AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು ಎಂದು ಆಯುಕ್ತರು ತಿಳಿಸಿದ್ದಾರೆ.

ಚಿತಾಗಾರಕ್ಕೆ ಬಿಬಿಎಂಪಿ ಆಯುಕ್ತ ಗೌರವ್​​ ಗುಪ್ತಾ ಭೇಟಿ; ಶವಸಂಸ್ಕಾರಕ್ಕೆ ಹೆಚ್ಚಿನ ಹಣ ಕೇಳಿದರೆ ಕ್ರಮ ನಿಶ್ಚಿತ
ಗೌರವ್ ಗುಪ್ತಾ
Lakshmi Hegde
|

Updated on: Apr 18, 2021 | 5:31 PM

Share

ಬೆಂಗಳೂರು: ನಗರದಲ್ಲಿ ಕೊವಿಡ್​-19 ಸೋಂಕಿನಿಂದ ಮೃತಪಟ್ಟವರನ್ನು ಅಂತ್ಯಕ್ರಿಯೆಗೆ ಚಿತಾಗಾರಕ್ಕೆ ಕರೆದೊಯ್ಯುವ ಆಂಬುಲೆನ್ಸ್​ಗಳು ಕ್ಯೂ ನಿಲ್ಲುವಂತಾಗಿದೆ ಎಂಬ ವರದಿಯ ಬೆನ್ನಲ್ಲೇ ಇಂದು ಬಿಬಿಎಂಪಿ ಆಯುಕ್ತ ಗೌರವ್​ ಗುಪ್ತಾ ಚಿತಾಗಾರವೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಹೆಣ ಸುಡಲು ಚಿತಾಗಾರ ಸಿಬ್ಬಂದಿ ಹೆಚ್ಚಿನ ಹಣ ಕೇಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು.

13 ಚಿತಾಗಾರಗಳ ಪೈಕಿ ಒಂದು ಚಿತಾಗಾರಕ್ಕೆ ನಾನು ಭೇಟಿ ಕೊಟ್ಟಿದ್ದೇನೆ. ಇಲ್ಲಿ ನಿನ್ನೆ 26 ಮೃತದೇಹಗಳನ್ನು ಸುಡಲಾಗಿದೆ. ಪ್ರತಿದಿನವೂ ಇಲ್ಲಿ 20-25 ಶವಸಂಸ್ಕಾರ ಆಗುತ್ತದೆ. ಅದರಲ್ಲಿ ಬಿಬಿಎಂಪಿಯಿಂದ ಬರುತ್ತಿರುವುದು 2-3 ಶವಗಳಷ್ಟೇ. ಅದರ ಹೊರತಾಗಿ ಬೆಂಗಳೂರು ಗ್ರಾಮೀಣ, ಅಕ್ಕಪಕ್ಕದ ಜಿಲ್ಲೆಗಳು ಹಾಗೂ ಖಾಸಗಿ ಆಸ್ಪತ್ರೆಗಳಿಂದಲೂ ಇಲ್ಲಿ ಶವಗಳನ್ನು ತರಲಾಗುತ್ತಿದೆ. ಹಾಗಾಗಿ ಸ್ವಲ್ಪ ಅಡಚಣೆ ಆಗುತ್ತಿದೆ ಎಂದು ಹೇಳಿದರು.

ಖಾಸಗಿ ಆಸ್ಪತ್ರೆಗಳಿಂದ ಬರುವ ಶವಗಳಿಗೆ ಸ್ಲಾಟ್ ವ್ಯವಸ್ಥೆ ಇರಲಿಲ್ಲ. ಇನ್ನು ಅದನ್ನೂ ಮಾಡುತ್ತೇವೆ. ಅದೇನೇ ಇರಲಿ ಕೊವಿಡ್​ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಗೆ ಹೆಚ್ಚಿನ ಜನರು ಸೇರಬಾರದು. ಚಿತಾಗಾರಗಳ ಸುತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಗೌರವ್​ ಗುಪ್ತಾ ತಿಳಿಸಿದರು.

ಇದನ್ನೂ ಓದಿ: ರಾಜ್ಯದಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆ ಇದೆ ಎಂಬ ತಪ್ಪು ಮಾಹಿತಿ ಹಬ್ಬಿಸಬೇಡಿ.. ಏನೂ ತೊಂದರೆ ಇಲ್ಲ: ಡಾ. ಕೆ.ಸುಧಾಕರ್​

ಬಿಗ್​ ಬಾಸ್​ ಮನೆಯಲ್ಲಿ ಮತ್ತೆ ಕಿಡಿ ಹಚ್ತೀವಿ; ಶಪಥ ಮಾಡಿದ ಚಕ್ರವರ್ತಿ, ಸಂಬರಗಿ

ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ ನೀಡುವ ಬಗ್ಗೆ ಸಿಎಂ ಸಕಾರಾತ್ಮಕ ಸ್ಪಂದನೆ
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಸಿನಿಮಾ ಸಾಹಸಕ್ಕೆ ಕೈ ಹಾಕಿದ ‘ಅಮೃತಾಂಜನ್’ ಕಿರುಚಿತ್ರದ ಹುಡುಗರು
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಅಪಾಯದ ಮಟ್ಟ ಮೀರಿದ ಜಮ್ಮು-ಕಾಶ್ಮೀರದ ಝೀಲಂ ನದಿ, ಪ್ರವಾಹದ ಎಚ್ಚರಿಕೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ಬಾನು ಮುಸ್ತಾಕ್ ಮನೆಯಲ್ಲಿ ಕುರಾನ್ ಜತೆ ಭಗವದ್ಗೀತೆ
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ದರ್ಶನ್ ನೋವು ನೋಡಿ ಖುಷಿಪಡುವ ಕೆಲವರು ಇದ್ದಾರೆ: ನಿರ್ದೇಶಕ ಪ್ರೇಮ್
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ಮೈಸೂರು ದಸರಾ ಉದ್ಘಾಟನೆ: ಫಲತಾಂಬೂಲ ನೀಡಿ ಬಾನು ಮುಸ್ತಾಕ್​ಗೆ ಆಹ್ವಾನ
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ದರ್ಶನ್ ಅವರನ್ನು ಭೇಟಿ ಮಾಡಿದ್ದೆ, ನೋವಿನಿಂದ ನುಡಿದ ಪ್ರೇಮ್
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ಕೇದಾರನಾಥ- ಸೋನ್‌ಪ್ರಯಾಗ ಮಾರ್ಗದಲ್ಲಿ ಭೂಕುಸಿತ; ಹಲವಾರು ವಾಹನಗಳಿಗೆ ಹಾನಿ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ರಾಧಿಕಾ ಕುಮಾರಸ್ವಾಮಿ ಜತೆಗಿನ ಹಣಕಾಸಿನ ವ್ಯವಹಾರ ಬಗ್ಗೆ ಜಮೀರ್ ಸ್ಪಷ್ಟನೆ
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು
ಜಮೀರ್ ಅಹಮ್ಮದ್​​ ಜೊತೆಗಿನ ಹಣಕಾಸಿನ ವ್ಯವಹಾರ ಬಿಚ್ಚಿಟ್ಟ ಕೆಜಿಎಫ್ ಬಾಬು