AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್

ಐತಿಹಾಸಿಕ ಕರಗ ಮಹೋತ್ಸವ ಆಚರಣೆ ಕುರಿತಾಗಿ ಇಂದು(ಏಪ್ರಿಲ್​ 05) ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ.

ಕಳೆದ ವರ್ಷದಂತೆ.. ಈ ಬಾರಿಯೂ ಬೆಂಗಳೂರು ಕರಗದ ಸಂಭ್ರಮಕ್ಕೆ ಕೊರೊನಾ ಬ್ರೇಕ್
ಐತಿಹಾಸಿಕ ಕರಗ ಮಹೋತ್ಸವ ಆಚರಣೆ ಕುರಿತಾದ ಸಭೆ
shruti hegde
| Edited By: |

Updated on: Apr 05, 2021 | 4:35 PM

Share

ಬೆಂಗಳೂರು: ಏಪ್ರಿಲ್​ 27ರಂದು ನಡೆಯಲಿರುವ ಬೆಂಗಳೂರು ಐತಿಹಾಸಿಕ ಕರಗ ಮಹೋತ್ಸವ ಆಚರಣೆ ಕುರಿತಾಗಿ ಇಂದು(ಏಪ್ರಿಲ್​ 05) ಬಿಬಿಎಂಪಿ ಆಯುಕ್ತರ ನೇತೃತ್ವದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಸಭೆ ನಡೆಸಲಾಗಿದೆ. ಸಭೆಯಲ್ಲಿ ಪೊಲೀಸ್ ಇಲಾಖೆ ಅಧಿಕಾರಿ, ಜಿಲ್ಲಾಧಿಕಾರಿ ಹಾಗೂ ಉತ್ಸವ ಸಮಿತಿಯ ಸದಸ್ಯರು ಉಪಸ್ಥಿತಿಯಲ್ಲಿದ್ದರು.

ಕರಗ ಮಹೋತ್ಸವ ಸಂಬಂಧಿಸಿದಂತೆ, ಕರಗ ಮಹೋತ್ಸವ ಹೇಗೆ ನಡೆಯಬೇಕು. ಅಥವಾ ಮಹೋತ್ಸವ ಬೇಡವೇ ಎಂಬುವುದರ ಕುರಿತಾಗಿ ಸಭೆ ಕೈಗೊಳ್ಳಲಾಯಿತು. ಈ ಕುರಿತಾಗಿ ಮಾತನಾಡಿದ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ, ಐತಿಹಾಸಿಕ ಕರಗ ಮಹೋತ್ಸವ ನಡೆಸಲು ಮೊದಲು ಉತ್ಸವ ಸಮಿತಿ ರಚನೆ ಮಾಡಲಾಗುತ್ತದೆ. ಕೊವಿಡ್ ಹಿನ್ನೆಲೆ ಸರ್ಕಾರದ ಆದೇಶ ಪಾಲನೆ ಮಾಡಬೇಕು. ಸರ್ಕಾರದ ಆದೇಶ ಏಪ್ರಿಲ್ 20ರವರೆಗೂ ಜಾರಿಯಲ್ಲಿರುತ್ತದೆ. ಮುಂದಿನ ದಿನಗಳಲ್ಲಿ ಸರ್ಕಾರದ ಆದೇಶ ನೋಡುತ್ತೇವೆ. ಸದ್ಯಕ್ಕೆ ಕರಗ ಮಹೋತ್ಸವಕ್ಕೆ ನಿರ್ಬಂಧ ಅನಿವಾರ್ಯವಾಗಿದೆ. ಈಗಿರುವ ಆದೇಶದ ಪ್ರಕಾರ ಮೆರವಣಿಗೆಗೆ ಅವಕಾಶ ಇಲ್ಲ ಎಂದು ತಿಳಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿ ಮಂಜುನಾಥ್​ ಹೇಳಿಕೆ ನೀಡಿ, ಕರಗ ಮಹೋತ್ಸವ ನಡೆಸುವ ಸಮಿತಿಯ ಕಾಲಾವಧಿ ಮುಕ್ತಾಯಗೊಂಡಿದೆ. ಈಗ ಹೊಸದಾಗಿ ಆಡಳಿತಾಧಿಕಾರಿ ನೇಮಕ ಮಾಡ್ತೇವೆ. ಉತ್ಸವ ಸಮಿತಿ ರಚನೆ ಆಗುತ್ತದೆ ನಂತರ, ಹೇಗೆ ಕಾರ್ಯಕ್ರಮ ನಡೆಸಬೇಕು ಎಂದು ತೀರ್ಮಾನ ಮಾಡುತ್ತೇವೆ. ಈಗಿನ ಆದೇಶ ಮುಂದುವರೆದರೆ ಮಹೋತ್ಸವದಲ್ಲಿ ಸಾರ್ವಜನಿಕರು ಸೇರುವಂತಿಲ್ಲ. ಕೇವಲ ಪೂಜೆಗೆ ಮಾತ್ರ ಸೀಮಿತವಾಗಿರುತ್ತದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೊನಾ 2ನೇ ಅಲೆ: ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಧಾರ್ಮಿಕ ಉತ್ಸವಕ್ಕೆ ನಿರ್ಬಂಧ​

ಮೇಲುಕೋಟೆಯಲ್ಲಿ ಸಂಭ್ರಮದ ವೈರಮುಡಿ ಉತ್ಸವ: ವಜ್ರಖಚಿತ ಕಿರೀಟದೊಂದಿಗೆ ಕಂಗೊಳಿಸಿದ ಚೆಲುವನಾರಾಯಣಸ್ವಾಮಿ

(BBMP meeting has been held Bengaluru Karaga festival on April 05)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್