AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿ ಜನರ ಆಹವಾಲು ಆಲಿಸಿದರು. ಈ ವೇಳೆ ಬೊಮ್ಮಾಯಿ ಅವರು ಭಾವುಕ ಮಾತುಗಳನ್ನಾಡಿದ್ದಾರೆ.

ಮಂಡಿ ಚಿಕಿತ್ಸೆಗೆಂದು ಹೋದರೆ ಹೃದಯ ಶಸ್ತ್ರ ಚಿಕಿತ್ಸೆ​ ಮಾಡಿಸಿಕೊಳ್ಳಬೇಕಾಯ್ತು: ಬೊಮ್ಮಾಯಿ ಭಾವುಕ
TV9 Web
| Edited By: |

Updated on:Dec 19, 2023 | 5:40 PM

Share

ಹಾವೇರಿ, (ಡಿಸೆಂಬರ್, 19): ಹೃದಯ ಶಸ್ತ್ರ ಚಿಕಿತ್ಸೆಗೊಳಗಾಗಿದ್ದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj bommai)  ಅವರು ಎರಡೂವರೆ ತಿಂಗಳುಗಳ ಬಳಿಕ ಕ್ಷೇತ್ರಕ್ಕೆ ಆಗಮಿಸಿದ್ದು, ಶಿಗ್ಗಾಂವಿಯಲ್ಲಿಂದು ಸಾರ್ವಜನಿಕರ ಅಹವಾಲು ಆಲಿಸಿದರು. ಇದೇ ವೇಳೆ ಮಾತನಾಡಿದ ಬೊಮ್ಮಾಯಿ, ಎರಡೂವರೆ ತಿಂಗಳ ಹಿಂದೆ ಹೃದಯ ಶಸ್ತ್ರಚಿಕಿತ್ಸೆ ಆಗಿದೆ. ಮಂಡಿ ನೋವಿನ ಸಮಸ್ಯೆಯಿಂದ ಆಪರೇಷನ್​ ಮಾಡಿಸಬೇಕಿತ್ತು. ಮೊದಲು ಹೃದಯ ತಪಾಸಣೆ ಮಾಡಿಸಿದಾಗ ಸ್ವಲ್ಪ ಸಮಸ್ಯೆಯಾಗಿತ್ತು. ಹಾಗಾಗಿ ಹೃದಯಕ್ಕೆ ತೊಂದರೆ ಆಗದಂತೆ ಸ್ಟಂಟ್ ಅಳವಡಿಸಲಾಗಿದೆ. ಹೃದಯ ಸಮಸ್ಯೆ ಇರುವುದು ನನಗೆ ಗೊತ್ತೇ ಇರಲಿಲ್ಲ ಎಂದು ಭಾವುಕರಾದರು.

ಮಂಡಿ ಆಪರೇಷನ್ ಮಾಡಿಸಲು ಹೋದಾಗ ಸಮಸ್ಯೆ ಗೊತ್ತಾಗಿದೆ. ಶಿಗ್ಗಾಂವಿ ಕ್ಷೇತ್ರದ ಜನರ ಅಶೀರ್ವಾದದಿಂದ ಬದುಕಿ ಬಂದಿದ್ದೇನೆ. ನಮ್ಮ ಕ್ಷೇತ್ರದ ಜನರ ಜೊತೆಗೆ ನನಗೆ ಅವಿನಾಭಾವ ಸಂಬಂಧವಿದೆ. ಒಂದೇ ಕುಟುಂಬ ಸದಸ್ಯರಾಗಿ ಜೀವನ ಮಾಡ್ತಿದ್ದೇವೆ. ನನ್ನ ಕೊನೆಯ ಉಸಿರು ಇರುವವರಿಗೆ ಹೀಗೆ ಮುಂದುವರೆಯುತ್ತೆ. ಮುಂದಿನ ಜನ್ಮ ಅಂತ ಇದ್ರೆ ಶಿಗ್ಗಾಂವಿ ಮತ್ತು ಸವಣೂರು ಮಣ್ಣಿನಲ್ಲಿ ಹುಟ್ಟುವ ಭಾಗ್ಯ ಬರಲಿ. ಈ ಜ‌ನರ ನಡುವೆ ಬೆರೆತು ಬದುಕು ಕಟ್ಟಿಕೊಳ್ಳುವ ಅವಕಾಶ ಸಿಗಲಿ. ನಾವು ಮಾತನಾಡಬಾರದು, ನಮ್ಮ ಕೆಲಸಗಳು ಮಾತನಾಡಬೇಕು. ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನ ಮಾಡಿದ್ದೇವೆ ಎಂದು ಭಾವನಾತ್ಮಕವಾಗಿ ಮಾತನಾಡಿದರು.

ಇದನ್ನೂ ಓದಿ: ದೂರವಾಣಿ ಮೂಲಕ ಬಸವರಾಜ ಬೊಮ್ಮಾಯಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ಬಸವರಾಜ ಬೊಮ್ಮಾಯಿ ಅವರು  ಹಲವು ವರ್ಷಗಳಿಂದ ಮಂಡಿ ನೋವಿನಿಂದ ಬಳಲುತ್ತಿದ್ದಾರೆ. ಇದಕ್ಕಾಗಿ ಆಪರೇಷನ್ ಮಾಡಿಸಿಕೊಳ್ಳಲು ಆಸ್ಪತ್ರೆಗೆ ಹೋಗಿದ್ದರು. ಆ ವೇಳೆ ಹೃಯದ ಸಮಸ್ಯೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಂಡಿ ಶಸ್ತ್ರ ಚಿಕಿತ್ಸೆ ಬದಲಾಗಿ ಅವರಿಗೆ ಮೊದಲು ಹೃದಯ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:39 pm, Tue, 19 December 23

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ