AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್

ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ ಹೋರಾಟಗಾರರು ಹಾಗೂ ಬ್ರಿಟಿಷರ ವಿರುದ್ಧ ಅವರು ಹೋರಾಟ ಮಾಡಿದವರು. ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು.

ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ; ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
TV9 Web
| Edited By: sandhya thejappa|

Updated on:Dec 19, 2021 | 9:26 AM

Share

ಬೆಂಗಳೂರು: ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ ಪುಂಡರ ಅಟ್ಟಹಾಸಕ್ಕೆ ಇಡೀ ಕರುನಾಡಿನ ಜನರು ಕೆಂಡಾಮಂಡಲರಾಗಿದ್ದಾರೆ. ಎಂಇಎಸ್ ಪುಂಡರಿಗೆ ತಕ್ಕ ಶಿಕ್ಷೆ ಆಗಲೇಬೇಕು ಅಂತ ಸರ್ಕಾರಕ್ಕೆ ಒತ್ತಾಯಿಸುತ್ತಿದ್ದಾರೆ. ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai), ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಅವರ ಹೋರಾಟಕ್ಕೆ ಮತ್ತು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ. ಯಾರೇ ಆಗಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಸರಿಯಲ್ಲ ಅಂತ ಅಭಿಪ್ರಾಯಪಟ್ಟಿದ್ದಾರೆ.

ಛತ್ರಪತಿ ಶಿವಾಜಿ ಮಹಾರಾಜ, ಕಿತ್ತೂರು ರಾಣಿ ಚೆನ್ನಮ್ಮ, ವೀರ ಸಂಗೊಳ್ಳಿ ರಾಯಣ್ಣ ಅವರು ದೇಶದ ಸ್ವಾತಂತ್ರ ಹೋರಾಟಗಾರರು ಹಾಗೂ ಬ್ರಿಟಿಷರ ವಿರುದ್ಧ ಅವರು ಹೋರಾಟ ಮಾಡಿದವರು. ನಮಗೆ ಸ್ವಾತಂತ್ರ್ಯ ತಂದುಕೊಟ್ಟವರು. ಅಲ್ಲದೆ ದೇಶವನ್ನು ಒಗ್ಗೂಡಿಸಿದವರು. ಅಂತಹ ಮಹಾನ್ ನಾಯಕರ ಹೆಸರಿನಲ್ಲಿ ಬಡಿದಾದುವುದು ಅವರ ಹೋರಾಟಕ್ಕೆ ಮತ್ತು ಭಾರತದ ಸ್ವಾತಂತ್ರ ಸಂಗ್ರಾಮಕ್ಕೆ ಅನ್ಯಾಯ ಮಾಡಿದಂತೆ. ಯಾರೇ ಆಗಲಿ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುವುದು ಸರಿಯಲ್ಲ. ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಲು ಅವಕಾಶ ನೀಡುವುದಿಲ್ಲ ಅಂತ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಹಾರಾಜರು ಮತ್ತು ಸಂಗೊಳ್ಳಿ ರಾಯಣ್ಣ ಇಬ್ಬರೂ ಸ್ವಾತಂತ್ರ್ಯ ಹೋರಾಟಗಾರರು ಮತ್ತು ನಮ್ಮ ಆರಾಧ್ಯ ದೈವಗಳು. ನಾನು ಅವರನ್ನು ಗೌರವಿಸುತ್ತೇನೆ ಮತ್ತು ಅನುಸರಿಸುತ್ತೇನೆ. ಕೆಲವು ಸಮಾಜವಿರೋಧಿಗಳು ಗಲಭೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ. ಭಾಷೆ ಮತ್ತು ಇತರ ವಿಷಯಗಳಲ್ಲಿ ಜನರನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಎಎನ್ಐಗೆ ಹೇಳಿಕೆ ನೀಡಿದ್ದಾರೆ.

ಗೃಹ ಸಚಿವರಿಗೆ ಸಿಎಂ ಸೂಚನೆ ಎಂಇಎಸ್ ಪುಂಡರ ಅಟ್ಟಹಾಸ ಪ್ರಕರಣಕ್ಕೆ ಸಂಬಂಧಿಸಿ ಗೃಹ ಸಚಿವರಿಗೆ ಸಿಎಂ ಬೊಮ್ಮಾಯಿ ಸಭೆ ನಡೆಸುವಂತೆ ಸೂಚನೆ ನೀಡಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಜತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ. ಡಿಜಿ ಮತ್ತು ಐಜಿಪಿ, ಬೆಂಗಳೂರು ನಗರ ಪೊಲೀಸ್ ಆಯುಕ್ತರು, ಬೆಳಗಾವಿ ಐಜಿಪಿ, ಬೆಳಗಾವಿ ಪೊಲೀಸ್ ಆಯುಕ್ತರ ಜೊತೆ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ

Poetry : ಅವಿತಕವಿತೆ : ನಾವೂ ದೇವರ ಹೂರೂಪ ಎಂಬುದ ಮರೆತು, ಮುಳ್ಳನ್ನೂ ಮುಚ್ಚಿಟ್ಟುಕೊಳ್ಳುತ್ತೇವೆ

ಎಸ್​ಡಿಪಿಐ ನಾಯಕನ ಕೊಲೆ ಬೆನ್ನಲ್ಲೇ ಕೇರಳದ ಬಿಜೆಪಿ ನಾಯಕನ ಕತ್ತು ಕೊಯ್ದು ಬರ್ಬರ ಹತ್ಯೆ

Published On - 9:21 am, Sun, 19 December 21

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!