AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi Session: ಬೆಳಗಾವಿ ಸುವರ್ಣ ಸೌಧ ಸಭಾ ಭವನದಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಪತ್ರ

ಯಾರ ಫೋಟೋಗಳನ್ನು ಯಾಕೆ ಹಾಕಬೇಕು ಎಂಬುದಾಗಿ ವಿಧಾನ ಸಭೆಯ ಕಲಾಪದಲ್ಲಿ ಚರ್ಚೆ ಮಾಡಲು ಸ್ಪೀಕರ್ ಅವರಿಗೆ ಅನುಮತಿ ಕೇಳಿದ್ದೆ. ಆದರೆ, ಅವರು ಪತ್ರ ಬರೆಯಲು ಹೇಳಿದರು. ತುಂಬಾ ಅಧ್ಯಯನ ಮಾಡಿ ಈಗ ಒಂದು ಪಟ್ಟಿ ಸಿದ್ದಪಡಿಸಿದ್ದೇನೆ ಎಂದು ಬಸವರಾಜ ರಾಯರೆಡ್ಡಿ ಹೇಳಿದ್ದಾರೆ.

Belagavi Session: ಬೆಳಗಾವಿ ಸುವರ್ಣ ಸೌಧ ಸಭಾ ಭವನದಲ್ಲಿ 10 ಮಂದಿ ಗಣ್ಯರ ಭಾವಚಿತ್ರ ಅಳವಡಿಸಲು ಸ್ಪೀಕರ್​ಗೆ ರಾಯರೆಡ್ಡಿ ಪತ್ರ
ಬಸವರಾಜ ರಾಯರೆಡ್ಡಿ
Follow us
Sunil MH
| Updated By: Ganapathi Sharma

Updated on: Dec 11, 2023 | 2:23 PM

ಬೆಳಗಾವಿ, ಡಿಸೆಂಬರ್ 11: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ (Suvarna Vidhana Soudha) ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್​ ಅವರ ಭಾವಚಿತ್ರ ಇಟ್ಟಿರುವುದು ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಆ ನಂತರ ಮೊದಲ ಪ್ರಧಾನಿ ನೆಹರು ಅವರ ಭಾವಚಿತ್ರ ಅಳವಡಿಸುವ ಬಗ್ಗೆಯೂ ಚರ್ಚೆಗಳಾಗಿದ್ದವು. ಇದೀಗ 10 ಮಂದಿ ಗಣ್ಯರ ಫೋಟೋ ಅಳವಡಿಸಬೇಕೆಂದು ಆಗ್ರಹಿಸಿ ಸ್ಪೀಕರ್ ಯುಟಿ ಖಾದರ್​ ಅವರಿಗೆ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ (Basvaraj Rayareddi) ಪತ್ರ ಬರೆದಿದ್ದಾರೆ.

ಯಾರ ಫೋಟೋಗಳನ್ನು ಯಾಕೆ ಹಾಕಬೇಕು ಎಂಬುದಾಗಿ ವಿಧಾನ ಸಭೆಯ ಕಲಾಪದಲ್ಲಿ ಚರ್ಚೆ ಮಾಡಲು ಸ್ಪೀಕರ್ ಅವರಿಗೆ ಅನುಮತಿ ಕೇಳಿದ್ದೆ. ಆದರೆ, ಅವರು ಪತ್ರ ಬರೆಯಲು ಹೇಳಿದರು. ತುಂಬಾ ಅಧ್ಯಯನ ಮಾಡಿ ಈಗ ಒಂದು ಪಟ್ಟಿ ಸಿದ್ದಪಡಿಸಿದ್ದೇನೆ. ಈ ಪಟ್ಟಿ ಇರುವ ಪತ್ರವನ್ನು ಬ್ಯುಸಿನೆಸ್ ಅಡ್ವೈಸರಿ ಕಮಿಟಿಗೆ ನೀಡುತ್ತಿದ್ದೇನೆ. ಒಂದು ಸಮಿತಿ ರಚನೆ ಮಾಡಿ ಈ ಫೋಟೋಗಳನ್ನು ಹಾಕಲು ಕ್ರಮ ಕೈಗೊಳ್ಳಬೇಕು ಎಂದು ರಾಯರೆಡ್ಡಿ ಹೇಳಿದ್ದಾರೆ.

ಕೈಯಲ್ಲಿ ಲಿಂಗ ಹಿಡಿದಿರುವ ಬಸವೇಶ್ವರರ ಈಗಿರುವ ಫೋಟೋ ಬದಲಿಗೆ ತಲೆ ಮೇಲೆ ಕಿರೀಟ ಇರುವ ಫೋಟೋ ಹಾಕಬೇಕು. ಮಹಾತ್ಮ ಗಾಂಧೀಜಿ ಅವರ ಫೋಟೋವನ್ನು ಕೆಳಗೆ ಹಾಕಲಾಗಿದೆ, ಅದನ್ನು ಬಸವೇಶ್ವರರ ಫೋಟೋಗೆ ಸಮಾನವಾಗಿ ಹಾಕಬೇಕು. ಸದ್ಯ ಇರುವ ಧೋತಿ ಶರ್ಟ್ ಧರಿಸಿರುವ ಸುಭಾಷ್ ಚಂದ್ರ ಬೋಸ್ ಅವರ ಪೋಟೋ ಬದಲಿಗೆ, ಸೇನಾ ವಸ್ತ್ರ ಧರಿಸಿರುವ ಫೋಟೋ ಹಾಕಬೇಕು. ಅಂಬೇಡ್ಕರ್ ಅವರ ಈಗಿರುವ ಫೋಟೋ ಬದಲಿಗೆ, ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದಿರುವ ಫೋಟೋ ಹಾಕಬೇಕು. ಸಂವಿಧಾನ ರಚನಾ ಸಭೆಯ ಮೊದಲ ಅಧ್ಯಕ್ಷ ಬಾಬು ರಾಜೇಂದ್ರ ಪ್ರಸಾದ್ ಫೋಟೋವನ್ನು ಸುವರ್ಣಸೌಧದಲ್ಲಿ ಹಾಕಬೇಕು ಎಂದು ರಾಯರೆಡ್ಡಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಜಮೀರ್ ಅಹ್ಮದ್ ಹೇಳಿಕೆ: ವಿಧಾನಸಭೆಯಲ್ಲಿ ವಿಪಕ್ಷ- ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ, ಸ್ಪೀಕರ್ ಕಚೇರಿಯಲ್ಲಿ ಸಂಧಾನ ಸಭೆ

17 ವರ್ಷ ಭಾರತದ ಆಡಳಿತ ನಡೆಸಿದ ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಫೋಟೋ ಹಾಕಬೇಕು. ಭಾರತದ ಪ್ರಥಮ ಮಹಿಳಾ ಪ್ರಧಾನಿ ಇಂದಿರಾಗಾಂಧಿ ಫೋಟೋ ಹಾಕಬೇಕು. ಭಾರತದ ಅತ್ಯಂತ ಜನಪ್ರಿಯ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಫೋಟೋ ಕೂಡ ಇರಬೇಕು. ಕರ್ನಾಟಕ ರಾಜ್ಯದ ಏಕೀಕರಣದ ಪ್ರಥಮ ಸಿಎಂ ಎಸ್. ನಿಜಲಿಂಗಪ್ಪ ಫೋಟೋ ಹಾಕಬೇಕು. ವಿಧಾನಸೌಧ ಕಟ್ಟಿದ ಕೆಂಗಲ್ ಹನುಮಂತಯ್ಯ ಫೋಟೋ ಕೂಡ ಸದನದಲ್ಲಿ ಇರಬೇಕು ಎಂದು ರಾಯರೆಡ್ಡಿ ಒತ್ತಾಯಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ