AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ

ಬೆಳಗಾವಿ ಅಧಿವೇಶನದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದಿದೆ ಎನ್ನಲಾದ ವಾಕ್ಸಮರ ವಿಚಾರದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಅಲ್ಲದೆ, ಘಟನೆ ಸಂಬಂಧ ದೂರು ಕೂಡ ಸಲ್ಲಿಕೆಯಾಗಿಲ್ಲ. ದೂರು ಸಲ್ಲಿಕೆಯಾದರೆ ಆ ಬಗ್ಗೆ ಗಮನಹರಿಸುತ್ತೇವೆ ಎಂದದಿದ್ದಾರೆ.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
Anil Kalkere
| Updated By: Ganapathi Sharma|

Updated on:Dec 23, 2024 | 11:32 AM

Share

ಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಸಂಬಂಧ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಅದು ಮುಗಿದುಹೋದ ಅಧ್ಯಾಯ ಎಂದಿದ್ದಾರೆ. ಸದನದಲ್ಲಿ ನಡೆದಿದೆ ಎನ್ನಲಾದ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಿದ್ದೇವೆ. ಸದನದವನ್ನು ಅನಿರ್ದಿಷ್ಟವಾಧಿಗೆ‌ ಮುಂದೂಡಿಕೆ ಬಳಿಕ ಸಿಟಿ ರವಿ ಬಂಧನ ಆಗಿತ್ತು. ಸದ್ಯ, ಎರಡೂ ಕಡೆಯಿಂದ ನಮಗೆ ಯಾವುದೇ ದೂರು ಬಂದಿಲ್ಲ. ಹಕ್ಕುಚ್ಯುತಿ ಆಗಿದೆ ಅಂತ ದೂರು ಕೊಟ್ಟರೆ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು. ಅದು ಅವರ ಅಧಿಕಾರ ಮತ್ತು ಹಕ್ಕು ಎರಡೂ ಇಲ್ಲ. ಎಫ್​ಐಆರ್​​ ಆಗಿದೆ, ನಮ್ಮದೇ ಮೂಲಗಳ ಪ್ರಕಾರ ಚರ್ಚೆ ಮಾಡುತ್ತೇವೆ. ಆದರೆ ಪೊಲೀಸರು ಒಳಗೆ ಬಂದಿಲ್ಲ. ನಮ್ಮಲ್ಲಿ ವೀಡಿಯೋ, ಆಡಿಯೋ ಇದ್ದರೆ ಮಾತ್ರ ಪರಿಗಣನೆ ಮಾಡುತ್ತೇವೆ. ಬೇರೆ ಯಾರಾದರೂ ಕಳುಹಿಸಿದರೆ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್​ಎಸ್​​ಎಲ್) ಕಳುಹಿಸುತ್ತೇವೆ. ಸದನ ಮುಗಿದ ಮೇಲೆ ಯಾವುದೇ ವೀಡಿಯೋ ಚಿತ್ರೀಕರಣ ಆಗಿಲ್ಲ ಎಂದು ಹೊರಟ್ಟಿ ಹೇಳಿದರು.

ಸಿಟಿ ವಿ ಮೇಲೆ ಹಲ್ಲೆ ಯತ್ನ: 10 ಮಂದಿ ವಿರುದ್ಧ ಎಫ್​ಐಆರ್

ಸುವರ್ಣ ವಿಧಾನ ಸೌಧದಲ್ಲಿ ಎಂಎಲ್​ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ ಸಂಬಂಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಸೆಕ್ರೆಟರಿ ಕಚೇರಿಯಿಂದ ಕಮಿಷನರ್ ಕಚೇರಿಗೆ ದೂರಿನ ಪತ್ರ ಸಲ್ಲಿಕೆಯಾಗಿತ್ತು. ಎಂಎಲ್​ಸಿ ಡಿಎಸ್.ಅರುಣ್, ಎಸ್​ವಿ ಸಂಕನೂರ, ಕಿಶೋರ್ ಬಿಆರ್ ಬೆಂಗಳೂರಿನ ಸೆಕ್ರೆಟರಿ ಕಚೇರಿಗೆ ದೂರು ಸಲ್ಲಿಸಿದ್ದರು. ಅಲ್ಲಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಪತ್ರ ರವಾನೆಯಾಗಿತ್ತು. ಅದರಂತೆ, ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ

ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐಪಿಸಿ ಸೆಕ್ಷನ್ 189(2), 191(2), 126(2), 352, 351(4) ಕಲಂ ಹಾಗೂ 190ರ ಅಡಿ ದೂರು ಎಫ್​ಐಆರ್ ದಾಖಲಿಸಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:29 am, Mon, 23 December 24

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ