AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆಗಳಲ್ಲಿ ನೀರು, ಶೌಚಾಲಯ ಸ್ಥಿತಿಗತಿ ವರದಿ ಸಲ್ಲಿಸದ ಬಿಬಿಎಂಪಿ: ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ

ಬಿಬಿಎಂಪಿ ಶಾಲೆಗಳಲ್ಲಿ ನೀರು, ಶೌಚಾಲಯ ಸ್ಥಿತಿಗತಿ ವರದಿ ಸಲ್ಲಿಸದ ಹಿನ್ನೆಲೆ  ಬಿಬಿಎಂಪಿ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಹಳ ಬಡತನದಲ್ಲಿರುವ ಮಕ್ಕಳು ಬಿಬಿಎಂಪಿ ಶಾಲೆಯಲ್ಲಿ ಓದುತ್ತಾರೆ. ನೀವು ಶಾಲೆಗಳ ಸೌಕರ್ಯ ಸುಧಾರಿಸುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಹೈಕೋರ್ಟ್ ಮಾ.27 ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಶಾಲೆಗಳಲ್ಲಿ ನೀರು, ಶೌಚಾಲಯ ಸ್ಥಿತಿಗತಿ ವರದಿ ಸಲ್ಲಿಸದ ಬಿಬಿಎಂಪಿ: ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ
ಹೈಕೋರ್ಟ್, ಬಿಬಿಎಂಪಿ
Follow us
Ramesha M
| Updated By: ಗಂಗಾಧರ​ ಬ. ಸಾಬೋಜಿ

Updated on: Mar 11, 2024 | 8:55 PM

ಬೆಂಗಳೂರು, ಮಾರ್ಚ್​​ 11: ಬಿಬಿಎಂಪಿ (BBMP) ಶಾಲೆಗಳಲ್ಲಿ ನೀರು, ಶೌಚಾಲಯ ಸ್ಥಿತಿಗತಿ ವರದಿ ಸಲ್ಲಿಸದ ಹಿನ್ನೆಲೆ  ಬಿಬಿಎಂಪಿ ವಿಳಂಬ ನೀತಿಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಬಹಳ ಬಡತನದಲ್ಲಿರುವ ಮಕ್ಕಳು ಬಿಬಿಎಂಪಿ ಶಾಲೆಯಲ್ಲಿ ಓದುತ್ತಾರೆ. ನೀವು ಶಾಲೆಗಳ ಸೌಕರ್ಯ ಸುಧಾರಿಸುತ್ತಿಲ್ಲ. 10 ವರ್ಷವಾದರೂ ಬಿಬಿಎಂಪಿ ಶಾಲೆಗಳ ಸ್ಥಿತಿಗತಿ ವಿವರ ನೀಡಿಲ್ಲ. ಬಿಬಿಎಂಪಿ, ಬಿಡಿಎ, ಕೆಐಎಡಿಬಿ ಕೆಟ್ಟ ದಾವೆದಾರರು ಎಂದು ಸಿಜೆ ಎನ್.ವಿ.ಅಂಜಾರಿಯಾ, ನ್ಯಾ. ಕೃಷ್ಣ ದೀಕ್ಷಿತ್​​ರಿದ್ದ ಪೀಠ ಅಸಮಾಧಾನ ಹೊರಹಾಕಿದ್ದಾರೆ. 123 ಸರ್ಕಾರಿ ಶಾಲೆಗಳಲ್ಲಿ ಒಂದೇ ಒಂದು ಶೌಚಾಲಯವಿದೆ‌. ಬಿಬಿಎಂಪಿ ತನ್ನ ಶಾಲೆಗಳಲ್ಲಿ ಸರ್ವೆ ನಡೆಸಿ ವರದಿ ನೀಡಬೇಕಿದೆ ಎಂದು ಹೈಕೋರ್ಟ್​ಗೆ ಅಮೈಕಸ್ ಕ್ಯೂರಿ ಕೆ.ಎನ್.ಫಣೀಂದ್ರ ಹೇಳಿದ್ದು ಹೈಕೋರ್ಟ್ ಮಾ.27 ಕ್ಕೆ ವಿಚಾರಣೆ ನಿಗದಿಪಡಿಸಿದೆ.

ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರ ಕೊರತೆ, ನಿರ್ವಹಣೆಯ ನಿರ್ಲಕ್ಷ್ಯ ಸೇರಿ ವಿವಿಧ ಕಾರಣಗಳಿಂದ ಇತ್ತೀಚೆಗಷ್ಟೇ ಬಿಬಿಎಂಪಿ ಶಾಲೆ-ಪಿಯು ಕಾಲೇಜುಗಳನ್ನ ಸರ್ಕಾರದ ಸುಪರ್ದಿಗೆ ಪಡೆಯುವುದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದರು. ಅದರಂತೆ ಬಿಬಿಎಂಪಿ ನಿರ್ವಹಣೆಯಲ್ಲಿದ್ದ 142 ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, 17 ಪಿಯು ಕಾಲೇಜುಗಳನ್ನ ಸರ್ಕಾರ ಸುಪರ್ದಿಗೆ ಪಡೆಯುವ ನಿರ್ಧಾರವಾಗಿತ್ತು.

ಇದನ್ನೂ ಓದಿ: ಬಡ ಮಕ್ಕಳ ಕುಡಿಯುವ ನೀರಲ್ಲೂ ಹಣ ಮಾಡಲು ಮುಂದಾದ ಬಿಬಿಎಂಪಿ ಅಧಿಕಾರಿಗಳು; ಶಾಲೆ-ಕಾಲೇಜಿಗೆ ಕಳಪೆ ವಾಟರ್ ಫಿಲ್ಟರ್ ಅಳವಡಿಕೆ

ಇತ್ತೀಚೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಖಾಸಗಿ ಶಾಲೆಗಳ ರೀತಿ BBMP ಶಾಲೆಗಳನ್ನು ಮಾಡಲು ತೀರ್ಮಾನಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲಾ ಶಾಲೆಗಳನ್ನು ಶಿಕ್ಷಣ ಇಲಾಖೆ ನಡೆಸಲಿದ್ದು, ಬಿಬಿಎಂಪಿಯಿಂದ ಶಾಲೆಗಳ ನಿರ್ವಹಣೆ ಮಾಡುತ್ತೇವೆ. ಆದರೆ ಶಿಕ್ಷಣದ ವಿಚಾರವಾಗಿ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸ್ಪಷ್ಟನೆ ನೀಡಿದ್ದರು.

2,000 ಪಬ್ಲಿಕ್ ಶಾಲೆ ಸ್ಥಾಪಿಸಲು ತೀರ್ಮಾನ

ರಾಜ್ಯದಲ್ಲಿ 2,000 ಪಬ್ಲಿಕ್ ಶಾಲೆ ಸ್ಥಾಪಿಸಲು ತೀರ್ಮಾನ ಮಾಡಿದ್ದೇವೆ. ಸಿಎಸ್​ಆರ್ ಅಡಿಯಲ್ಲಿ ಈ ಶಾಲೆಗಳನ್ನ ನಿರ್ಮಾಣ ಮಾಡಲಿದ್ದೇವೆ. ಶಿಕ್ಷಣ ಸಂಸ್ಥೆಯವರು ಒಂದೊಂದು ಶಾಲೆ ದತ್ತು ತೆಗೆದುಕೊಳ್ಳಬೇಕು. ಶಾಲೆಗಳನ್ನು ದತ್ತು ತೆಗೆದುಕೊಂಡು ವೇತನವನ್ನು ಅವರೇ ಕೊಡಬೇಕು. ಆದರೆ ಆ ಶಾಲೆಗಳು ಕೂಡ ಸರ್ಕಾರಿ ರೀತಿಯಲ್ಲೇ ನಡೆಯಲಿದೆ. ಉಚಿತ ಶಿಕ್ಷಣ ನೀಡಲಿದ್ದಾರೆ, ಸಾರಿಗೆ ವೆಚ್ಚ ಮಾತ್ರ ಬರಬಹುದು. 1,900 ಕೋಟಿಯಷ್ಟು ಸಿಎಸ್​ಆರ್ ಫಂಡ್ ಬರಬೇಕಿದೆ. ಜನವರಿಯಲ್ಲಿ ಸಿಎಸ್​ಆರ್ ಫಂಡ್ ಬಗ್ಗೆ ಸಭೆ ಮಾಡುತ್ತೇವೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ಒಳ್ಳೆಯದಕ್ಕೂ, ಕೆಟ್ಟದ್ದಕ್ಕೂ ಓಕೆ ಅಂತಾಳೆ; ಪತ್ನಿ ಬಗ್ಗೆ ಮಾತಾಡಿದ ಹಂಸಲೇಖ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ರಾಷ್ಟ್ರಪತಿಯವರನ್ನು ಭೇಟಿಯಾಗಿ ಮಸೂದೆಗಳ ಅನುಮೋದನೆ ಜ್ಞಾಪಿಸಿದೆವು: ಸಿಎಂ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿದ್ದು: ಸಚಿವ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಈಗ ಅನುಮತಿ ನೀಡಿದರೆ ಏನು ಪ್ರಯೋಜನ? ಪತ್ರಕ್ಕೆ ಉತ್ತರ ಕೂಡ ಇಲ್ಲ: ಖರ್ಗೆ
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ಗುತ್ತಿಗೆದಾರನ ಹತ್ಯೆ: ಕೊಚ್ಚಿ ಕೊಲ್ಲುತ್ತಿರುವ ಭಯಾನಕ ದೃಶ್ಯ ಇಲ್ಲಿದೆ!
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ರೀಲ್ಸ್ ಮಾಡುತ್ತಿದ್ದ ಯುವತಿಗೆ ಮಾಡೆಲಿಂಗ್​ನಲ್ಲಿ ಆಸಕ್ತಿಯಿತ್ತು: ಸಂಬಂಧಿ
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್
ನನ್ನನ್ನು ರಾಜನಾಗಿ ಮೆರೆಸಿದ್ದು ಹಂಸಲೇಖ: ರವಿಚಂದ್ರನ್