AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್
ಮಂಜುನಾಥ್​ ಪ್ರಸಾದ್
ರಾಜೇಶ್ ದುಗ್ಗುಮನೆ
|

Updated on:Dec 22, 2020 | 10:24 PM

Share

ಬೆಂಗಳೂರು: ಬೆಂಗಳೂರು ಬೃಹತ್​ ನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್​ ಮಂಜುನಾಥ್ ಪ್ರಸಾದ್​​ ಅವರಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಅವರು ಸದ್ಯ ಕ್ವಾರಂಟೈನ್​ಗೆ ತೆರಳಿದ್ದಾರೆ.

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇನ್ನು, ಆಯುಕ್ತರು ಸಂಪರ್ಕದಲ್ಲಿದ್ದವರು, ಸಭೆಗಳು ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಜೊತೆಗಿದ್ದವರು ಮತ್ತು ಇವರ ಸಂಪರ್ಕಕ್ಕೆ ಬಂದ ಮಾಧ್ಯಮದವರು ಕೂಡಲೇ COVID-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಫಿಟ್‌ ಇಂಡಿಯಾ ಅಭಿಯಾನದ ಅಂಗವಾಗಿ ಬಿಬಿಎಂಪಿ ಹಾಗೂ ಬೆಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಸಂಸ್ಥೆ ನಗರದಲ್ಲಿ ಭಾನುವಾರ ಸೈಕ್ಲಥಾನ್‌ ಜಾತಾ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲೂ ಆಯುಕ್ತರು ಭಾಗವಹಿಸಿದ್ದರು. ಅಲ್ಲದೆ, ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಕೂಡ ಮಂಜುನಾಥ್​ ಭೇಟಿ ಮಾಡಿದ್ದರು.

ಕೊರೊನಾ ತಡೆಗೆ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ

ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ಮಾರ್ಪಾಡಾಗಿದೆ ಎನ್ನುವ ವಿಚಾರ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಈಗಿರುವ ವೈರಸ್​ಗಿಂತ ಶೇ. 70ರಷ್ಟು ವೇಗವಾಗಿ ಈ ವೈರಸ್​ ಹರಡಲಿದೆ ಎಂದು ಕೂಡ ಹೇಳಾಗುತ್ತಿದೆ. ಈ ಮಧ್ಯೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮಾರುಕಟ್ಟೆಗಳಿಗೆ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.

ಹೋಲ್​ಸೇಲ್​, ರಿಟೇಲ್​, ಮಾಲ್​ಗಳಲ್ಲಿ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಎಲ್ಲಾ ಮಾರುಕಟ್ಟೆಗಳಲ್ಲಿ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್​ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ಸರ್ಕಾರ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರ ಮೇಲೆ ನಿಷೇಧ ಹೇರಲಾಗಿದೆ. ಪ್ರತಿದಿನ ಎಲ್ಲಾ ಶಾಪ್​ಗಳ ಮುಂದೆ ಸ್ವಚ್ಛ ಮಾಡುವುದು ಕಡ್ಡಾಯವಾಗಿದೆ. ಮಳಿಗೆಗಳ ಎಂಟ್ರಿ ಪಡೆಯುವ ಸ್ಥಳಗಳಲ್ಲಿ ಸ್ಯಾನಿಟೈಸರ್​ ಇಡೋದು ಕಡ್ಡಾಯವಾಗಿದೆ.

Tv9 Facebook Live | ಕೊವಿಡ್-19 ಎರಡನೇ ಅಲೆ, ಕೊರೊನಾ ವೈರಾಣು ರೂಪಾಂತರ, ತಜ್ಞರ ಅಭಿಪ್ರಾಯವೇನು?

Published On - 10:23 pm, Tue, 22 December 20

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!