AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಷ್ಕರ ಕೈಬಿಡಲು ಕೋಡಿಹಳ್ಳಿ ಚಂದ್ರಶೇಖರ್​ಗೆ ಬಸವರಾಜ ಬೊಮ್ಮಾಯಿ ಮನವಿ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡಾ ಕ್ವಾರಂಟೈನ್​ನಲ್ಲಿದ್ದಾರೆ. ಎಲ್ಲರ ಜೊತೆ ಚರ್ಚಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊವಿಡ್ ಹೆಚ್ಚಾಗುತ್ತಿದೆ ಮುಷ್ಕರ ಕೈಬಿಡಿ ಎಂದು ಅಫೀಲ್ ಮಾಡಿದ್ದಾರೆ. ಸಾರಿಗೆ ಸಚಿವರು ಎರಡು ದಿನದಲ್ಲಿ ಬರುತ್ತಾರೆ.

ಮುಷ್ಕರ ಕೈಬಿಡಲು ಕೋಡಿಹಳ್ಳಿ ಚಂದ್ರಶೇಖರ್​ಗೆ ಬಸವರಾಜ ಬೊಮ್ಮಾಯಿ ಮನವಿ
ಕೋಡಿಹಳ್ಳಿ ಚಂದ್ರಶೇಖರ್
sandhya thejappa
| Edited By: |

Updated on:Apr 19, 2021 | 1:01 PM

Share

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆ ಗೃಹ ಸಚಿವ ಬಸವರಾಜ ಬೊಮ್ಮಾಯಿಯನ್ನು ಕೋಡಿಹಳ್ಳಿ ಚಂದ್ರಶೇಖರ್ ಭೇಟಿ ಮಾಡಿದ್ದಾರೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆ ಮುಷ್ಕರ ಕೈಬಿಡಲು ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದರು.

ಸದ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಸ್ಪತ್ರೆಯಲ್ಲಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಕೂಡಾ ಕ್ವಾರಂಟೈನ್​ನಲ್ಲಿದ್ದಾರೆ. ಎಲ್ಲರ ಜೊತೆ ಚರ್ಚಿಸುವುದಾಗಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊವಿಡ್ ಹೆಚ್ಚಾಗುತ್ತಿದೆ ಮುಷ್ಕರ ಕೈಬಿಡಿ ಎಂದು ಅಫೀಲ್ ಮಾಡಿದ್ದಾರೆ. ಸಾರಿಗೆ ಸಚಿವರು ಎರಡು ದಿನದಲ್ಲಿ ಬರುತ್ತಾರೆ. ಅವರು ಬಂದ ಬಳಿಕ ಸಾರಿಗೆ ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

2004ರಲ್ಲಿ 20 ಶೇಕಡಾಕ್ಕೆ 6 ಶೇಕಡಾ ಬಡ್ಡಿ ಸೇರಿಸಿ ಕೊಡಬೇಕು ಅಂತಾ ಕೋರ್ಟ್ ಆದೇಶ ನೀಡಿದೆ. ಅದರ ಪ್ರಕಾರ ಹೋದರೆ 6ನೇ ವೇತನ ಆಯೋಗದಕ್ಕಿಂತ ಹೆಚ್ಚಾಗುತ್ತದೆ. ಸರ್ಕಾರ ಯಾವುದು ಆಯ್ಕೆ ಮಾಡಿಕೊಳ್ಳುತ್ತದೆಯೋ ಮಾಡಿಕೊಳ್ಳಲಿ. ಅದನ್ನ ಬಿಟ್ಟು ಅನಗತ್ಯ ಹೇಳಿಕೆ ನೀಡುವುದು ಔಚಿತ್ಯವಲ್ಲ. ಗೃಹ ಸಚಿವರು ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವರ ಹತ್ತಿರ ಮಾತನಾಡುತ್ತೀನಿ ಅಂತಾ ಹೇಳಿದ್ದಾರೆ. ಕಲ್ಲು ಹೊಡೆಯೋದು, ಹಿಂಸೆ ಮಾಡುವುದು ನಮ್ಮ ಸಂಸ್ಕೃತಿ ಅಲ್ಲ. ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಹೇಳಿದ್ದೇವೆ. ಹೋರಾಟ ಹಿಂತೆಗೆದುಕೊಳ್ಳೋಕೆ ಸರ್ಕಾರ ಬೇಗ ತೀರ್ಮಾನ ಮಾಡಲಿ ಎಂದು ತಿಳಿಸಿದರು.

ಇದನ್ನೂ ಓದಿ

ಹಾಸನ: ಬೆಂಗಳೂರಿನಿಂದ ಬಂದಿದ್ದ ಯುವತಿ ಕಿಲ್ಲರ್ ಕೊರೊನಾಗೆ ಬಲಿ, 3 ದಿನ ಐಸಿಯುನಲ್ಲಿದ್ದು ಪ್ರಾಣ ಬಿಟ್ಳು

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್​​ ಧರಿಸುವುದು ಕಡ್ಡಾಯವಲ್ಲ; ಅಚ್ಚರಿಯ ನಿಲುವು ತಳೆದ ಇಸ್ರೇಲ್​ ದೇಶ

(Basavaraj Bommai appeals to Kodihalli Chandrasekhar to withdraw strike)

Published On - 11:59 am, Mon, 19 April 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?