AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ
ಬಿಬಿಎಂಪಿ ಮುಖ್ಯ ಕಚೇರಿ
KUSHAL V
|

Updated on:Jan 05, 2021 | 10:11 PM

Share

ಬೆಂಗಳೂರು: ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ. ಈವರೆಗೆ ನಗರಕ್ಕೆ ಬಂದ 24 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಇತ್ತ, ರಾಜ್ಯದಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ಒಂದರ ವಿಚಾರಣೆ ನಡೆಯಿತು. ಈ ವೇಳೆ, ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದವರ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಯಿತು.

ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 3,061 ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದೆ. ಬೇರೆ ರಾಜ್ಯಗಳಿಂದ 594 ಪ್ರಯಾಣಿಕರು ಆಗಮಿಸಿದ್ದಾರೆ. ಆದರೆ, ಉಳಿದ 75 ಪ್ರಯಾಣಿಕರು ಈವರೆಗೆ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಜೊತೆಗೆ, 2,292 ಪ್ರಯಾಣಿಕರ RTPCR ಪರೀಕ್ಷೆ ನಡೆಸಲಾಗಿದೆ. 176 ಪ್ರಯಾಣಿಕರ ತಪಾಸಣಾ ಫಲಿತಾಂಶ ಬರಬೇಕಿದೆ. 34 ಪ್ರಯಾಣಿಕರಿಗೆ ಕೊರೊನಾ-19 ಸೋಂಕು ಪತ್ತೆಯಾಗಿದೆ. 14 ಪ್ರಾಥಮಿಕ ಸೋಂಕಿತರಿಗೂ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ. ಅದರಲ್ಲಿ, 9 ಪ್ರಯಾಣಿಕರಲ್ಲಿ ಬ್ರಿಟನ್​ ರೂಪಾಂತರಿ ಸೋಂಕು ಪತ್ತೆಯಾಗಿದೆ. ಓರ್ವ ಪ್ರಾಥಮಿಕ ಸೋಂಕಿತರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಗಿದೆ.

ಈ ನಡುವೆ, 700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಎಂದು ರಾಜ್ಯ ಸರ್ಕಾರದಿಂದ ಹೈಕೋರ್ಟ್ ಸ್ಪಷ್ಟನೆ ಕೇಳಿದೆ. ಜೊತೆಗೆ, ಜ.12ರಂದು ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾ ಲಸಿಕೆ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಸೂಕ್ಷ್ಮವಾಗಿ ವರ್ತಿಸಿರುವುದು ಖುಷಿಯ ವಿಚಾರ: ತೇಜಸ್ವಿ ಸೂರ್ಯ

Published On - 10:05 pm, Tue, 5 January 21

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್