AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ. ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ. ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ […]

ಗುರುವಾರದಿಂದ BBMP ಅಧಿಕಾರಿಗಳು, ಸಿಬ್ಬಂದಿ ಬೆಳಗ್ಗೆ 6ಕ್ಕೆ ಕೆಲಸಕ್ಕೆ ಹಾಜರ್!
Follow us
ಸಾಧು ಶ್ರೀನಾಥ್​
|

Updated on:Nov 19, 2019 | 10:50 AM

ಬೆಂಗಳೂರು: ನಗರದ ಕಸದ ಸಮಸ್ಯೆ ನಿವಾರಣೆಗೆ ಹೊಸ ಪ್ಲ್ಯಾನ್ ರೂಪುಗೊಂಡಿದೆ. ಮೇಯರ್ ಹಾಗೂ ಕಮಿಷನರ್ ಸೇರಿ ಈ ಕಸದ ಸಮಸ್ಯೆಗೆ ಇತಿಶ್ರೀ ಹಾಡಲು ಮುಂದಾಗಿದ್ದಾರೆ.

ಬದಲಾಗಲಿದೆ ಅಧಿಕಾರಿ, ಸಿಬ್ಬಂದಿ ಕೆಲಸದ ಸಮಯ: ಕಸದ ಸಮಸ್ಯೆ ನಿವಾರಣೆಗೆ ಮೇಯರ್ ಬಿಬಿಎಂಪಿ ಅಧಿಕಾರಿಗಳು, ಸಿಬ್ಬಂದಿ ಕೆಲಸದ ಸಮಯವನ್ನು ಬದಲಾಯಿಸಿದ್ದಾರೆ. ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಆರಂಭವಾಗಲಿದೆ. ಇದು ಕೇವಲ ಬಿಬಿಎಂಪಿ ಸಿಬ್ಬಂದಿಗೆ ಮಾತ್ರವಲ್ಲ. ಅಧಿಕಾರಿಗಳಿಗೂ ಅನ್ವಯ.

ಪ್ರತಿ ವಾರ್ಡ್ ನ ಹೆಲ್ತ್ ಇನ್ಸ್ಪೆಕ್ಟರ್, ಎಇ, ಎಇಇ, ಚೀಫ್ ಇಂಜಿನಿಯರ್, ಜಂಟಿ ಆಯುಕ್ತ, ವಿಶೇಷ ಆಯುಕ್ತರು ಸೇರಿದಂತೆ ಕಮಿಷನರ್ ಕೂಡಾ ಬೆಳಗ್ಗೆ ಆರು ಗಂಟೆಗೆ ಕೆಲಸಕ್ಕೆ ಹಾಜರಿರಬೇಕು. ಪ್ರತಿ ರಸ್ತೆ, ಬೀದಿ, ಏರಿಯಾದ ಕಸ ವಿಲೇವಾರಿ ಮಾಡಿಸಬೇಕು. ಬೆಳಗ್ಗೆ ಆರು ಗಂಟೆಗೆ ಡ್ಯೂಟಿಗೆ ಹಾಜರಾಗದಿದ್ರೆ ಪರ್ಮನೆಂಟ್ ಮನೆಗೆ ಕಳಿಸಲಾಗುತ್ತೆ.

ಇಂದೋರ್ ಪದ್ಧತಿ ಅಳವಡಿಸಿದ ಬಿಬಿಎಂಪಿ ಬೆಳಗ್ಗೆ 6 ಗಂಟೆಯಿಂದ 9 ಗಂಟೆವರೆಗೂ ನಗರದ ಸ್ವಚ್ಛತೆಯ ಕೆಲಸ ಮಾಡಬೇಕು. 11 ಗಂಟೆಯಿಂದ ರೆಗ್ಯೂಲರ್ ಡ್ಯೂಟಿ. ಗುರುವಾರದಿಂದ ಬಿಬಿಎಂಪಿಯಲ್ಲಿ ಹೊಸ ಡ್ಯೂಟಿ ಟೈಮ್ ಶುರುವಾಗಲಿದ್ದು, ಇಂದೋರ್ ಪದ್ಧತಿಯನ್ನ ಅಳವಡಿಸಲಾಗಿದೆ ಎಂದು ಮೇಯರ್ ಗೌತಮ್ ಕುಮಾರ್ ತಿಳಿಸಿದ್ದಾರೆ.

Published On - 6:47 am, Tue, 19 November 19

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್