AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್
ಮಂಜುನಾಥ್​ ಪ್ರಸಾದ್
ರಾಜೇಶ್ ದುಗ್ಗುಮನೆ
|

Updated on:Dec 22, 2020 | 10:24 PM

Share

ಬೆಂಗಳೂರು: ಬೆಂಗಳೂರು ಬೃಹತ್​ ನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್​ ಮಂಜುನಾಥ್ ಪ್ರಸಾದ್​​ ಅವರಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಅವರು ಸದ್ಯ ಕ್ವಾರಂಟೈನ್​ಗೆ ತೆರಳಿದ್ದಾರೆ.

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇನ್ನು, ಆಯುಕ್ತರು ಸಂಪರ್ಕದಲ್ಲಿದ್ದವರು, ಸಭೆಗಳು ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಜೊತೆಗಿದ್ದವರು ಮತ್ತು ಇವರ ಸಂಪರ್ಕಕ್ಕೆ ಬಂದ ಮಾಧ್ಯಮದವರು ಕೂಡಲೇ COVID-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಫಿಟ್‌ ಇಂಡಿಯಾ ಅಭಿಯಾನದ ಅಂಗವಾಗಿ ಬಿಬಿಎಂಪಿ ಹಾಗೂ ಬೆಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಸಂಸ್ಥೆ ನಗರದಲ್ಲಿ ಭಾನುವಾರ ಸೈಕ್ಲಥಾನ್‌ ಜಾತಾ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲೂ ಆಯುಕ್ತರು ಭಾಗವಹಿಸಿದ್ದರು. ಅಲ್ಲದೆ, ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಕೂಡ ಮಂಜುನಾಥ್​ ಭೇಟಿ ಮಾಡಿದ್ದರು.

ಕೊರೊನಾ ತಡೆಗೆ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ

ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ಮಾರ್ಪಾಡಾಗಿದೆ ಎನ್ನುವ ವಿಚಾರ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಈಗಿರುವ ವೈರಸ್​ಗಿಂತ ಶೇ. 70ರಷ್ಟು ವೇಗವಾಗಿ ಈ ವೈರಸ್​ ಹರಡಲಿದೆ ಎಂದು ಕೂಡ ಹೇಳಾಗುತ್ತಿದೆ. ಈ ಮಧ್ಯೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮಾರುಕಟ್ಟೆಗಳಿಗೆ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.

ಹೋಲ್​ಸೇಲ್​, ರಿಟೇಲ್​, ಮಾಲ್​ಗಳಲ್ಲಿ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಎಲ್ಲಾ ಮಾರುಕಟ್ಟೆಗಳಲ್ಲಿ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್​ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ಸರ್ಕಾರ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರ ಮೇಲೆ ನಿಷೇಧ ಹೇರಲಾಗಿದೆ. ಪ್ರತಿದಿನ ಎಲ್ಲಾ ಶಾಪ್​ಗಳ ಮುಂದೆ ಸ್ವಚ್ಛ ಮಾಡುವುದು ಕಡ್ಡಾಯವಾಗಿದೆ. ಮಳಿಗೆಗಳ ಎಂಟ್ರಿ ಪಡೆಯುವ ಸ್ಥಳಗಳಲ್ಲಿ ಸ್ಯಾನಿಟೈಸರ್​ ಇಡೋದು ಕಡ್ಡಾಯವಾಗಿದೆ.

Tv9 Facebook Live | ಕೊವಿಡ್-19 ಎರಡನೇ ಅಲೆ, ಕೊರೊನಾ ವೈರಾಣು ರೂಪಾಂತರ, ತಜ್ಞರ ಅಭಿಪ್ರಾಯವೇನು?

Published On - 10:23 pm, Tue, 22 December 20

Follow Us
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ