AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿ ಜನರ ಆಹವಾಲು ಆಲಿಸಿದರು. ಈ ವೇಳೆ ಬೊಮ್ಮಾಯಿ ಅವರು ಭಾವುಕ ಮಾತುಗಳನ್ನಾಡಿದ್ದಾರೆ.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Dec 19, 2023 | 5:40 PM

ಹಾವೇರಿ, (ಡಿಸೆಂಬರ್, 19): ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj bommai)  ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿದ್ದು, ಶಿಗ್ಗಾಂವಿಯಲ್ಲಿಂದು ಸಾರ್ವಜನಿಕರ ಅಹವಾಲು ಆಲಿಸಿದರು. ಇದೇ ವೇಳೆ ಮಾತನಾಡಿದ ಬೊಮ್ಮಾಯಿ, ಎರಡೂವರೆ ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಮಂಡಿ ನೋವಿನ ಸಮಸ್ಯೆಯಿಂದ ಆಪರೇಷನ್​ ಮಾಡಿಸಬೇಕಿತ್ತು. ಮೊದಲು ಹೃದಯ ತಪಾಸಣೆ ಮಾಡಿಸಿದಾಗ ಸ್ವಲ್ಪ ಸಮಸ್ಯೆಯಾಗಿತ್ತು. ಹಾಗಾಗಿ ಹೃದಯಕ್ಕೆ ತೊಂದರೆ ಆಗದಂತೆ ಸ್ಟಂಟ್ ಅಳವಡಿಸಲಾಗಿದೆ. ಹೃದಯ ಸಮಸ್ಯೆ ಇರುವುದು ನನಗೆ ಗೊತ್ತೇ ಇರಲಿಲ್ಲ ಎಂದು ಭಾವುಕರಾದರು.

ಮಂಡಿ ಆಪರೇಷನ್ ಮಾಡಿಸಲು ಹೋದಾಗ ಸಮಸ್ಯೆ ಗೊತ್ತಾಗಿದೆ. ಶಿಗ್ಗಾಂವಿ ಕ್ಷೇತ್ರದ ಜನರ ಅಶೀರ್ವಾದದಿಂದ ಬದುಕಿ ಬಂದಿದ್ದೇನೆ. ನಮ್ಮ ಕ್ಷೇತ್ರದ ಜನರ ಜೊತೆಗೆ ನನಗೆ ಅವಿನಾಭಾವ ಸಂಬಂಧವಿದೆ. ಒಂದೇ ಕುಟುಂಬ ಸದಸ್ಯರಾಗಿ ಜೀವನ ಮಾಡ್ತಿದ್ದೇವೆ. ನನ್ನ ಕೊನೆಯ ಉಸಿರು ಇರುವವರಿಗೆ ಹೀಗೆ ಮುಂದುವರೆಯುತ್ತೆ. ಮುಂದಿನ ಜನ್ಮ ಅಂತ ಇದ್ರೆ ಶಿಗ್ಗಾಂವಿ ಮತ್ತು ಸವಣೂರು ಮಣ್ಣಿನಲ್ಲಿ ಹುಟ್ಟುವ ಭಾಗ್ಯ ಬರಲಿ. ಈ ಜ‌ನರ ನಡುವೆ ಬೆರೆತು ಬದುಕು ಕಟ್ಟಿಕೊಳ್ಳುವ ಅವಕಾಶ ಸಿಗಲಿ. ನಾವು ಮಾತನಾಡಬಾರದು, ನಮ್ಮ ಕೆಲಸಗಳು ಮಾತನಾಡಬೇಕು. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನ ಮಾಡಿದ್ದೇವೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಇದನ್ನೂ ಓದಿ: ದೂರವಾಣಿ ಮೂಲಕ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬಸವರಾಜ ಬೊಮ್ಮಾಯಿ ಅವರು  ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಆಪರೇಷನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋಗಿದ್ದರು. ಆ ವೇಳೆ ಹೃಯದ ಸಮಸ್ಯೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ ಬದಲಾಗಿ ಅವರಿಗೆ ಮೊದಲು ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Tue, 19 December 23

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ