AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನಿವಾಸ ಹಂಚಿಕೆ ಮಾಡದಿದ್ದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗರಂ

Basavaraj Horatti: ಮನೆ ಹಂಚಿಕೆ ಮಾಡಲು ನಾನು, ಸ್ಪೀಕರ್‌ ಪತ್ರ ಬರೆದಿದ್ದೇವೆ. ನನಗೆ ಗಾಂಧಿ ಭವನ ರಸ್ತೆಯ ನಿವಾಸವನ್ನು ಕೊಟ್ಟರೆ ಕೊಡಲಿ. ಇಲ್ಲದಿದ್ದರೆ ನನಗೆ ಸರ್ಕಾರಿ ನಿವಾಸ ಬೇಡ ಎಂದು ಹೊರಟ್ಟಿ ಹೇಳಿದ್ದಾರೆ.

ಸರ್ಕಾರಿ ನಿವಾಸ ಹಂಚಿಕೆ ಮಾಡದಿದ್ದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಗರಂ
ಬಸವರಾಜ ಹೊರಟ್ಟಿ
TV9 Web
| Updated By: ganapathi bhat|

Updated on: Sep 04, 2021 | 6:27 PM

Share

ಬೆಂಗಳೂರು: ಸರ್ಕಾರಿ ನಿವಾಸ ಹಂಚಿಕೆ ಮಾಡದಿದ್ದಕ್ಕೆ ಹೊರಟ್ಟಿ ಗರಂ ಆಗಿದ್ದಾರೆ. ಏಳು ಪತ್ರದ ಜೊತೆಗೆ ಇಂದು ಎಂಟನೇ ಪತ್ರ ಬರೆದಿದ್ದೇನೆ. ಮತ್ತೆ ಭಿಕ್ಷೆ ಬೇಡೋದಿಲ್ಲವೆಂದೂ ನಾನು ಹೇಳಿದ್ದೇನೆ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ. ಎಲ್ಲರಿಗೂ ನಿವಾಸ ಇದೆ, ಆದ್ರೆ ನಮ್ಮ ಹಣೆಬರಹ ನೋಡಿ. ಪ್ರೊಟೋಕಾಲ್ ಪ್ರಕಾರ ಸಿಎಂಗಿಂತ ನಾವು ಮೇಲಿನವರು. ಆದ್ರೂ ಸರ್ಕಾರ ನಮಗೆ ಸರ್ಕಾರಿ ನಿವಾಸ ಹಂಚಿಕೆ ಮಾಡಿಲ್ಲ. ಇಂದು ಕೂಡ ಮತ್ತೆ ಪತ್ರ ಬರೆದಿದ್ದೇನೆ, ನಿವಾಸ ನೀಡಿಲ್ಲ. ನಮಗೆ ಶಕ್ತಿ ಇಲ್ಲವೆಂದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಕಾವೇರಿ ನಿವಾಸ ನಿಗದಿತ ನಿವಾಸ ಅಲ್ಲ. ಆದರೂ ಕಾವೇರಿ ನಿವಾಸದಲ್ಲಿ ಸಿಎಂ ಆದವರು ಇರ್ತಾರೆ. ಏರ್‌ಪೋರ್ಟ್‌ನಲ್ಲಿ ಸಿಎಂ, ಗೃಹಸಚಿವರು ನೇರ ಹೋಗ್ತಾರೆ. ಸಾಂವಿಧಾನಿಕವಾಗಿ ನಾವು ಅವರಿಗಿಂತ ಮೇಲಿನವರು. ಆದರೆ, ನಮಗೆ ಮಾತ್ರ ಎಲ್ಲಾ ತಪಾಸಣೆ ಮಾಡುತ್ತಾರೆ ಎಂದು ಹೊರಟ್ಟಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡಲು ನಾನು, ಸ್ಪೀಕರ್‌ ಪತ್ರ ಬರೆದಿದ್ದೇವೆ. ನನಗೆ ಗಾಂಧಿ ಭವನ ರಸ್ತೆಯ ನಿವಾಸವನ್ನು ಕೊಟ್ಟರೆ ಕೊಡಲಿ. ಇಲ್ಲದಿದ್ದರೆ ನನಗೆ ಸರ್ಕಾರಿ ನಿವಾಸ ಬೇಡ ಎಂದು ಹೊರಟ್ಟಿ ಹೇಳಿದ್ದಾರೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ವಿಚಾರವಾಗಿ ಹೊರಟ್ಟಿ ಪ್ರತಿಕ್ರಿಯಿಸಿದ್ದಾರೆ. ಈ ವರ್ಷದ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆ ಮಾಡಿದ್ದಾರೆ. 600 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದಾರೆ. ಪ್ರತಿ ವರ್ಷ ಜೂನ್ ಅಂತ್ಯದ ವೇಳೆಗೆ ಕ್ರಿಯಾ ಯೋಜನೆ ರೂಪಿಸುವುದಕ್ಕೆ ಸೂಚಿಸಲಾಗಿದೆ. 2018- 19 ರಿಂದ 20- 21 ನೇ ಸಾಲಿನ ಹಣ ರಿಲೀಸ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಬಳಿ ಈಗಲೂ ಹಣ ಇದೆ. ಆದರೆ ಪರಿಷತ್ ಸದಸ್ಯರಿಗೆ ಹಣ ಬಿಡುಗಡೆ ಆಗುತ್ತಿಲ್ಲ. ಯೋಜನಾ ಇಲಾಖೆ ಅನುದಾನ ಕ್ಷೇತ್ರವಾರು ಬದಲು ಜಿಲ್ಲಾವಾರು ಬಿಡುಗಡೆಗೆ ಆದೇಶ ಮಾಡಲಾಗಿದೆ. ಇನ್ಮುಂದೆ ಶಾಸಕರ ಪ್ರದೇಶಾಭಿವೃದ್ಧಿ ನಿಧಿ ವಿಳಂಬ ಅಗಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿಕೆ ನೀಡಿದ್ದಾರೆ.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನ ಬಗ್ಗೆ ಸಭೆ ನಡೆಸಲಾಗಿದೆ. ಪ್ರದೇಶಾಭಿವೃದ್ಧಿ ಅನುದಾನ ಕುರಿತ ಸಮಿತಿ ಅಂತಿಮ ಸಭೆ ವಿಧಾನಸೌಧದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ನೇತೃತ್ವದಲ್ಲಿ ಇಂದು (ಸಪ್ಟೆಂಬರ್ 4) ನಡೆದಿದೆ. ಪ್ರದೇಶಾಭಿವೃದ್ಧಿ ನಿಧಿ ಬಿಡುಗಡೆಯಲ್ಲಿ ತಾರತಮ್ಯ ಸರಿಪಡಿಸುವ ಸಂಬಂಧ ಸಭೆಯಲ್ಲಿ ಚರ್ಚೆ ಮಾಡಲಾಗಿದೆ. ಹಣಕಾಸು ಇಲಾಖೆ ಅಧಿಕಾರಿಗಳು, ಎಂಎಲ್​ಸಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಇದನ್ನೂ ಓದಿ: ಮುಜುಗರ ತರಬಲ್ಲ ವಿವಾದಾತ್ಮಕ ಹೇಳಿಕೆ ನೀಡದಿರುವಂತೆ ಸಚಿವರಿಗೆ ಖಡಕ್ ಸಲಹೆ ನೀಡಿದ ಸಿಎಂ ಬೊಮ್ಮಾಯಿ

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಿರುವ ಜಿಲ್ಲಾಡಳಿತಗಳ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?