AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್​ನ್ಯೂಸ್: ಸಹಾಯಧನ 1000 ರೂ.ಗೆ ಹೆಚ್ಚಳ, ಸದನದಲ್ಲಿ ಬೊಮ್ಮಾಯಿ ಘೋಷಣೆ

ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಘೋಷಿಸಿದ್ದ ಸಹಾಯಧನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಚ್ಚಿಸಿದ್ದಾರೆ. ಬಜೆಟ್​ ಮೇಲೆ ಉತ್ತರ ನೀಡುವಾಗ ಆದೇಶ ಹೊರಡಿಸಿದ್ದಾರೆ.

ಮಹಿಳಾ ಕೃಷಿ ಕಾರ್ಮಿಕರಿಗೆ ಗುಡ್​ನ್ಯೂಸ್: ಸಹಾಯಧನ 1000 ರೂ.ಗೆ ಹೆಚ್ಚಳ, ಸದನದಲ್ಲಿ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
ರಮೇಶ್ ಬಿ. ಜವಳಗೇರಾ
|

Updated on:Feb 23, 2023 | 6:09 PM

Share

ಬೆಂಗಳೂರು: ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ (Landless Female Farm Workers) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಸಿಹಿ ಸುದ್ದಿ ನೀಡಿದ್ದಾರೆ. ಮೊನ್ನೇ ಅಷ್ಟೇ 2023-24ನೇ ಸಾಲಿನ ಬಜೆಟ್‌ನಲ್ಲಿ ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ ಪ್ರತಿ ತಿಂಗಳು 500 ರೂ. ಸಹಾಯಧನ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಣೆ ಮಾಡಿದ್ದರು. ಅದ್ರೆ, ಇಂದು(ಫೆಬ್ರುವರಿ 23) ಸದನದಲ್ಲಿ ಬೊಮ್ಮಾಯಿ ಸಹಾಯಧನವನ್ನು 1000 ರೂ. ನೀಡುವುದಾಗಿ ಘೋಷಿಸಿದರು.

ಇಂದು (ಫೆಬ್ರುವರಿ 23) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮೇಲಿನ ಉತ್ತರ ವೇಳೆ ನೀಡುವ ವೇಳೆ ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ ನೀಡುವುದಾಗಿ ಘೋಷಣೆ ಮಾಡಿದರು. ಈ ಮೂಲಕ ಬಜೆಟ್ ನಲ್ಲಿ ಘೋಷಿಸಿದ್ದ 500 ರೂ. ಗಳನ್ನು 1000 ರೂ. ಗೆ ಏರಿಕೆಯಾಗಿದೆ.

ವಿದ್ಯಾವಾಹಿನಿ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಬಸ್ ಪಾಸ್ ನೀಡುತ್ತಿದ್ದೇವೆ. ಉಚಿತ ಶಿಕ್ಷಣ ಎಸ್​ಎಸ್​​ಎಲ್​ಸಿಯಿಂದ ಡಿಗ್ರಿವರೆಗೆ ವಿಸ್ತರಿಸಿದ್ದೇವೆ. ಇದು ಐತಿಹಾಸಿಕ ನಿರ್ಧಾರವಾಗಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಸಮಸ್ಯೆ ಬಗೆಹರಿಸಲು ಶೆಡ್ಯೂಲ್ ಹೆಚ್ಚಿಸಲಾಗಿದೆ. 1 ಸಾವಿರ ಘೋಷಿಸಿದ್ದ ಬಸ್​​ಗಳ ಶೆಡ್ಯೂಲ್ 2 ಸಾವಿರಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಜೆಟ್ ಮೇಲಿನ ಉತ್ತರ ವೇಳೆ ಸಿಎಂ ಬೊಮ್ಮಾಯಿ ಘೋಷಿಸಿದರು.

ನಾವು ಮಂಡಿಸಿರುವ ಬಜೆಟ್ ಕಾರ್ಯಕ್ರಮ ಎರಡು ರೀತಿ ಇದೆ. ಆರ್ಥಿಕ ಅಭಿವೃದ್ಧಿ, ಸಾಮಾಜಿಕ ಮೂಲಸೌಕರ್ಯ ಸರಿದೂಗಿಸಿಕೊಳ್ಳಬೇಕು. ಸರಿದೂಗಿಸಿಕೊಂಡು ಹೋದ್ರೆ ಮಾತ್ರ ಕರ್ನಾಟಕ ಕಲ್ಯಾಣ ಆಗಲಿದೆ. ಕೃಷಿ ಕ್ಷೇತ್ರ ನಂಬಿಕೊಂಡು 60% ಜನ ಇದ್ದಾರೆ. 130 ಕೋಟಿ ಜನಸಂಖ್ಯೆಗೂ ಆಹಾರ ನೀಡುವ ಶಕ್ತಿ ನಮಗಿದೆ. ಆಹಾರ ಕೊಡುವ ರೈತನಿಗೆ ಶಕ್ತಿ ತುಂಬುವ ಪಾಲಿಸಿ ಬರಬೇಕಿದೆ. ಆಗ ಮಾತ್ರ ಕೃಷಿ ಕ್ಷೇತ್ರ ಸದೃಢವಾಗಿರಲಿದೆ ಎಂದು ಹೇಳಿದರು.

ರೈತನ ಆರೋಗ್ಯ ದೃಷ್ಟಿಯಿಂದ ಯಶಸ್ವಿನಿ ಯೋಜನೆ ತರಲಾಗಿದೆ. ಸಾಲದ ವ್ಯಾಪ್ತಿ ಮಿತಿ 3 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ, 5 ಲಕ್ಷದವರೆಗೂ 0% ಬಡ್ಡಿ ಸಾಲ ನೀಡಲಾಗುತ್ತಿದೆ. ಭೂಸಿರಿ ಯೋಜನೆಯಡಿ ಸರ್ಕಾರದಿಂದ 2,500 ಹಣ ವಿತರಣೆ ಹಾಗೂ ನಬಾರ್ಡ್​​ನಿಂದ 7,500 ರೂ. ಕೊಡಲಾಗುವುದು ಎಂದು ತಿಳಿಸಿದರು.

Published On - 6:02 pm, Thu, 23 February 23

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?