AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬಿಬಿಎ ವಿದ್ಯಾರ್ಥಿನಿ ಸನಾ ಆತ್ಮಹತ್ಯೆ: ಯುವಕನ ಕಿರುಕುಳಕ್ಕೆ ಪ್ರಾಣಬಿಟ್ಲಾ ಯುವತಿ?

ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದ ಯುವತಿ ಸನಾ, ಪಿಜಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆಕೆಯ ಕಾಲೇಜಿನಲ್ಲಿ ಓದುತ್ತಿದ್ದ ರಿಫಾಸ್ ಎಂಬ ಯುವಕನಿಂದ ನಿರಂತರ ಕಿರುಕುಳ ಹಾಗೂ ಬೆದರಿಕೆಗೆ ಒಳಗಾಗಿಯೇ ಸನಾ ಈ ನಿರ್ಧಾರ ತೆಗೆದುಕೊಂಡಿದ್ದಾಳೆಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಬೆಂಗಳೂರಿನ ಬಿಬಿಎ ವಿದ್ಯಾರ್ಥಿನಿ ಸನಾ ಆತ್ಮಹತ್ಯೆ: ಯುವಕನ ಕಿರುಕುಳಕ್ಕೆ ಪ್ರಾಣಬಿಟ್ಲಾ ಯುವತಿ?
ನೇಣಿಗೆ ಶರಣಾಗಿರುವ ಸನಾ ಪರ್ವಿನ್ ಮತ್ತು ಆಕೆಗೆ ಕಿರುಕುಳ ನೀಡುತ್ತಿದ್ದ ರಿಫಾಸ್
ರಾಚಪ್ಪಾಜಿ ನಾಯ್ಕ್
| Edited By: |

Updated on: Oct 18, 2025 | 3:38 PM

Share

ಬೆಂಗಳೂರು, (ಅಕ್ಟೋಬರ್ 18): ಪಿಜಿಯಲ್ಲಿ ಬಿಬಿಎ ದ್ವಿತೀಯ ವರ್ಷದ ವಿದ್ಯಾರ್ಥಿನಿ (Student) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಬಾಗಲೂರಿನಲ್ಲಿ ನಡೆದಿದೆ. ಸನಾ ಪರ್ವಿನ್ (19) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಕಾಲೇಜಿನಲ್ಲಿ ಓದುತ್ತಿದ್ದ ರಿಫಾಸ್ ಎಂಬ ಯುವಕನಿಂದ ನಿರಂತರ ಕಿರುಕುಳ ಹಾಗೂ ಬೆದರಿಕೆಯಿಂದ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ.

ಕ್ಲಾಸ್​ಮೇಟ್ ಯುವಕನೊಬ್ಬನ ಕಿರುಕುಳಕ್ಕೆ ಯುವತಿ ಬಲಿಯಾಗಿರುವುದಾಗಿ ಕುಟುಂಬಸ್ಥರ ಆರೋಪ

ಸನಾ ಬಾಗಲೂರಿನ ಖಾಸಗಿ ಕಾಲೇಜಿನಲ್ಲಿ ಬಿಬಿಎ ದ್ವಿತೀಯ ವರ್ಷ ವ್ಯಾಸಂಗ ಮಾಡುತ್ತಿದ್ದಳು. ನಿನ್ನೆ (ಅ.17) ಬೆಳಿಗ್ಗೆ 10 ಗಂಟೆ ಸುಮಾರಿಗೆ ಸನಾ ಪರ್ವಿನ್ ತನ್ನ ವಸತಿಗೃಹದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆಯನ್ನು ಗಮನಿಸಿದ ಸಹವಾಸಿಗಳು ತಕ್ಷಣ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ.

ಸನಾ ಸಂಬಂಧಿಯಾದ ಮುಸ್ತಾಫ್, “ಕಾಲೇಜಿನಲ್ಲಿ ಓದಿದ್ದ ರಿಫಾಸ್ ಪಾಸ್ ಔಟ್ ಆದ ಬಳಿಕವೂ ಆಗಾಗ ಕಾಲೇಜಿಗೆ ಬಂದು ಸನಾಗೆ ಕಿರುಕುಳ ನೀಡುತ್ತಿದ್ದ. ಅವಳನ್ನು ಬಿಡುವುದಿಲ್ಲ ಎಂದು ಬೆದರಿಸುತ್ತಿದ್ದ. ಇದೇ ಕಾರಣಕ್ಕೆ ಮಾನಸಿಕ ಒತ್ತಡಕ್ಕೆ ಒಳಗಾಗಿ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ” ಎಂದು ಆರೋಪಿಸಿದ್ದಾರೆ.

ಮೃತಳ ಮಾವ ಉಬೇದುಲ್ಲಾ , “ಕಾಲೇಜಿನಲ್ಲಿ ಸೂಕ್ತ ಭದ್ರತೆ ಇಲ್ಲ. ಯಾರ್ಯಾರೂ ಬಂದು ಹೋಗ್ತಾರೆ. ಕಾಲೇಜಿನವರು ಈ ವಿಚಾರದಲ್ಲಿ ಗಂಭೀರವಾಗಿ ವರ್ತಿಸಿಲ್ಲ. ನಿನ್ನೆ ಕೂಡ ಯುವಕ ಬಂದು ಟಾರ್ಚರ್ ಮಾಡಿದ್ದಾನೆ. ಅದರಿಂದ ಹೆದರಿ ಸನಾ ನೇಣು ಹಾಕಿಕೊಂಡಿದ್ದಾಳೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಘಟನೆಯ ಹಿನ್ನೆಲೆಯಲ್ಲಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ರಿಫಾಸ್ ವಿರುದ್ಧ ಎಫ್ಐಆರ್ ದಾಖಲಾಗಿದ್ದು. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಚಿಕ್ಕಬಳ್ಳಾಪುರದ ಯುವಕನ ಆತ್ಮಹತ್ಯೆ

ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗೇಟ್ ಬಳಿ ವಿದ್ಯುತ್ ತಂತಿ ಹಿಡಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಡಿಕೆ ಡಾಬಾದಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದ ಯುವಕ ಪದಮ್(25) ಆತ್ಮಹತ್ಯೆ ಮಾಡಿಕೊಂಡ ಯುವಕ . ಪೆಟ್ಟಿಗೆ ಅಂಗಡಿ ಮೇಲೆ ಹತ್ತಿ ವಿದ್ಯುತ್ ತಂತಿ ಹಿಡಿದುಕೊಂಡು ಸಾವನ್ನಪ್ಪಿದ್ದಾನೆ. ಈ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?