AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ

ಪಂಚೆಯ ವಿಚಾರ ವಿಧಾನಸಭೆಯ ಅಧಿವೇಶನದಲ್ಲೂ ಪ್ರತಿಧ್ವನಿಸಿದೆ. ಜಿಟಿ.ಮಾಲ್​ ಮುಚ್ಚಿಸುವಂತೆ ಸದನದಲ್ಲಿ ಬಹುತೇಕ ಶಾಸಕರು ಒತ್ತಾಯಿಸಿದ್ದಾರೆ. ಆದರೆ ಮಾಲ್​ಗೆ ಬೀಗ ಜಡಿಯಲು ಸೂಕ್ತ ಕಾರಣ ಸಿಗದ ಹಿನ್ನೆಲೆ ಬಿಬಿಎಂಪಿಯಿಂದ ಮೀನಾಮೇಷ ಮಾಡಲಾಗುತ್ತಿದೆ. ಕೇವಲ ಅಂಗಡಿಗಳಿಗೆ ನೋಟಿಸ್ ನೀಡಲು ಪ್ಲ್ಯಾನ್ ಮಾಡಲಾಗುತ್ತಿದೆ.

ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ
ಜಿಟಿ ಮಾಲ್​ಗೆ ಬೀಗ ಜಡಿಯಲು ಪಾಲಿಕೆ ಮೀನಾಮೇಷ: ಸೂಕ್ತ ಕಾರಣ ಸಿಗದೇ ಗೊಂದಲಕ್ಕೆ ಸಿಲುಕಿದ ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Jul 18, 2024 | 3:52 PM

Share

ಬೆಂಗಳೂರು, ಜುಲೈ 18: ನಿನ್ನೆಯಷ್ಟೇ ನಗರದ ಜಿಟಿ ಮಾಲ್​ನಲ್ಲಿ (GT Mall) ಪಂಚೆ ಧರಿಸಿದ್ದಾರೆ ಎನ್ನುವ ಕಾರಣಕ್ಕೆ, ಮಾಲ್​​ನ ಒಳಗೆ ರೈತನನ್ನ ಬಿಟ್ಟಿರಲಿಲ್ಲ. ಇದೇ ವಿಚಾರವಾಗಿ ಆಕ್ರೋಶಭುಗಿಲೆದ್ದಿತ್ತು. ಇದೀಗ ಪಂಚೆ ಫೈಟ್​ ಜಿಟಿ ಮಾಲ್​ನಿಂದ ವಿಧಾನಸೌಧದವರೆಗೂ ಹೋಗಿದ್ದು, ಮಾಲ್​ಗೂ ಬೀಗ ಜಡಿಯುವ ಪರಿಸ್ಥಿತಿ ಬಂದಿದೆ. ಆದರೆ ಸೂಕ್ತ ಕಾರಣ ಸಿಗದ ಹಿನ್ನೆಲೆ ಮಾಲ್​ಗೆ ಬೀಗ ಜಡಿಯಲು ಬಿಬಿಎಂಪಿಯಿಂದ (BBMP) ಮೀನಾಮೇಷ ಮಾಡಲಾಗುತ್ತಿದೆ.

ಈವರೆಗೆ ಪಾಲಿಕೆಗೆ ಸರ್ಕಾರದಿಂದ ಯಾವುದೇ ಲಿಖಿತ ಆದೇಶ ಬಂದಿಲ್ಲ. ಹೀಗಾಗಿ ಕೇವಲ ಅಂಗಡಿಗಳಿಗೆ ನೋಟಿಸ್ ನೀಡಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆ. ಜಿಟಿ ಮಾಲ್​ಗೆ ಬೀಗ ಹಾಕಲು ಬಲವಾದ ಕಾರಣ ಇಲ್ಲ. ಹಿರಿಯ ಅಧಿಕಾರಿಗಳು ಕೂಡ ಯಾವುದೇ ಮಾಹಿತಿ ನೀಡಿಲ್ಲ. ಈ ಹಿನ್ನೆಲೆ ಮಾಲ್​ನಲ್ಲಿನ ಕೆಲ ಅಂಗಡಿಗಳಿಗೆ ನೋಟಿಸ್ ನೀಡಲು ಪ್ಲ್ಯಾನ್ ಮಾಡುತ್ತಿರುವುದಾಗಿ ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಂದ ಮಾಹಿತಿ ನೀಡಲಾಗಿದೆ.

ಇದನ್ನೂ ಓದಿ: ರೈತನಿಗೆ ಅಪಮಾನ: 7 ದಿನ ಜಿಟಿ ಮಾಲ್​ ಬಂದ್​​, ಸರ್ಕಾರ ಆದೇಶ

ಬೀಗ ಹಾಕುವ ಮುನ್ನ ನೋಟಿಸ್ ನೀಡಿರಬೇಕು. ಆದರೆ ಯಾವುದೇ ನೋಟಿಸ್ ಕೊಟ್ಟಿಲ್ಲ. ಅಲ್ಲದೇ ಮಾಲ್ ಮಾಲೀಕರ ಗಮನಕ್ಕೂ ತಂದಿಲ್ಲ. ಹಾಗಾಗಿ ಏಕಾಏಕಿ ಬೀಗ ಹಾಕಲು ಸಕಾರಣ ಇಲ್ಲದೇ ಪಾಲಿಕೆ ಪೇಚಿಗೆ ಸಿಲುಕಿದೆ. ಸದ್ಯ ಜಂಟಿ ಆಯುಕ್ತರ ಆಗಮನಕ್ಕೆ ಪಾಲಿಕೆ ಸಿಬ್ಬಂದಿ ಕಾಯುತ್ತಿದ್ದಾರೆ. ಇತ್ತ ಮಾಲ್ ಮಾಲೀಕರು ಕೋರ್ಟ ಮೊರೆ ಹೋದರೆ ಏನು ಉತ್ತರ ಕೊಡುವುದು ಅಂತಾ ಚಿಂತಿಸುತ್ತಿದ್ದಾರೆ. ಈ ಹಿನ್ನೆಲೆ ಏನು ಮಾಡಲು ತೋಚದೇ ಸುಮ್ಮನೆ ಪಾಲಿಕೆ ಅಧಿಕಾರಿಗಳು ಓಡಾಡಿಕೊಂಡಿದ್ದಾರೆ.

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಜಿಟಿ ಮಾಲ್ 

ಈ ಪ್ರಕರಣ ಒಂದು ಕಡೆಯಾದರೆ ಇದೀಗ ಜಿಟಿ ಮಾಲ್​ಗೆ ಮತ್ತೊಂದು ಸಂಕಷ್ಟ ಶುರುವಾಗಿದೆ. ಕಳೆದ ಎರಡು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಈ ಬಗ್ಗೆ ಇಂದು ಮಧ್ಯಾಹ್ನ 1.30ಕ್ಕೆ ವರದಿ ಪಾಲಿಕೆಯ ಕೈ ಸೇರಲಿದೆ.

ಇದನ್ನೂ ಓದಿ: ಜಿಟಿ ಮಾಲ್ ಮಾಲೀಕನ ವಿರುದ್ಧ ಎಫ್ಐಆರ್ ದಾಖಲಿಸಬೇಕು: ಶರಣಗೌಡ ಕಂದ್ಕೂರ್

ಕೋರ್ಟ್ ಮೆಟ್ಟಿಲೇರಿದ್ದರಿಂದ ಮಧ್ಯಾಹ್ನದ ಬಳಿಕ ಪಾಲಿಕೆಗೆ ಕೋರ್ಟ್ ಸೂಚನೆ ನೀಡಲಿದೆ. ಸದ್ಯ ದಿನಾಂಕ 31ರ ವರೆಗೆ ಬಾಕಿ ಪಾವತಿಗೆ ಅವಕಾಶ ಇದೆ. ಆದರೆ ತೆರಿಗೆ ಬಾಕಿ ಮಧ್ಯೆ ಇದೀಗ ಪಂಚೆ ಸಂಕಷ್ಟ ಎದುರಾಗಿತ್ತು. ಈ ಎಲ್ಲಾ ಕಾರಣಗಳಿಂದ ಮಾಲ್​ಗೆ ಬಹುತೇಕ ಬೀಗ ಬೀಳುವುದು ಫಿಕ್ಸ್​ ಎಂದು ಬಿಬಿಎಂಪಿ ಅಧಿಕಾರಿಗಳಿಂದ ಈ ಬಗ್ಗೆ ಅಧಿಕೃತ ಮಾಹಿತಿ ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?