AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಪತ್ತು ಸ್ಪಂದನಾ ಪಡೆ ಬಲ ಹೆಚ್ಚಳಕ್ಕೆ ಆದ್ಯತೆ, ಪ್ರಸಕ್ತ ವರ್ಷ 15 ಕೋಟಿ ನೆರವು: ಬಸವರಾಜ ಬೊಮ್ಮಾಯಿ ಘೋಷಣೆ

ತೌಕ್ತೆ ಚಂಡಮಾರುತಕ್ಕೆ ಉಡುಪಿ ಜಿಲ್ಲೆಯ 34 ಮನೆಗಳು ತುತ್ತಾಗಿವೆ. ಸುರತ್ಕಲ್ ಬಳಿ ಸಮುದ್ರದಲ್ಲಿ 8 ಜನ ಚಂಡಮಾರುತಕ್ಕೆ ಸಿಲುಕಿ ಕಾಣೆಯಾಗಿದ್ದರು. ಒಟ್ಟು 1 ಸಾವಿರ ಅನುಭವಿ ಸಿಬ್ಬಂದಿ ಚಂಡಮಾರುತ ಎದುರಿಸಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ವಿಪತ್ತು ಸ್ಪಂದನಾ ಪಡೆ ಬಲ ಹೆಚ್ಚಳಕ್ಕೆ ಆದ್ಯತೆ, ಪ್ರಸಕ್ತ ವರ್ಷ 15 ಕೋಟಿ ನೆರವು: ಬಸವರಾಜ ಬೊಮ್ಮಾಯಿ ಘೋಷಣೆ
ಬಸವರಾಜ ಬೊಮ್ಮಾಯಿ
TV9 Web
| Updated By: ganapathi bhat|

Updated on:Aug 23, 2021 | 12:30 PM

Share

ಬೆಂಗಳೂರು: ಕರ್ನಾಟಕ ರಾಜ್ಯ ವಿಪತ್ತು ಸ್ಪಂದನಾ ಪಡೆಯ ಬಲವನ್ನು ಹೆಚ್ಚಿಸಲಾಗುವುದು. ಪ್ರಸಕ್ತ ವರ್ಷದಲ್ಲಿ 15 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ವಾಹನ, ಅತ್ಯಾಧುನಿಕ ಉಪಕರಣ ಖರೀದಿಯ ಜೊತೆಗೆ ರಾಜ್ಯದ ಎರಡು ಕಡೆ ಎಸ್​ಡಿಆರ್​ಎಫ್ ತಂಡದ ಕಚೇರಿಯನ್ನು ಸ್ಥಾಪಿಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಹಾಗೂ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ತಿಳಿಸಿದರು.

ರಾಜ್ಯ ಅಗ್ನಿಶಾಮಕ ತುರ್ತು ಸೇವೆ ಗೃಹರಕ್ಷಕ ಪೌರರಕ್ಷಣೆ ಎಸ್​ಡಿಆರ್​ಎಫ್ ನಿರ್ದೇಶನಾಲಯ ಬೆಂಗಳೂರಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಕೋಟಿ ರೂಪಾಯಿ ವೆಚ್ಚದಲ್ಲಿ ಖರೀದಿಸಲಾದ ಅತ್ಯಾಧುನಿಕ ರಕ್ಷಣಾ ಉಪಕರಣಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.

ರಾಜ್ಯ ಸರ್ಕಾರ ಎಸ್​ಡಿಆರ್​ಎಫ್​ಗೆ ಬಲ ನೀಡುವ ಕೆಲಸವನ್ನು ಮುಂದುವರಿಸುತ್ತದೆ. ಕಳೆದ ವರ್ಷ 100 ಜನ ನಿವೃತ್ತ ಸೇನಾ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರಸಕ್ತ ವರ್ಷ ಮತ್ತೆ ನೂರು ಜನ ನಿವೃತ್ತ ಮಿಲಿಟರಿ ಸಿಬ್ಬಂದಿಯನ್ನು ನೇಮಕ ಮಾಡುವಂತೆ ಆದೇಶಿಸಲಾಗಿದೆ. ದಾವಣಗೆರೆ, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ನಡುವೆ 2 ಎಸ್​ಡಿಆರ್​ಎಫ್ ಕಚೇರಿಗಳನ್ನು ನಿರ್ಮಾಣ ಮಾಡಲಾಗುವುದು. ಬೆಳಗಾವಿಯಲ್ಲಿ ಇತ್ತೀಚೆಗೆ ಪದೇಪದೇ ಪ್ರವಾಹ ಉಂಟಾಗುತ್ತದೆ. ಅದನ್ನು ನಿವಾರಣೆ ಮಾಡಲು ಎಸ್​ಡಿಆರ್​ಎಫ್ ಪೂರ್ಣಪ್ರಮಾಣದ ತಂಡ ಆ ಭಾಗದಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು.

ಪ್ರಕೃತಿ ವಿಕೋಪ ಎದುರಿಸಲು ಅತ್ಯಾಧುನಿಕ ಉಪಕರಣಗಳನ್ನು ಖರೀದಿಸಲು ಆರ್ಥಿಕ ನೆರವು ನೀಡಲಾಗಿತ್ತು. ಅದರಡಿ ಅತ್ಯಾಧುನಿಕ ಉಪಕರಣಗಳನ್ನು ಹಾಗೂ ವಾಹನಗಳನ್ನು ಖರೀದಿ ಮಾಡಲಾಗಿದೆ. ಅದೇ ರೀತಿ ಈ ವರ್ಷ ಕೂಡ 15 ಕೋಟಿ ರೂಪಾಯಿ ಅನುದಾನ ನೀಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ತೌಕ್ತೆ ಚಂಡಮಾರುತಕ್ಕೆ ಉಡುಪಿ ಜಿಲ್ಲೆಯ 34 ಮನೆಗಳು ತುತ್ತಾಗಿವೆ. ಸುರತ್ಕಲ್ ಬಳಿ ಸಮುದ್ರದಲ್ಲಿ 8 ಜನ ಚಂಡಮಾರುತಕ್ಕೆ ಸಿಲುಕಿ ಕಾಣೆಯಾಗಿದ್ದರು. ಒಟ್ಟು 1 ಸಾವಿರ ಅನುಭವಿ ಸಿಬ್ಬಂದಿ ಚಂಡಮಾರುತ ಎದುರಿಸಲು ಸಜ್ಜಾಗಿದ್ದಾರೆ ಎಂದು ಅವರು ಹೇಳಿದರು.

ಪ್ರಕೃತಿ ವಿಕೋಪ ಎದುರಿಸಲು ಬೇಕಾಗುವ ಬೇಸಿಕ್ ಟೂಲ್ ಬಾಕ್ಸ್, ಹೈವೋಲ್ಟೇಜ್ ಸೇಫ್ಟಿ ರಾಡ್, ಪೋರ್ಟೆಬಲ್ ಸ್ಟೇಚರ್, ಸ್ಕೂಬಾ ಡೈವಿಂಗ್ ಸೂಟ್, ಅಂಡರ್ ವಾಟರ್ ಟಾರ್ಚ್, ವುಡ್ ಕಟಿಂಗ್ ಮಷೀನ್, ಕಾಂಕ್ರೀಟ್ ಕಟಿಂಗ್ ಮಷೀನ್, ಪ್ಲಾಸ್ಮ ಕಟರ್, ಹೈಡ್ರಾಲಿಕ್ ಹೆವಿವೇಟ್ ಚಿಪ್ಪಿಂಗ್ ಹಮ್ಮರ್, ಲಾರಿ ಸಡೆರಿದಂತೆ ಇತರೆ ಉಪಕರಣಗಳನ್ನು ಇಂದು ವಿಪತ್ತು ಕಾರ್ಯಾಚರಣೆಗೆ ಮುಕ್ತಗೊಳಿಸಲಾಯಿತು.

ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ನಿರ್ದೇಶನಾಲಯದ ನಿರ್ದೇಶಕ ಅಮರ್ ಕುಮಾರ್ ಪಾಂಡೆ, ಎಡಿಜಿಪಿ ಸುಣಿಲ್ ಅಗರ್ವಾಲ್, ಎಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಉಡುಪಿಯಲ್ಲಿ ತೌಕ್ತೆ ಚಂಡಮಾರುತ ಅಬ್ಬರ; 40 ಮನೆಗಳಿಗೆ ಹಾನಿ

Cyclone Tauktae Photos: ತೌಕ್ತೆ ಚಂಡಮಾರುತದ ಪ್ರತಾಪ; ಇಲ್ಲಿದೆ ಚಂಡಮಾರುತದ ಇಂದಿನ ಚಿತ್ರಣ

Published On - 3:47 pm, Sun, 16 May 21