AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ

ಬೆಳಗಾವಿ ಅಧಿವೇಶನದ ವೇಳೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ಹಾಗೂ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ನಡೆದಿದೆ ಎನ್ನಲಾದ ವಾಕ್ಸಮರ ವಿಚಾರದಲ್ಲಿ ಪೊಲೀಸರ ಹಸ್ತಕ್ಷೇಪ ಸ್ವೀಕಾರಾರ್ಹವಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಅಲ್ಲದೆ, ಘಟನೆ ಸಂಬಂಧ ದೂರು ಕೂಡ ಸಲ್ಲಿಕೆಯಾಗಿಲ್ಲ. ದೂರು ಸಲ್ಲಿಕೆಯಾದರೆ ಆ ಬಗ್ಗೆ ಗಮನಹರಿಸುತ್ತೇವೆ ಎಂದದಿದ್ದಾರೆ.

ಸಿಟಿ ರವಿ ಪ್ರಕರಣ ಮುಗಿದ ಅಧ್ಯಾಯ, ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರ ಹಸ್ತಕ್ಷೇಪ ಸಲ್ಲ: ಹೊರಟ್ಟಿ
ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ
Anil Kalkere
| Edited By: |

Updated on:Dec 23, 2024 | 11:32 AM

Share

ಬೆಂಗಳೂರು, ಡಿಸೆಂಬರ್ 23: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಎಂಎಲ್​ಸಿ ಸಿಟಿ ರವಿ ಅವಾಚ್ಯ ಶಬ್ದ ಬಳಸಿ ನಿಂದಿಸಿದ್ದಾರೆ ಎಂಬ ಆರೋಪ ಸಂಬಂಧ ಬೆಂಗಳೂರಿನಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯಿಸಿದ್ದು, ಅದು ಮುಗಿದುಹೋದ ಅಧ್ಯಾಯ ಎಂದಿದ್ದಾರೆ. ಸದನದಲ್ಲಿ ನಡೆದಿದೆ ಎನ್ನಲಾದ ಘಟನೆ ಬಗ್ಗೆ ಕೂಲಂಕುಷವಾಗಿ ಚರ್ಚೆ ಮಾಡಿದ್ದೇವೆ. ಸದನದವನ್ನು ಅನಿರ್ದಿಷ್ಟವಾಧಿಗೆ‌ ಮುಂದೂಡಿಕೆ ಬಳಿಕ ಸಿಟಿ ರವಿ ಬಂಧನ ಆಗಿತ್ತು. ಸದ್ಯ, ಎರಡೂ ಕಡೆಯಿಂದ ನಮಗೆ ಯಾವುದೇ ದೂರು ಬಂದಿಲ್ಲ. ಹಕ್ಕುಚ್ಯುತಿ ಆಗಿದೆ ಅಂತ ದೂರು ಕೊಟ್ಟರೆ ನಂತರ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸದನದ ಒಳಗೆ ನಡೆದ ಘಟನೆ ಬಗ್ಗೆ ಪೊಲೀಸರು ಹಸ್ತಕ್ಷೇಪ ಮಾಡಬಾರದು. ಅದು ಅವರ ಅಧಿಕಾರ ಮತ್ತು ಹಕ್ಕು ಎರಡೂ ಇಲ್ಲ. ಎಫ್​ಐಆರ್​​ ಆಗಿದೆ, ನಮ್ಮದೇ ಮೂಲಗಳ ಪ್ರಕಾರ ಚರ್ಚೆ ಮಾಡುತ್ತೇವೆ. ಆದರೆ ಪೊಲೀಸರು ಒಳಗೆ ಬಂದಿಲ್ಲ. ನಮ್ಮಲ್ಲಿ ವೀಡಿಯೋ, ಆಡಿಯೋ ಇದ್ದರೆ ಮಾತ್ರ ಪರಿಗಣನೆ ಮಾಡುತ್ತೇವೆ. ಬೇರೆ ಯಾರಾದರೂ ಕಳುಹಿಸಿದರೆ ಪರಿಶೀಲನೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (ಎಫ್​ಎಸ್​​ಎಲ್) ಕಳುಹಿಸುತ್ತೇವೆ. ಸದನ ಮುಗಿದ ಮೇಲೆ ಯಾವುದೇ ವೀಡಿಯೋ ಚಿತ್ರೀಕರಣ ಆಗಿಲ್ಲ ಎಂದು ಹೊರಟ್ಟಿ ಹೇಳಿದರು.

ಸಿಟಿ ವಿ ಮೇಲೆ ಹಲ್ಲೆ ಯತ್ನ: 10 ಮಂದಿ ವಿರುದ್ಧ ಎಫ್​ಐಆರ್

ಸುವರ್ಣ ವಿಧಾನ ಸೌಧದಲ್ಲಿ ಎಂಎಲ್​ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ ಸಂಬಂಧ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಠಾಣೆಯಲ್ಲಿ 10 ಜನ ಅಪರಿಚಿತರ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ. ಸೆಕ್ರೆಟರಿ ಕಚೇರಿಯಿಂದ ಕಮಿಷನರ್ ಕಚೇರಿಗೆ ದೂರಿನ ಪತ್ರ ಸಲ್ಲಿಕೆಯಾಗಿತ್ತು. ಎಂಎಲ್​ಸಿ ಡಿಎಸ್.ಅರುಣ್, ಎಸ್​ವಿ ಸಂಕನೂರ, ಕಿಶೋರ್ ಬಿಆರ್ ಬೆಂಗಳೂರಿನ ಸೆಕ್ರೆಟರಿ ಕಚೇರಿಗೆ ದೂರು ಸಲ್ಲಿಸಿದ್ದರು. ಅಲ್ಲಿಂದ ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಪತ್ರ ರವಾನೆಯಾಗಿತ್ತು. ಅದರಂತೆ, ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಸಿಟಿ ರವಿಯನ್ನ ಫೇಕ್​ ಎನ್​ಕೌಂಟರ್ ಮಾಡುವ ವಿಚಾರ ಪೊಲೀಸರಿಗಿತ್ತು ಅನಿಸುತ್ತೆ: ಪ್ರಲ್ಹಾದ್ ಜೋಶಿ ಆರೋಪ

ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಐಪಿಸಿ ಸೆಕ್ಷನ್ 189(2), 191(2), 126(2), 352, 351(4) ಕಲಂ ಹಾಗೂ 190ರ ಅಡಿ ದೂರು ಎಫ್​ಐಆರ್ ದಾಖಲಿಸಲಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:29 am, Mon, 23 December 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?