AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠೆಯ ಕಣವಾದ ಬಸವಕಲ್ಯಾಣ ಉಪಚುನಾವಣೆ: ಕುತೂಹಲ ಮೂಡಿಸಿದ ಜೆಡಿಎಸ್ ನಡೆ

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಯ ಗಾಳಿ ನಿಧಾನವಾಗಿ ವೇಗ ಪಡೆಯುತ್ತಿದೆ. ಕೊರೊನಾ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದರು. ಹೀಗಾಗಿ ಬಸವಕಲ್ಯಾಣ ಉಪ ಚುನಾವಣೆ ಎದುರಿಸಲಿದೆ.

ಪ್ರತಿಷ್ಠೆಯ ಕಣವಾದ ಬಸವಕಲ್ಯಾಣ ಉಪಚುನಾವಣೆ: ಕುತೂಹಲ ಮೂಡಿಸಿದ ಜೆಡಿಎಸ್ ನಡೆ
ಬಸವಕಲ್ಯಾಣ (ಸಾಂಕೇತಿಕ ಚಿತ್ರ)
guruganesh bhat
| Edited By: |

Updated on: Dec 08, 2020 | 6:33 PM

Share

ಬೀದರ್: ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಯ ಗಾಳಿ ನಿಧಾನವಾಗಿ ವೇಗ ಪಡೆಯುತ್ತಿದೆ. ಕೊರೊನಾ ಮತ್ತು ಬಹು ಅಂಗಾಂಗ ವೈಫಲ್ಯದಿಂದ ಶಾಸಕ ಬಿ.ನಾರಾಯಣರಾವ್ ನಿಧನರಾಗಿದ್ದರು. ಹೀಗಾಗಿ ಬಸವಕಲ್ಯಾಣದಲ್ಲಿ ಉಪ ಚುನಾವಣೆ ನಡೆಯಲಿದೆ.

ಬಿಜೆಪಿ ಉಪ ಚುನಾವಣೆಗೆ ಭಾರಿ ಮಹತ್ವ ನೀಡಿದೆ. ಸಿಎಂ ಪುತ್ರ ಬಿ.ವೈ ವಿಜಯೇಂದ್ರ, ಡಿಸಿಎಂ ಲಕ್ಷ್ಮಣ್ ಸವದಿ, ಬೀದರ್ ಸಂಸದ ಭಗವಂತ ಖೂಬಾ ಚುನಾವಣಾ ಉಸ್ತುವಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಚಾರವನ್ನೂ ಭರ್ಜರಿಯಾಗಿಯೇ ನಡೆಸುತ್ತಿದ್ದಾರೆ.

ತಾನೇನೂ ಕಡಿಮೆಯಿಲ್ಲ ಎಂದಿರುವ ಕಾಂಗ್ರೆಸ್, ಟಿಕೆಟ್ ನೀಡಲೆಂದೇ ಸಮಿತಿ ರಚಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಸಮಿತಿಯ ಹೊಣೆ ಹೊತ್ತಿದ್ದಾರೆ. ತಮ್ಮ ತವರು ಜಿಲ್ಲೆಯ ವಿಧಾನಸಭಾ ಕ್ಷೇತ್ರವಾದ ಕಾರಣ ಖಂಡ್ರೆಗೆ ಪ್ರತಿಷ್ಠೆಯಾಗಿ ಪರಿಣಮಿಸಿದೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ರನ್ನು ಬಸವಕಲ್ಯಾಣಕ್ಕೆ ಕರೆಸುವಲ್ಲಿ ಖಂಡ್ರೆ ಯಶ ಕಂಡಿದ್ದಾರೆ.

ಅಭ್ಯರ್ಥಿಯನ್ನು ಕಣಕ್ಕಿಳಿಸುವುದಿಲ್ಲ ಎಂದು ಜೆಡಿಎಸ್ ಈಗಾಗಲೇ ಘೋಷಿಸಿದೆ. ಆದರೆ ಕೊನೆ ಘಳಿಗೆಯಲ್ಲಿ ಈ ನಿರ್ಧಾರ ಬದಲಾಗುವ ಎಲ್ಲ ಸಾಧ್ಯತೆಯಿದೆ. ಸ್ಥಳೀಯ ಜೆಡಿಎಸ್ ಮುಖಂಡ ಮಾಜಿ ಶಾಸಕ ಎಂ.ಜಿ ಮುಳೆ ಪಕ್ಷ ಅಭ್ಯರ್ಥಿ ಹಾಕದಿದ್ದರೂ ವರಿಷ್ಟರನ್ನು ಒಲಿಸಿ ಬಿ. ಫಾರಂ ತರುವುದಾಗಿ ಹೇಳಿದ್ದಾರೆ.

ಈವರೆಗೆ ಏಳು ಚುನಾವಣೆ ಎದುರಿಸಿರುವ ಎಂ.ಜಿ ಮುಳೆ, 1999ರಲ್ಲಿ ಒಮ್ಮೆ ಶಾಸಕರಾಗಿದ್ದರು. ನಂತರದ ಚುನಾವಣೆಗಳಲ್ಲಿ ಬಿಜೆಪಿಯೇತರ ಪಕ್ಷದಿಂದ ಸ್ಪರ್ಧಿಸಿ ಬಿಜೆಪಿಯ ವೋಟ್ ಬ್ಯಾಂಕ್​ನ್ನು ಸೆಳೆದಿದ್ದಾರೆ ಎಂದೇ ಕ್ಷೇತ್ರ ಬಲ್ಲವರು ಹೇಳುತ್ತಾರೆ. ಕಳೆದ ಬಾರಿ ಬಿ.ನಾರಾಯಣರಾವ್ ಗೆಲುವಿಗೆ ಜೆಡಿಎಸ್​‌ನ ಪಿಜಿಆರ್ ಸಿಂಧ್ಯಾ ಸ್ಪರ್ಧೆ ಮತ್ತು ಮುಳೆಯವರ ಬೆಂಬಲವೇ ಕಾರಣ ಎಂಬ ವಿಶ್ಲೇಷಣೆಗಳು ಕ್ಷೇತ್ರದಲ್ಲಿ ಹರಿದಾಡಿದ್ದವು.

-ಸುರೇಶ್ ನಾಯಕ್

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?