ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಬಿಬಿಎಂಪಿ ಸಭೆಯಲ್ಲಿ ಪಾದರಾಯನಪುರದ ವಾರ್ಡ್​ನ ರಸ್ತೆಗಳಿಗೆ ಕೆಲ ನಾಯಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ವಿರೋಧ ವ್ಯಕ್ತವಾಗಿತ್ತು.

ಪಾದರಾಯನಪುರ ರಸ್ತೆಗಳ ಮರುನಾಮಕರಣ: ಭಾರಿ ವಿರೋಧದ ಬೆನ್ನಲ್ಲೇ ಪ್ರಕ್ರಿಯೆ ರದ್ದುಗೊಳಿಸಲು ಮುಂದಾದ BBMP
ಬಿಬಿಎಂಪಿ ಮುಖ್ಯ ಕಚೇರಿ

Updated on: Jan 02, 2021 | 8:17 PM

ಬೆಂಗಳೂರು: ಪಾದರಾಯನಪುರದ 11 ರಸ್ತೆಗಳಿಗೆ ಅಲ್ಪ ಸಮುದಾಯಕ್ಕೆ ಸೇರಿರುವ ಸಮಾಜ ಸೇವಕರ ಹೆಸರಿಡಲು ತೀವ್ರ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ, ಈ ಪ್ರಕ್ರಿಯೆ ರದ್ದುಗೊಳಿಸುವಂತೆ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಕಳೆದ ಸೆಪ್ಟೆಂಬರ್​ನಲ್ಲಿ ನಡೆದ ಸಭೆಯಲ್ಲಿ ಪಾದರಾಯನಪುರ ವಾರ್ಡ್​ನ ರಸ್ತೆಗಳಿಗೆ ಈ ಸಮಾಜಸೇವಕರ ಹೆಸರು ಇಡಲು ಬಿಬಿಎಂಪಿ ನಿರ್ಧರಿಸಿತ್ತು. ಆದರೆ, ಇದಕ್ಕೆ ಸಂಸದರಾದ ಅನಂತ್​ ಕುಮಾರ್​ ಹೆಗಡೆ, ಪಿ.ಸಿ ಮೋಹನ್​ ಮತ್ತು ತೇಜಸ್ವಿ ಸೂರ್ಯ ಭಾರಿ ವಿರೋಧ ಹೊರ ಹಾಕಿದ್ದರು. ಹೀಗಾಗಿ, ಮಂಜುನಾಥ ಪ್ರಸಾದ್ ಸರ್ಕಾರಕ್ಕೆ ಈ ಮನವಿ ಸಲ್ಲಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಪಾಲಿಕೆಯ ಈ ನಿರ್ಧಾರಕ್ಕೆ ಆಕ್ರೋಶ ಹೊರ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ಟ್ವೀಟ್​ ಮೂಲಕ ಬಿಬಿಎಂಪಿಗೆ ಬಿಸಿ ಮುಟ್ಟಿಸಿದ್ದರು. ಅನಂತ್​ ಕುಮಾರ್ ಹೆಗಡೆ ಕೂಡ ಪತ್ರ ಬರೆದು, ಈ ನಿರ್ಧಾರ ಕೈಬಿಡಲು ಆಗ್ರಹಿಸಿದ್ದರು.

ನಮ್‌ ಏರಿಯಾಗೆ ಬೇರೆಯವರನ್ನ ಸೇರಿಸಬೇಡಿ -‘ಕೊರೊನಾ ಪಾದರಾಯನಪುರ’ ಟ್ಯಾಗ್​ಲೈನ್ ತಪ್ಪಿಸಲು ಸ್ಥಳೀಯರ ಹರಸಾಹಸ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us