AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ.

ಬಿಬಿಎಂಪಿ ಆಯುಕ್ತ ಎನ್​. ಮಂಜುನಾಥ್ ಪ್ರಸಾದ್​​​ಗೆ ಕೊರೊನಾ ಪಾಸಿಟಿವ್
ಮಂಜುನಾಥ್​ ಪ್ರಸಾದ್
ರಾಜೇಶ್ ದುಗ್ಗುಮನೆ
|

Updated on:Dec 22, 2020 | 10:24 PM

Share

ಬೆಂಗಳೂರು: ಬೆಂಗಳೂರು ಬೃಹತ್​ ನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎನ್​ ಮಂಜುನಾಥ್ ಪ್ರಸಾದ್​​ ಅವರಿಗೆ ಕೊರೊನಾ ವೈರಸ್​ ಇರುವುದು ದೃಢಪಟ್ಟಿದೆ. ಹೀಗಾಗಿ, ಅವರು ಸದ್ಯ ಕ್ವಾರಂಟೈನ್​ಗೆ ತೆರಳಿದ್ದಾರೆ.

ಮಂಜುನಾಥ್​ ಅವರಿಗೆ ಸೋಮವಾರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ಅವರು ಪರೀಕ್ಷೆಗೆ ಒಳಪಟ್ಟಿದ್ದರು. ಈ ವೇಳೆ ಅವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಇನ್ನು, ಆಯುಕ್ತರು ಸಂಪರ್ಕದಲ್ಲಿದ್ದವರು, ಸಭೆಗಳು ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಜೊತೆಗಿದ್ದವರು ಮತ್ತು ಇವರ ಸಂಪರ್ಕಕ್ಕೆ ಬಂದ ಮಾಧ್ಯಮದವರು ಕೂಡಲೇ COVID-19 ಪರೀಕ್ಷೆ ಮಾಡಿಸಿಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.

ಫಿಟ್‌ ಇಂಡಿಯಾ ಅಭಿಯಾನದ ಅಂಗವಾಗಿ ಬಿಬಿಎಂಪಿ ಹಾಗೂ ಬೆಂಗಳೂರು ಸ್ಮಾರ್ಟ್‌ಸಿಟಿ ಲಿಮಿಟೆಡ್‌ ಸಂಸ್ಥೆ ನಗರದಲ್ಲಿ ಭಾನುವಾರ ಸೈಕ್ಲಥಾನ್‌ ಜಾತಾ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲೂ ಆಯುಕ್ತರು ಭಾಗವಹಿಸಿದ್ದರು. ಅಲ್ಲದೆ, ಸಿಎಂ ಬಿಎಸ್​ ಯಡಿಯೂರಪ್ಪ ಅವರನ್ನು ಕೂಡ ಮಂಜುನಾಥ್​ ಭೇಟಿ ಮಾಡಿದ್ದರು.

ಕೊರೊನಾ ತಡೆಗೆ ಮಾರುಕಟ್ಟೆಗಳಿಗೆ ಹೊಸ ಮಾರ್ಗಸೂಚಿ

ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ಮಾರ್ಪಾಡಾಗಿದೆ ಎನ್ನುವ ವಿಚಾರ ಭಾರತದಲ್ಲೂ ಆತಂಕ ಸೃಷ್ಟಿಸಿದೆ. ಈಗಿರುವ ವೈರಸ್​ಗಿಂತ ಶೇ. 70ರಷ್ಟು ವೇಗವಾಗಿ ಈ ವೈರಸ್​ ಹರಡಲಿದೆ ಎಂದು ಕೂಡ ಹೇಳಾಗುತ್ತಿದೆ. ಈ ಮಧ್ಯೆ ಭಾರತದಲ್ಲಿ ಸಾಕಷ್ಟು ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಇದರ ಭಾಗವಾಗಿ ಮಾರುಕಟ್ಟೆಗಳಿಗೆ ಸರ್ಕಾರ ಹೊಸ ಮಾರ್ಗಸೂಚಿ ನೀಡಿದೆ.

ಹೋಲ್​ಸೇಲ್​, ರಿಟೇಲ್​, ಮಾಲ್​ಗಳಲ್ಲಿ ನಿಯಮ ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ. ಎಲ್ಲಾ ಮಾರುಕಟ್ಟೆಗಳಲ್ಲಿ 6 ಅಡಿ ದೈಹಿಕ ಅಂತರ ಕಡ್ಡಾಯವಾಗಿ ಪಾಲಿಸಬೇಕು. ಮಾಸ್ಕ್ ಹಾಗೂ ಗ್ಲೌಸ್​ ಕಡ್ಡಾಯವಾಗಿ ಬಳಸಬೇಕು. ಕೆಮ್ಮುವಾಗ, ಸೀನುವಾಗ ತೀವ್ರ ನಿಗಾವಹಿಸಬೇಕು ಎಂದು ಸರ್ಕಾರ ಹೇಳಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದರ ಮೇಲೆ ನಿಷೇಧ ಹೇರಲಾಗಿದೆ. ಪ್ರತಿದಿನ ಎಲ್ಲಾ ಶಾಪ್​ಗಳ ಮುಂದೆ ಸ್ವಚ್ಛ ಮಾಡುವುದು ಕಡ್ಡಾಯವಾಗಿದೆ. ಮಳಿಗೆಗಳ ಎಂಟ್ರಿ ಪಡೆಯುವ ಸ್ಥಳಗಳಲ್ಲಿ ಸ್ಯಾನಿಟೈಸರ್​ ಇಡೋದು ಕಡ್ಡಾಯವಾಗಿದೆ.

Tv9 Facebook Live | ಕೊವಿಡ್-19 ಎರಡನೇ ಅಲೆ, ಕೊರೊನಾ ವೈರಾಣು ರೂಪಾಂತರ, ತಜ್ಞರ ಅಭಿಪ್ರಾಯವೇನು?

Published On - 10:23 pm, Tue, 22 December 20

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!