AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು ಎಂದು ಆಯುಕ್ತರು ತಿಳಿಸಿದ್ದಾರೆ.

ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ
ಗೌರವ್ ಗುಪ್ತಾ
Lakshmi Hegde
|

Updated on: Apr 18, 2021 | 5:31 PM

Share

ಬೆಂಗಳೂರು: ನಗರದಲ್ಲಿ ಕೊವಿಡ್​-19 ಸೋಂಕಿನಿಂದ ಮೃತಪಟ್ಟವರನ್ನು ಅಂತ್ಯಕ್ರಿಯೆಗೆ ಚಿತಾಗಾರಕ್ಕೆ ಕರೆದೊಯ್ಯುವ ಆಂಬುಲೆನ್ಸ್​ಗಳು ಕ್ಯೂ ನಿಲ್ಲುವಂತಾಗಿದೆ ಎಂಬ ವರದಿಯ ಬೆನ್ನಲ್ಲೇ ಇಂದು ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಚಿತಾಗಾರವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಣ ಸುಡಲು ಚಿತಾಗಾರ ಸಿಬ್ಬಂದಿ ಹೆಚ್ಚಿನ ಹಣ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

13 ಚಿತಾಗಾರಗಳ ಪೈಕಿ ಒಂದು ಚಿತಾಗಾರಕ್ಕೆ ನಾನು ಭೇಟಿ ಕೊಟ್ಟಿದ್ದೇನೆ. ಇಲ್ಲಿ ನಿನ್ನೆ 26 ಮೃತದೇಹಗಳನ್ನು ಸುಡಲಾಗಿದೆ. ಪ್ರತಿದಿನವೂ ಇಲ್ಲಿ 20-25 ಶವಸಂಸ್ಕಾರ ಆಗುತ್ತದೆ. ಅದರಲ್ಲಿ ಬಿಬಿಎಂಪಿಯಿಂದ ಬರುತ್ತಿರುವುದು 2-3 ಶವಗಳಷ್ಟೇ. ಅದರ ಹೊರತಾಗಿ ಬೆಂಗಳೂರು ಗ್ರಾಮೀಣ, ಅಕ್ಕಪಕ್ಕದ ಜಿಲ್ಲೆಗಳು ಹಾಗೂ ಖಾಸಗಿ ಆಸ್ಪತ್ರೆಗಳಿಂದಲೂ ಇಲ್ಲಿ ಶವಗಳನ್ನು ತರಲಾಗುತ್ತಿದೆ. ಹಾಗಾಗಿ ಸ್ವಲ್ಪ ಅಡಚಣೆ ಆಗುತ್ತಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು. ಚಿತಾಗಾರಗಳ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಗೌರವ್​ ಗುಪ್ತಾ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ