AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’

Reservation: ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

‘ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ; ಚಳುವಳಿ ನಡೆಯುವಾಗ ಗೊಂದಲ ಸಹಜ’
ಬಸವ ಜಯಮೃತ್ಯುಂಜಯ ಸ್ವಾಮೀಜಿ (ಸಂಗ್ರಹ ಚಿತ್ರ)
TV9 Web
| Updated By: ganapathi bhat|

Updated on: Sep 08, 2021 | 10:22 PM

Share

ಉಡುಪಿ: ಕರ್ನಾಟಕ ರಾಜ್ಯದಲ್ಲಿ 3 ಕೋಟಿ ಲಿಂಗಾಯತರು ಇದ್ದಾರೆ. ಆದರೆ ನಮಗೆ ಸಂವಿಧಾನಬದ್ಧ ಸವಲತ್ತುಗಳು ಇನ್ನೂ ಸಿಕ್ಕಿಲ್ಲ. ಮತ ಹಾಕಲು, ಕಂದಾಯ ಕಟ್ಟಲು ನಾವು ಸೀಮಿತರಾಗಿದ್ದೇವೆ. ವೀರಶೈವ ಲಿಂಗಾಯತರಿಗೆ 2A ಮೀಸಲಾತಿ ನೀಡಬೇಕು ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಗಿಯುತ್ತಾ ಬರುತ್ತಿದೆ. ಮೀಸಲಾತಿ ನೀಡುವುದು ವಿಳಂಬವಾದರೆ ಮತ್ತೆ ಹೋರಾಟ ಮಾಡುತ್ತೇವೆ ಎಂದು ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಹೋರಾಟ ಆರಂಭಿಸ್ತೇವೆ. ಚಳವಳಿಗಳು ನಡೆಯುವಾಗ ಗೊಂದಲಗಳು ಸಹಜ. ಗೊಂದಲ ಸೃಷ್ಟಿಸಲು ಕಾಣದ ಕೈಗಳು ಕೆಲಸ ಮಾಡುತ್ತಿವೆ. ಅಸೂಯೆ ಮನಸುಗಳಿಂದ ಹೋರಾಟ ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಅನೇಕ ವಾಮಮಾರ್ಗಗಳನ್ನು ಹಿಡಿದು ಗೊಂದಲ ಸೃಷ್ಟಿ ಆಗುತ್ತಿದೆ. ಗೊಂದಲ ಸೃಷ್ಟಿಸುವವರಿಗೆ ಬಸವಣ್ಣ ಒಳ್ಳೆಯದು ಮಾಡಲಿ ಎಂದು ಉಡುಪಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

ಯಾವುದೇ ಲಿಂಗಾಯಿತ ಪೀಠಗಳು ರಾಜ್ಯ ಸರ್ಕಾರದ ಪರ ವಿರೋಧ ಇಲ್ಲ. ಚಳುವಳಿಗಳು ನಡೆಯುವಾಗ ಗೊಂದಲಗಳು ಸಹಜ ಆಗಿರುತ್ತದೆ. ಮುಖ್ಯಮಂತ್ರಿ, ಮಂತ್ರಿಸ್ಥಾನ ಮುಖ್ಯ ಅಲ್ಲ. ನಿಗಮಮಂಡಳಿ ಅಧ್ಯಕ್ಷ ಸ್ಥಾನ ನಾನು ಕೇಳುವುದಿಲ್ಲ. ಲಿಂಗಾಯತ ಸಮುದಾಯಕ್ಕೆ 2A ಮೀಸಲಾತಿ ಕೊಡಿ ಎಂದು ಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ಸರ್ಕಾರವನ್ನು ಎಚ್ಚರಿಸಲು ಬೃಹತ್ ಅಭಿಯಾನ: ಬಸವ ಜಯಮೃತ್ಯುಂಜಯಶ್ರೀ

ಇದನ್ನೂ ಓದಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲು: ಬೊಮ್ಮಾಯಿ ಅವರೇ ಸಿಎಂ ಆಗಿದ್ದಾರೆ, ಭರವಸೆ ಈಡೇರಿಸಲಿ- ಜಯಮೃತ್ಯುಂಜಯ ಸ್ವಾಮೀಜಿ

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ