AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ವೇಳೆ ಕ್ರೈಂ ರೇಟ್ ಕಡಿಮೆಯಾಗಿತ್ತು, ಲಾಕ್​ಡೌನ್​ ತೆರವು ಬಳಿಕ ಜಾಸ್ತಿಯಾಗ್ತಿದೆ: ಗೃಹ ಸಚಿವ ಬಸರಾಜ ಬೊಮ್ಮಾಯಿ ಆತಂಕ

ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಚಾಲೆಂಜ್ ನಮಗಿದೆ. 50 ಕೋಟಿ ಅಷ್ಟು ಡ್ರಗ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ. ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್​ನಲ್ಲಿ ಬರುತ್ತಿವೆ. ಬಹಳ ಸೆಕ್ಯುರಿಟಿನಲ್ಲಿ ಬರುತ್ತಿದೆ.

ಕೊವಿಡ್ ವೇಳೆ ಕ್ರೈಂ ರೇಟ್ ಕಡಿಮೆಯಾಗಿತ್ತು, ಲಾಕ್​ಡೌನ್​ ತೆರವು ಬಳಿಕ ಜಾಸ್ತಿಯಾಗ್ತಿದೆ: ಗೃಹ ಸಚಿವ ಬಸರಾಜ ಬೊಮ್ಮಾಯಿ ಆತಂಕ
ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Jul 14, 2021 | 3:07 PM

Share

ಮೈಸೂರು: ಕೊರೊನಾ ಸಮಯದಲ್ಲಿ ಕ್ರೈಂ ರೇಟ್ ಕಡಿಮೆಯಾಗಿತ್ತು. ಲಾಕ್​ಡೌನ್ (Lockdown)​ ತೆರವು ಬಳಿಕ ಜಾಸ್ತಿಯಾಗುತ್ತಿದೆ ಎಂದು ಹೇಳಿಕೆ ನೀಡಿದ ಗೃಹ ಸಚಿವ ಬಸರಾಜ ಬೊಮ್ಮಾಯಿ, ಸರಗಳ್ಳತನ, ದರೋಡೆಯಂತಹ ಪ್ರಕರಣಗಳು ಲಾಕ್​ಡೌನ್​ ಮುಗಿದ ಬಳಿಕ ಕಂಡುಬರುತ್ತಿದೆ. ಮೈಸೂರು ನಗರದಲ್ಲಿ ಸರಗಳ್ಳತನ ಇತ್ತು, ಆದರೆ ಈಗ ಗ್ರಾಮೀಣ ಭಾಗದಲ್ಲೂ ಸರಗಳ್ಳತನ ಹೆಚ್ಚಾಗಿದೆ ಎಂದು ಹೇಳಿದರು.

ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಚಾಲೆಂಜ್ ನಮಗಿದೆ. 50 ಕೋಟಿ ಅಷ್ಟು ಡ್ರಗ್ ನಾಶ ಮಾಡಿದ್ದೇವೆ. 5 ವರ್ಷದಷ್ಟು ಡ್ರಗ್ ಕೇವಲ ಒಂದೇ ವರ್ಷದಲ್ಲಿ ಸಂಗ್ರಹವಾಗಿದೆ. ಸಿಂಥೆಟಿಕ್ ಡ್ರಗ್ಸ್ ತಡೆಗಟ್ಟುವ ಕೆಲಸವಾಗುತ್ತಿದೆ. ಡ್ರಗ್ಸ್ ವಿದೇಶದಿಂದ ಡಾರ್ಕ್ ವೆಬ್​ನಲ್ಲಿ ಬರುತ್ತಿವೆ. ಬಹಳ ಸೆಕ್ಯುರಿಟಿನಲ್ಲಿ ಬರುತ್ತಿದೆ. ಇದನ್ನ ಕರ್ನಾಟಕ ಪೊಲೀಸರು ಯಶಸ್ವಿಯಾಗಿ ಹಿಮ್ಮೆಟ್ಟಿದ್ದಾರೆ ಎಂದು ಸಚಿವರು ಅಭಿಪ್ರಾಯಪಟ್ಟರು.

ಬಹಳಷ್ಟು ಸಾರಿ ಸಾಮಾನ್ಯ ಪೋಸ್ಟ್​ನಲ್ಲಿ ಡ್ರಗ್ಸ್ ಸರಬರಾಜಾಗುತ್ತದೆ. ಡ್ರಗ್ ಕೇಸ್​ಗೆ ಸಂಬಂಧಿಸಿ ವಿದೇಶಿಗರ ಬಂಧನವಾಗಿದೆ. ಕಳೆದ ವರ್ಷದಲ್ಲಿ 15ರಿಂದ 20 ಮಂದಿ ಬಂಧನವಾಗಿದೆ. ಈ ಪೈಕಿ ಆಫ್ರಿಕನ್ಸ್ ಹೆಚ್ಚಿದ್ದಾರೆ ಎಂದು ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಬಸರಾಜ ಬೊಮ್ಮಾಯಿ ತಿಳಿಸಿದರು. ಇನ್ನು ಮುಖ್ಯಮಂತ್ರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ನಾನು ಸಿಎಂ ಹುದ್ದೆ ರೇಸ್​ನಲಿಲ್ಲ. ನಾನು ಈಗ ಗೃಹ ಸಚಿವನಾಗಿದ್ದೇನೆ. ಇದರಲ್ಲೇ ಇರುತ್ತೇನೆ, ಇಷ್ಟೇ ಸಾಕು ನನಗೆ ಎಂದು ಹೇಳಿದ್ದಾರೆ.

ಕೊರೊನಾ ನಿಯಂತ್ರಣ ವೇಳೆಯಲ್ಲಿ ಪೊಲೀಸರು ಉತ್ತಮ ಕೆಲಸ ನಿರ್ವಹಿಸುತ್ತಿದ್ದಾರೆ. ಈ ಪೈಕಿ 3ರಿಂದ 4 ಸಾವಿರ ಮಂದಿ ಪೊಲೀಸರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಎಲ್ಲರ ಆರೋಗ್ಯದ ಕಡೆಗೂ ಗಮನವಹಿಸಲಾಗುತ್ತಿದೆ. ಸಾವಿನ ಸಂಖ್ಯೆ ಕಡಿಮೆ ಇದೆ. ಸೋಂಕಿನಿಂದ ಮೃತಪಟ್ಟವರ ಕುಟುಂಬಕ್ಕೆ 30ಲಕ್ಷ ಪರಿಹಾರ ನೀಡಲಾಗುತ್ತಿದೆ ಎಂದು ಮಾತನಾಡಿದ ಗೃಹ ಸಚಿವ, ಪೊಲೀಸ್ ಇಲಾಖೆಯಲ್ಲಿ ವರ್ಗಾವಣೆಗೆ ಲಂಚ ಪಡೆಯುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಕೆಲಸಕ್ಕೆಲ್ಲ ಕಡಿವಾಣ ಹಾಕಲಾಗುತ್ತಿದೆ. ಇದು ಹಳೆಯ ಪದ್ಧತಿ, ಆದರೆ ಇದಕ್ಕೆ ನಮ್ಮ ಸರ್ಕಾರ ಕಡಿವಾಣ ಹಾಕಿದೆ. ಪೊಲೀಸ್ ಬೋರ್ಡ್ ಬಂದ ಮೇಲೆ ಹಳೆಯ ಮಾದರಿಯ ವರ್ಗಾವಣೆಯಲ್ಲಿ ವ್ಯವಹಾರ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ

ನವ್ಯಾ ನವೇಲಿ ನಂದಾಗೆ ಶನಾಯ ಕಪೂರ್ ಅವರ ಬೆಲ್ಲಿ ಡ್ಯಾನ್ಸ್ ವಿಡಿಯೋ ನೋಡಿ “ಹೊಟ್ಟೆ ನೋವು” ಬಂದದ್ದು ಯಾಕೆ?

ಜುಲೈ 19ರ ನಂತರವಾದರೂ ಪಬ್ ತೆರೆಯಲು ಅನುಮತಿ ನೀಡಿ; ರಾಜ್ಯ ಸರ್ಕಾರಕ್ಕೆ ಬಾರ್ ಆ್ಯಂಡ್ ಪಬ್ ಅಸೋಸಿಯೇಷನ್ ಮನವಿ

(Basavaraj Bommai says Crime rate is low in covid time but now increasing the Crime rate)

Published On - 11:39 am, Wed, 14 July 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?