AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್
ಮಂಜುನಾಥ್​ ಪ್ರಸಾದ್
ರಾಜೇಶ್ ದುಗ್ಗುಮನೆ
|

Updated on:Dec 22, 2020 | 10:24 PM

Share

ಬೆಂಗಳೂರು: ಬೆಂಗಳೂರು ಬೃಹತ್​ ನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್​ ಮಂಜುನಾಥ್ ಪ್ರಸಾದ್​​ ಅವರಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಅವರು ಸದ್ಯ ಕ್ವಾರಂಟೈನ್​ಗೆ ತೆರಳಿದ್ದಾರೆ.

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇನ್ನು, ಆಯುಕ್ತರು ಸಂಪರ್ಕದಲ್ಲಿದ್ದವರು, ಸಭೆಗಳು ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಜೊತೆಗಿದ್ದವರು ಮತ್ತು ಇವರ ಸಂಪರ್ಕಕ್ಕೆ ಬಂದ ಮಾಧ್ಯಮದವರು ಕೂಡಲೇ COVID-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಫಿಟ್‌ ಇಂಡಿಯಾ ಅಭಿಯಾನದ ಅಂಗವಾಗಿ ಬಿಬಿಎಂಪಿ ಹಾಗೂ ಬೆಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಸಂಸ್ಥೆ ನಗರದಲ್ಲಿ ಭಾನುವಾರ ಸೈಕ್ಲಥಾನ್‌ ಜಾತಾ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲೂ ಆಯುಕ್ತರು ಭಾಗವಹಿಸಿದ್ದರು. ಅಲ್ಲದೆ, ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಕೂಡ ಮಂಜುನಾಥ್​ ಭೇಟಿ ಮಾಡಿದ್ದರು.

ಕೊರೊನಾ ತಡೆಗೆ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ

ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ಮಾರ್ಪಾಡಾಗಿದೆ ಎನ್ನುವ ವಿಚಾರ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಈಗಿರುವ ವೈರಸ್​ಗಿಂತ ಶೇ. 70ರಷ್ಟು ವೇಗವಾಗಿ ಈ ವೈರಸ್​ ಹರಡಲಿದೆ ಎಂದು ಕೂಡ ಹೇಳಾಗುತ್ತಿದೆ. ಈ ಮಧ್ಯೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮಾರುಕಟ್ಟೆಗಳಿಗೆ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.

ಹೋಲ್​ಸೇಲ್​, ರಿಟೇಲ್​, ಮಾಲ್​ಗಳಲ್ಲಿ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಎಲ್ಲಾ ಮಾರುಕಟ್ಟೆಗಳಲ್ಲಿ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್​ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ಸರ್ಕಾರ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರ ಮೇಲೆ ನಿಷೇಧ ಹೇರಲಾಗಿದೆ. ಪ್ರತಿದಿನ ಎಲ್ಲಾ ಶಾಪ್​ಗಳ ಮುಂದೆ ಸ್ವಚ್ಛ ಮಾಡುವುದು ಕಡ್ಡಾಯವಾಗಿದೆ. ಮಳಿಗೆಗಳ ಎಂಟ್ರಿ ಪಡೆಯುವ ಸ್ಥಳಗಳಲ್ಲಿ ಸ್ಯಾನಿಟೈಸರ್​ ಇಡೋದು ಕಡ್ಡಾಯವಾಗಿದೆ.

Tv9 Facebook Live | ಕೊವಿಡ್-19 ಎರಡನೇ ಅಲೆ, ಕೊರೊನಾ ವೈರಾಣು ರೂಪಾಂತರ, ತಜ್ಞರ ಅಭಿಪ್ರಾಯವೇನು?

Published On - 10:23 pm, Tue, 22 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ