ಜಲ ಕ್ರೀಡೆ ತರಬೇತಿ; ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ಹಿನ್ನೀರಿನಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿವತಿಯಿಂದ ವಿದ್ಯಾರ್ಥಿಗಳಿಗೆ ಜಲಸಾಹಸ ತರಬೇತಿ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗದಿಂದ ಆಗಮಿಸಿದ್ದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಲಸಾಹಸ ತರಬೇತಿ ಪಡೆದರು.

ಜಲ ಕ್ರೀಡೆ ತರಬೇತಿ; ಚಿತ್ರದುರ್ಗ ವಿದ್ಯಾರ್ಥಿಗಳಿಗೆ ಸಾಥ್ ನೀಡಿದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ
ಜಲ ಕ್ರೀಡೆ ತರಬೇತಿ
Follow us
| Updated By: ganapathi bhat

Updated on: Apr 10, 2021 | 3:49 PM

ಚಿತ್ರದುರ್ಗ: ಬೇಸಿಗೆಗಾಲ ಬಂತು ಎಂದರೆ ಸಾಕು ನೀರಿಗಾಗಿ ಎಲ್ಲಿಲ್ಲದ ಹಾಹಾಕಾರ ಶುರುವಾಗುತ್ತದೆ. ಅದರಲ್ಲೂ ಬಯಲು ಸೀಮೆಯಂತಹ ಪ್ರದೇಶದಲ್ಲಿ ಜನರು ಕುಡಿಯುವ ನೀರಿಗಾಗಿ ಹರಸಾಹಸ ಪಡುವಂತಾಗಿದೆ. ಚಿತ್ರದುರ್ಗ ಜಿಲ್ಲೆ ಸದ್ಯ ಬಿರು ಬೇಸಿಗೆಯಿಂದ ಸುಡುತ್ತಿದೆ. ಆದರೆ ವಾಣಿ ವಿಲಾಸ ಸಾಗರ ಜಲಾಶಯದ ಪ್ರದೇಶದಲ್ಲಿ ಮಾತ್ರ ತಂಪಾದ ವಾತಾವರಣ ಸೃಷ್ಟಿಯಾಗಿದ್ದು, ವಿದ್ಯಾರ್ಥಿಗಳಿಗಾಗಿ ಜಲ ಕ್ರೀಡೆ ನಡೆಸಲಾಗಿದೆ.

ಸ್ವಿಮ್ಮಿಂಗ್, ರಾಫ್ಟಿಂಗ್, ಬೋಟಿಂಗ್ ಹೀಗೆ ವಿವಿಧ ಸ್ಪರ್ದೆಗಳನ್ನು ಮಕ್ಕಳಿಗಾಗಿ ಆಯೋಜಿಸಲಾಯಿತು. ಲೈಫ್ ಜಾಕೆಟ್ ತೊಟ್ಟು ನೀರಿಗೆ ಇಳಿದ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದರು. ಇನ್ನು ಅಡ್ವೆಂಚರ್ ಮತ್ತು ಕ್ರೀಡೆ ಪ್ರಿಯರಾದ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದು, ಮಕ್ಕಳಿಗೆ ಸಾಥ್ ನೀಡಿದರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ವಾಣಿ ವಿಲಾಸ ಸಾಗರ ಜಲಾಶಯದ ಹಿನ್ನೀರಿನಲ್ಲಿ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿವತಿಯಿಂದ ವಿದ್ಯಾರ್ಥಿಗಳಿಗೆ ಜಲಸಾಹಸ ತರಬೇತಿ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಭಾಗದಿಂದ ಆಗಮಿಸಿದ್ದ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಜಲಸಾಹಸ ತರಬೇತಿ ಪಡೆದರು. ಈ ವೇಳೆ ತರಬೇತಿ ಪಡೆದ ವಿದ್ಯಾರ್ಥಿ ರಮೇಶ್ ಪ್ರತಿಕ್ರಿಯಿಸಿದ್ದು, ಜಲಸಾಹಸ ಕ್ರೀಡೆ ಕಲಿತು ರಾಷ್ಟ್ರಮಟ್ಟದಲ್ಲಿ ಭಾಗಿಯಾಗುವ ಕನಸಿದೆ ಎಂದು ತಮ್ಮ ಆಸೆಯನ್ನು ಹಂಚಿಕೊಂಡಿದ್ದಾರೆ.

BasavaMurthy Madara chennayya swamiji

ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ

ಜಲ ಕ್ರೀಡೆಯಿಂದ ಫಿಟ್ ನೆಸ್ ಸಂಪಾದಿಸಬಹುದು. ವಿದ್ಯಾರ್ಥಿಗಳು ಈ ಜಲ ಕ್ರೀಡೆ ಮೂಲಕ ರಾಷ್ಟ್ರಮಟ್ಟಕ್ಕೆ ಹೋಗಬಹುದಾಗಿದೆ. ಈ ಭಾಗದ ಜನರು ಜಲ ಕ್ರೀಡೆ ತರಬೇತಿಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚಿತ್ರದುರ್ಗ ಮಾದಾರ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಸಾಗರದಲ್ಲಿ ಜಲಸಾಹಸ ಕ್ರೀಡೆ ತರಬೇತಿ ನಡೆಯುತ್ತಿದೆ. ಬಯಲುಸೀಮೆಯ ವಿದ್ಯಾರ್ಥಿಗಳು ಜಲ ಕ್ರೀಡೆಯಲ್ಲಿ ಭಾಗಿಯಾಗಿ ಮೈಚಳಿ ಬಿಟ್ಟು ಸಂತೋಷ ಪಡುತ್ತಾ ಕಲಿಕೆಯಲ್ಲಿ ತೊಡಗಿದ್ದಾರೆ. ಸದ್ಯ ವಾಣಿ ವಿಲಾಸ ಸಾಗರ ಜಲಾಶಯದಲ್ಲಿ ಹೆಚ್ಚಿನ ಪ್ರಮಾಣದ ನೀರಿದ್ದು, ಬರದನಾಡಿನ ಮಕ್ಕಳಿಗೂ ಜಲಸಾಹಸ ತರಬೇತಿ ಸುಲಭವಾಗಿ ಲಭಿಸುವಂತಾಗಿದೆ ಎನ್ನುವುದು ವಿಶೇಷ.

ಇದನ್ನೂ ಓದಿ:

ಕೊಪ್ಪಳದಲ್ಲಿ ಹಸಿರು ಮಾನವೀಯತೆ; ರಸ್ತೆ ಬದಿಯಲ್ಲಿ ಒಣಗಿ ಹೋಗುತ್ತಿದ್ದ ಗಿಡಗಳಿಗೆ ನೀರುಣಿಸಿದ ದ್ವಾರಕಾಮಯಿ ಟ್ರಸ್ಟ್ ಸದಸ್ಯರು

ಬೇಗೂರು: ಅಪಾರ್ಟ್ಮೆಂಟ್ ಬಳಿ ಆಟವಾಡ್ತಿದ್ದ ಬಾಲಕ ನೀರು ತುಂಬಿದ ​ಗುಂಡಿಗೆ ಬಿದ್ದು ಸಾವು

(BasavaMurthy Madara chennayya swamiji encourages water sports training in Chitradurga )

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್