AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ

ಪಂಚೆಯ ವಿಚಾರ ವಿಧಾನಸಭೆಯ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಜಿಟಿ.ಮಾಲ್​ ಮುಚ್ಚಿಸುವಂತೆ ಸದನದಲ್ಲಿ ಬಹುತೇಕ ಶಾಸಕರು ಒತ್ತಾಯಿಸಿದ್ದಾರೆ. ಆದರೆ ಮಾಲ್​ಗೆ ಬೀಗ ಜಡಿಯಲು ಸೂಕ್ತ ಕಾರಣ ಸಿಗದ ಹಿನ್ನೆಲೆ ಬಿಬಿಎಂಪಿಯಿಂದ ಮೀನಾಮೇಷ ಮಾಡಲಾಗುತ್ತಿದೆ. ಕೇವಲ ಅಂಗಡಿಗಳಿಗೆ ನೋಟಿಸ್ ನೀಡಲು ಪ್ಲ್ಯಾನ್ ಮಾಡಲಾಗುತ್ತಿದೆ.

ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ
ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Jul 18, 2024 | 3:52 PM

Share

ಬೆಂಗಳೂರು, ಜುಲೈ 18: ನಿನ್ನೆಯಷ್ಟೇ ನಗರದ ಜಿಟಿ ಮಾಲ್​ನಲ್ಲಿ (GT Mall) ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ, ಮಾಲ್​​ನ ಒಳಗೆ ರೈತನನ್ನ ಬಿಟ್ಟಿರಲಿಲ್ಲ. ಇದೇ ವಿಚಾರವಾಗಿ ಆಕ್ರೋಶಭುಗಿಲೆದ್ದಿತ್ತು. ಇದೀಗ ಪಂಚೆ ಫೈಟ್​ ಜಿಟಿ ಮಾಲ್​ನಿಂದ ವಿಧಾನಸೌಧದವರೆಗೂ ಹೋಗಿದ್ದು, ಮಾಲ್​ಗೂ ಬೀಗ ಜಡಿಯುವ ಪರಿಸ್ಥಿತಿ ಬಂದಿದೆ. ಆದರೆ ಸೂಕ್ತ ಕಾರಣ ಸಿಗದ ಹಿನ್ನೆಲೆ ಮಾಲ್​ಗೆ ಬೀಗ ಜಡಿಯಲು ಬಿಬಿಎಂಪಿಯಿಂದ (BBMP) ಮೀನಾಮೇಷ ಮಾಡಲಾಗುತ್ತಿದೆ.

ಈವರೆಗೆ ಪಾಲಿಕೆಗೆ ಸರ್ಕಾರದಿಂದ ಯಾವುದೇ ಲಿಖಿತ ಆದೇಶ ಬಂದಿಲ್ಲ. ಹೀಗಾಗಿ ಕೇವಲ ಅಂಗಡಿಗಳಿಗೆ ನೋಟಿಸ್ ನೀಡಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆ. ಜಿಟಿ ಮಾಲ್​ಗೆ ಬೀಗ ಹಾಕಲು ಬಲವಾದ ಕಾರಣ ಇಲ್ಲ. ಹಿರಿಯ ಅಧಿಕಾರಿಗಳು ಕೂಡ ಯಾವುದೇ ಮಾಹಿತಿ ನೀಡಿಲ್ಲ. ಈ ಹಿನ್ನೆಲೆ ಮಾಲ್​ನಲ್ಲಿನ ಕೆಲ ಅಂಗಡಿಗಳಿಗೆ ನೋಟಿಸ್ ನೀಡಲು ಪ್ಲ್ಯಾನ್ ಮಾಡುತ್ತಿರುವುದಾಗಿ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್​ ಬಂದ್​​, ಸರ್ಕಾರ ಆದೇಶ

ಬೀಗ ಹಾಕುವ ಮುನ್ನ ನೋಟಿಸ್ ನೀಡಿರಬೇಕು. ಆದರೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಅಲ್ಲದೇ ಮಾಲ್ ಮಾಲೀಕರ ಗಮನಕ್ಕೂ ತಂದಿಲ್ಲ. ಹಾಗಾಗಿ ಏಕಾಏಕಿ ಬೀಗ ಹಾಕಲು ಸಕಾರಣ ಇಲ್ಲದೇ ಪಾಲಿಕೆ ಪೇಚಿಗೆ ಸಿಲುಕಿದೆ. ಸದ್ಯ ಜಂಟಿ ಆಯುಕ್ತರ ಆಗಮನಕ್ಕೆ ಪಾಲಿಕೆ ಸಿಬ್ಬಂದಿ ಕಾಯುತ್ತಿದ್ದಾರೆ. ಇತ್ತ ಮಾಲ್ ಮಾಲೀಕರು ಕೋರ್ಟ ಮೊರೆ ಹೋದರೆ ಏನು ಉತ್ತರ ಕೊಡುವುದು ಅಂತಾ ಚಿಂತಿಸುತ್ತಿದ್ದಾರೆ. ಈ ಹಿನ್ನೆಲೆ ಏನು ಮಾಡಲು ತೋಚದೇ ಸುಮ್ಮನೆ ಪಾಲಿಕೆ ಅಧಿಕಾರಿಗಳು ಓಡಾಡಿಕೊಂಡಿದ್ದಾರೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಜಿಟಿ ಮಾಲ್ 

ಈ ಪ್ರಕರಣ ಒಂದು ಕಡೆಯಾದರೆ ಇದೀಗ ಜಿಟಿ ಮಾಲ್​ಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಕಳೆದ ಎರಡು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಇಂದು ಮಧ್ಯಾಹ್ನ 1.30ಕ್ಕೆ ವರದಿ ಪಾಲಿಕೆಯ ಕೈ ಸೇರಲಿದೆ.

ಇದನ್ನೂ ಓದಿ: ಜಿಟಿ ಮಾಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಬೇಕು: ಶರಣಗೌಡ ಕಂದ್ಕೂರ್

ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಾಹ್ನದ ಬಳಿಕ ಪಾಲಿಕೆಗೆ ಕೋರ್ಟ್ ಸೂಚನೆ ನೀಡಲಿದೆ. ಸದ್ಯ ದಿನಾಂಕ 31ರ ವರೆಗೆ ಬಾಕಿ ಪಾವತಿಗೆ ಅವಕಾಶ ಇದೆ. ಆದರೆ ತೆರಿಗೆ ಬಾಕಿ ಮಧ್ಯೆ ಇದೀಗ ಪಂಚೆ ಸಂಕಷ್ಟ ಎದುರಾಗಿತ್ತು. ಈ ಎಲ್ಲಾ ಕಾರಣಗಳಿಂದ ಮಾಲ್​ಗೆ ಬಹುತೇಕ ಬೀಗ ಬೀಳುವುದು ಫಿಕ್ಸ್​ ಎಂದು ಬಿಬಿಎಂಪಿ ಅಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಕೊಲ್ಕತ್ತಾ ಅಗ್ನಿ ದುರಂತದ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ