AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಬಹುತೇಕ ಶೂನ್ಯ, ಮಾಸ್ಕ್ ಹಾಕದಿದ್ದರೆ ಇನ್ನು ಮುಂದೆ ಬಿಬಿಎಂಪಿ ದಂಡ ವಸೂಲಿ ಮಾಡುವುದಿಲ್ಲ!

BBMP mask: ಮಾಸ್ಕ್ ಹಾಕದವರಿಂದ ಕಟ್ಟುನಿಟ್ಟಾಗಿ ದಂಡ ವಸೂಲಿ ಮಾಡದಂತೆ ಸೂಚಿಸಿರುವ ಬಿಬಿಎಂಪಿ, ಭಾಗಶಃ ಜನರು ಮಾಸ್ಕ್ ಧರಿಸುತ್ತಿದ್ದು, ಸೋಂಕಿನ ಪ್ರಮಾಣ ತಗ್ಗಿದೆ. ಅಂದಹಾಗೆ ಬಿಬಿಎಂಪಿ ಮೇ 2020 ರಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡುತ್ತಿತ್ತು. ಮೇ 2020 ರಿಂದ ಇದೂವರೆಗೂ 14,03,09,197 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

ಕೊರೊನಾ ಬಹುತೇಕ ಶೂನ್ಯ, ಮಾಸ್ಕ್ ಹಾಕದಿದ್ದರೆ ಇನ್ನು ಮುಂದೆ ಬಿಬಿಎಂಪಿ ದಂಡ ವಸೂಲಿ ಮಾಡುವುದಿಲ್ಲ!
ಕೊರೊನಾ ಬಹುತೇಕ ಶೂನ್ಯ, ಮಾಸ್ಕ್ ಹಾಕದವರಿಂದ ಇನ್ನು ಮುಂದೆ ಬಿಬಿಎಂಪಿ ದಂಡ ವಸೂಲಿ ಮಾಡುವುದಿಲ್ಲ!
Follow us
TV9 Web
| Updated By: ಸಾಧು ಶ್ರೀನಾಥ್​

Updated on: Oct 20, 2021 | 10:36 AM

ಬೆಂಗಳೂರು: ಒಂದೆರಡು ವರ್ಷಗಳಿಂದ ಕೊರೊನಾ ಮಹಾಮಾರಿತಿಂದ ಕಂಗೆಟ್ಟಿದ್ದ ಜನಕ್ಕೆ ಮಾಸ್ಕ್​ ಎಂಬುದು ಅನಿವಾರ್ಯವಾಗಿತ್ತು. ಮತ್ತು ಅದನ್ನು ಕಡ್ಡಾಯಗೊಳಿಸಲಾಗಿತ್ತು. ಇಲ್ಲದಿದ್ದರೆ ದಂಡ ಕಟ್ಟಿಟ್ಟಬುತ್ತಿ ಎಂಬಂತಾಗಿತ್ತು. ಇದರಿಂದ ದಂಡ ಕಟ್ಟುವ ಪರಿಸ್ಥಿತಿ ಎದುರಾದಾಗ ಕೊರೊನಾ ಕಾಡಿದಷ್ಟೇ ಕಾಟವನ್ನು ಅನುಭವಿಸಿದ್ದರು ಜನ. ಆದರೆ ಪರಿಸ್ಥಿತಿ ಈಗ ತಿಳಿಯಾಗುತ್ತಿದೆ. ಈ ಸಂದರ್ಭದಲ್ಲಿ ಮಾಸ್ಕ್ ಹಾಕದವರಿಂದ ದಂಡ ವಸೂಲಿಗೆ ತಾತ್ಕಾಲಿಕ ಬ್ರೇಕ್ ನೀಡುವ ಸಾಧ್ಯತೆಗಳು ಗೋಚರವಾಗಿವೆ.

ಕೊರೊನಾ ಕಾಟವೂ ತಪ್ಪಿತು; ಮಾಸ್ಕ್​ ಕಾಟವೂ ತಪ್ಪಿತು? ಇಷ್ಟು ದಿನ ಭೀಕರ ಕೊರೊನಾ ಭೀತಿಯ ಹಿನ್ನೆಲೆ ಬಿಬಿಎಂಪಿ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುತ್ತಿತ್ತು. ಮಾರ್ಷೆಲ್ ಗಳಿಂದ ಮಾಸ್ಕ್ ಹಾಕದವರಿಂದ ನೂರಾರು ರೂಪಾಯಿ ವಸೂಲಿ ಮಾಡಿಸುತ್ತಿತ್ತು. ಆದರೆ ಈಗ ಬದಲಾದ ಪರಿಸ್ಥಿತಿಯಲ್ಲಿ ಕೊರೊನಾ ಸೋಂಕು ಬಹುತೇಕ ಶೂನ್ಯ ಪ್ರಮಾಣಕ್ಕೆ ಕುಸಿದಿರುವಾಗ ಕಟ್ಟುನಿಟ್ಟಾಗಿ ದಂಡ ವಸೂಲಿ ಮಾಡದಂತೆ ಮಾರ್ಷೆಲ್ ಗಳಿಗೆ ಬಿಬಿಎಂಪಿ ಮೌಖಿಕ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.

ಮಾಸ್ಕ್ ಹಾಕದವರಿಂದ ಕಟ್ಟುನಿಟ್ಟಾಗಿ ದಂಡ ವಸೂಲಿ ಮಾಡದಂತೆ ಸೂಚಿಸಿರುವ ಬಿಬಿಎಂಪಿ, ಭಾಗಶಃ ಜನರು ಮಾಸ್ಕ್ ಧರಿಸುತ್ತಿದ್ದು, ಸೋಂಕಿನ ಪ್ರಮಾಣ ತಗ್ಗಿದೆ. ಹೀಗಾಗಿ ಮಾಸ್ಕ್ ಹಾಕದವರಿಗೆ ದಂಡ ಹಾಕದಂತೆ ಮಾರ್ಷೆಲ್ ಗಳಿಗೆ ಸೂಚನೆ‌ ನೀಡಲಾಗಿದೆ. ಅಂದಹಾಗೆ ಬಿಬಿಎಂಪಿ ಮೇ 2020 ರಿಂದ ಮಾಸ್ಕ್ ಹಾಕದವರಿಂದ ದಂಡ ವಸೂಲಿ ಮಾಡುತ್ತಿತ್ತು. ಮೇ 2020 ರಿಂದ ಇದೂವರೆಗೂ 14,03,09,197 ರೂಪಾಯಿ ದಂಡ ವಸೂಲಿ ಮಾಡಲಾಗಿದೆ. ಇದೀಗ ಮಾಸ್ಕ್ ದಂಡ ಪ್ರಯೋಗಕ್ಕೆ ಬಿಬಿಎಂಪಿ ತಾತ್ಕಾಲಿಕ ವಿರಾಮ ನೀಡಿದೆ.

ಇದನ್ನೂ ಓದಿ: Bad Breath Problem: ನಿಮ್ಮ ಮಾಸ್ಕ್ ಒಳಗೆ ದುರ್ವಾಸನೆಯೇ? ಕೆಟ್ಟ ಉಸಿರಾಟ ಸಮಸ್ಯೆಗೆ ಪರಿಹಾರ ಕ್ರಮಗಳೇನು ಯೋಚಿಸಿದ್ದೀರಾ?

ಪೊಲೀಸರ ತಪಾಸಣೆ ವೇಳೆ ಕಾರು ನಿಲ್ಲಿಸದೆ ಪರಾರಿಗೆ ಯತ್ನಿಸಿದವ್ರು ಅರೆಸ್ಟ್| GanjaSeeze |Tv9kannada

(BBMP not to fine maskless people strictly orders marshals not to fine people without masks)

ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ಕಮಲ್ ಹಾಸನ್ ಆಡಿದ್ದು ದುರಹಂಕಾರದ ಮಾತು: ವಾಟಾಳ್ ನಾಗರಾಜ್
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ತಮಿಳು ಕನ್ನಡದ ತಾಯಿ ಭಾಷೆ ಅಲ್ಲ: ಕಮಲ್ ಹೇಳಿಕೆಗೆ ನಾಗತಿಹಳ್ಳಿ ವಿರೋಧ
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ