AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಛೇ! ಉನ್ನತ ಐಎಎಸ್, ಐಪಿಎಸ್ ಅಧಿಕಾರಿಗಳದ್ದೇ ನಿಗಾ ಇದ್ದರೂ ನಡೆಯುತ್ತಿತ್ತಾ ಕೋವಿಡ್​ ಬೆಡ್ ಬ್ಲಾಕಿಂಗ್ ದಂಧೆ!?

BBMP Covid Bed Blocking Scam | ಹಾಗಿದ್ರೆ ಇದು ಐಎಎಸ್ ಹಾಗೂ ಐಪಿಎಸ್ ಗಳ ಗಮನಕ್ಕೆ ಬಂದೇ ಈ  ಕರಾಳ ದಂಧೆ ನಡೆಯುತ್ತಿತ್ತಾ? ಇಲ್ಲ ಇದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿಯೇ ಇರಲಿಲ್ಲವಾ? ಎಂಬ ಪ್ರಶ್ನೆಗಳೂ ಚಿತೆ ಆರುವುದಕ್ಕೂ ಮುನ್ನ ಜನರನ್ನು ಕಾಡತೊಡಗಿದೆ. ಉತ್ತರ ಶೀಘ್ರವೇ ಸರ್ಕಾರ ನಿಡಬೇಕಿದೆ. 

ಛೇ! ಉನ್ನತ ಐಎಎಸ್, ಐಪಿಎಸ್ ಅಧಿಕಾರಿಗಳದ್ದೇ ನಿಗಾ ಇದ್ದರೂ ನಡೆಯುತ್ತಿತ್ತಾ ಕೋವಿಡ್​ ಬೆಡ್ ಬ್ಲಾಕಿಂಗ್ ದಂಧೆ!?
ಛೇ! ಉನ್ನತ ಐಎಎಸ್, ಐಪಿಎಸ್ ಅಧಿಕಾರಿಗಳದ್ದೇ ನಿಗಾ ಇದ್ರೂ ನಡೆಯುತ್ತಿತ್ತಾ ಬೆಡ್ ಬ್ಲಾಕಿಂಗ್ ದಂಧೆ!?
ಸಾಧು ಶ್ರೀನಾಥ್​
|

Updated on:May 05, 2021 | 11:04 AM

Share

ಬೆಂಗಳೂರು: ನಿನ್ನೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಬಿಬಿಎಂಪಿ ವತಿಯಿಂದ ನಡೆಯುತ್ತಿದ್ದ ಕೊರೊನಾ ಸೋಂಕಿತರಿಗಾಗಿನ ಬೆಡ್ ಬ್ಲಾಕಿಂಗ್ ದಂಧೆಯನ್ನು ಬಯಲಿಗೆಳೆದಿದ್ದೇ ಬಂತು ಜೇನುಗೂಡಿಗೆ ಕಲ್ಲು ಒಗೆದಂತಾಗಿದೆ ಇಡೀ ಪ್ರಕರಣ.  More skeletons tumbling out of BBMP cupboard ಅಂತಾಗಿದೆ. ರಾತ್ರೋರಾತ್ರಿ ಪ್ರಕರಣವನ್ನು ನಿನ್ನೆಯೇ ಸಿಸಿಬಿಗೆ ವಹಿಸಲಾಗಿದ್ದು,  ಬಿಬಿಎಂಪಿ ಪೋರ್ಟ​​ಲ್​ ಮೂಲಕ ಬೆಡ್​ ಬ್ಲಾಕಿಂಗ್ ಕೇಸ್​ಗೆ ಸಂಬಂಧಿಸಿದಂತೆ ಇಬ್ಬರು ವೈದ್ಯರು ಸೇರಿದಂತೆ ಒಟ್ಟು 8 ಮಂದಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.  ಈ ಮಧ್ಯೆ, ಅನೇಕ ಕುತೂಹಲಕಾರಿ ಆದರೆ ಗಂಭೀರ ಪ್ರಶ್ನೆಗಳು ಉದ್ಭವವಾಗಿವೆ.  ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳು ನಿಗಾ ಇದ್ದರು ನಡೆಯುತ್ತಿತ್ತಾ ಬೆಡ್ ಬ್ಲಾಕಿಂಗ್ ದಂಧೆ ನಡೆದಿತ್ತಾ ಎಂಬ ಮಹುಮುಖ್ಯ ಪ್ರಶ್ನೆ ಎದುರಾಗಿದೆ.

ಬೆಂಗಳೂರಿನಲ್ಲಿ ನಡೆಯುತ್ತಿದ್ದ ಬೆಡ್ ಬ್ಲಾಕಿಂಗ್ ದಂಧೆಯನ್ನ ಯುವ ಸಂಸದ ತೇಜಸ್ವಿ ಸೂರ್ಯ ಅವರೇನೋ  ಹೊರಗೆಳದಿದ್ದು ಸರಿ. ಆದರೆ ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳ ಬೆಡ್ ನಿರ್ವಹಣೆಗೆ ಏಪ್ರಿಲ್ 6 ರಂದೇ ಹಿರಿಯ ಐಎಎಸ್ – ಐಪಿಎಸ್ ಅಧಿಕಾರಿಗಳನ್ನು ಸರ್ಕಾರ ನೇಮಿಸಿತ್ತು.

ಅಸುನೀಗಿದ ಅಮಾಯಕ ಜನರ ಕುಟುಂಬಸ್ಥರು ಆಕ್ರೋಶದಿಂದ ಈ ಪ್ರಶ್ನೆಗಳನ್ನ ಕೇಳುತ್ತಿದ್ದಾರೆ..

ಬೆಂಗಳೂರಿನ ಎಲ್ಲಾ ವಲಯಗಳಿಗೂ ಓರ್ವ ಐಪಿಎಸ್ ಅಧಿಕಾರಿ ಹಾಗೂ ಓರ್ವ ಐಎಎಸ್ ಅಧಿಕಾರಿಯನ್ನು ನೇಮಕ ಮಾಡಲಾಗಿತ್ತು. ನೇಮಕ ಮಾಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅದೇಶ ಹೊರಡಿಸಿದ್ದರು. ಇಷ್ಟಿದ್ದರೂ ಈ ಬೆಡ್ ಬ್ಲಾಕಿಂಗ್ ದಂಧೆ ನಡೆಯುತ್ತಿದ್ದಾದರೂ ಹೇಗೆ? ಎಂಬುದು ಬಿಲಿಯನ್​ ಡಾಲರ್​ ಪ್ರಶ್ನೆಯಾಗಿದೆ. ಬಿಬಿಎಂಪಿ ಅಧಿಕಾರಿಗಳ ಕರಾಳ ದಂಧೆಯಿಂದಾಗಿ ಪ್ರಾಣ ಕಳೆದುಕೊಂಡ ಅಮಾಯಕ ಜನರ ಕುಟುಂಬಸ್ಥರು ಆಕ್ರೋಶದಿಂದ ಈ ಪ್ರಶ್ನೆ ಕೇಳುತ್ತಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕಾಗಿ ವಲಯವಾರು ಉಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ನೇಮಕ

ಹಾಗಿದ್ರೆ ಇದು ಐಎಎಸ್ ಹಾಗೂ ಐಪಿಎಸ್ ಗಳ ಗಮನಕ್ಕೆ ಬಂದೇ ಈ  ಕರಾಳ ದಂಧೆ ನಡೆಯುತ್ತಿತ್ತಾ? ಇಲ್ಲ ಇದರ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿಯೇ ಇರಲಿಲ್ಲವಾ? ಎಂಬ ಪ್ರಶ್ನೆಗಳೂ ಚಿತೆ ಆರುವುದಕ್ಕೂ ಮುನ್ನ ಜನರನ್ನು ಕಾಡತೊಡಗಿದೆ. ಉತ್ತರ ಶೀಘ್ರವೇ ಸರ್ಕಾರ ನಿಡಬೇಕಿದೆ.

(bbmp covid bed blocking scam were senior ias ips officers failed to detect it or were the part of scam)

Also Read:

ಆಸ್ಪತ್ರೆಯಲ್ಲಿ ನರ್ಸ್​, ವೈದ್ಯರ ಜಗಳ; ಕಪಾಳಮೋಕ್ಷ ಮಾಡಿ ನಿಂದಿಸಿದ ವಿಡಿಯೋ ವೈರಲ್​

ಕೊರೊನಾ ನಿಯಂತ್ರಣಕ್ಕಾಗಿ ವಲಯವಾರು ಉಸ್ತುವಾರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ನೇಮಕ

Published On - 10:54 am, Wed, 5 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?