ಮ ಲಿಂಗಾಯತ ಗೌಡ, ದೀಕ್ಷಾ ಲಿಂಗಾಯತ, ಪಂಚಮಸಾಲಿ, ಹೀಗೆ ಅನೇಕ‌ ಸಮಾಜ ಒಗ್ಗೂಡಿ ಎಲ್ಲರಿಗೂ 2A ಮೀಸಲಾತಿ‌ ಕೊಡಬೇಕು ಎಂದು ಸ್ವಾಮೀಜಿ ಕೇಳಿದ್ದಾರೆ.

ಈಗಾಗಲೇ ಬೆಂಗಳೂರಲ್ಲಿ ಬೃಹತ್ ಹೋರಾಟ ಮಾಡಿದ್ದೇವೆ. ಅದು ಮತ್ತೊಮ್ಮೆ ನಡೆಯದಂತೆ ಸರ್ಕಾರ‌ ನಡೆದುಕೊಳ್ಳುವ ವಿಶ್ವಾಸ ಇದೆ. ಈ ಹಿಂದೆ ಕಾನೂನು ಸಚಿವರಾಗಿದ್ದ ಬಸವರಾಜ ಬೊಮ್ಮಾಯಿ ನಮಗೆ ಮೀಸಲಾತಿ ಭರವಸೆ ನೀಡಿದ್ದರು. ಆದರೆ ಇಂದು ಅವರೇ ಸಿಎಂ ಆಗಿದ್ದಾರೆ. ಅವರು ನಮಗೆ 2A ಮೀಸಲಾತಿ ಕೊಡುವ ವಿಶ್ವಾಸ ಇದೆ. ಸುಪ್ರೀಂ ಕೋರ್ಟ್ ಅನ್ವಯ ಮೀಸಲಾತಿ ಶೇಕಡಾ 50 ಮೀರಬಾರದು. ಶೇಕಡಾ 50ರ ಒಳಗೆ ನಮಗೆ ಮೀಸಲಾತಿ ಕಲ್ಪಿಸಿಕೊಡಿ ಎಂದಷ್ಟೇ ನಾವು ಕೇಳುತ್ತಿದ್ದೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಇದನ್ನೂ ಓದಿ: ಜಾತಿ ಆಧಾರಿತ ಮೀಸಲಾತಿ ನಿಲ್ಲಿಸಿ ಸಾಮಾಜಿಕ, ಶೈಕ್ಷಣಿಕ ಸ್ಥಿತಿ ಆಧರಿಸಿ ಮೀಸಲಾತಿ ಒದಗಿಸಿ: ಮುಖ್ಯಮಂತ್ರಿ ಚಂದ್ರು ಒತ್ತಾಯ

ಪ್ರಬಲ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಡಿ; ಜಾತಿ ಗಣತಿ ಆಧರಿಸಿ ಬಜೆಟ್ ಮಂಡಿಸಿ: ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಮನವಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ