AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ.

ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ -BBMPಯಿಂದ ಕಳವಳಕಾರಿ ಮಾಹಿತಿ ಬಿಡುಗಡೆ
ಬಿಬಿಎಂಪಿ ಮುಖ್ಯ ಕಚೇರಿ
KUSHAL V
|

Updated on:Jan 05, 2021 | 10:11 PM

Share

ಬೆಂಗಳೂರು: ಬ್ರಿಟನ್‌ನಿಂದ ಬಂದಿದ್ದ 121 ಜನರು ಇನ್ನೂ ಪತ್ತೆಯಾಗಿಲ್ಲ. 121 ಜನ ಪತ್ತೆಯಾಗಿಲ್ಲವೆಂದು ಬಿಬಿಎಂಪಿಯಿಂದ ಮಾಹಿತಿ ನೀಡಿದೆ. ಜೊತೆಗೆ, ಬ್ರಿಟನ್‌ನಿಂದ ನಗರಕ್ಕೆ ಬಂದಿದ್ದ 24 ಜನರಿಗೆ ಸೋಂಕು ಪತ್ತೆಯಾಗಿದೆ. ಈವರೆಗೆ ನಗರಕ್ಕೆ ಬಂದ 24 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಇತ್ತ, ರಾಜ್ಯದಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ಒಂದರ ವಿಚಾರಣೆ ನಡೆಯಿತು. ಈ ವೇಳೆ, ಇಂಗ್ಲೆಂಡ್‌ನಿಂದ ರಾಜ್ಯಕ್ಕೆ ಬಂದವರ ಬಗ್ಗೆ ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಯಿತು.

ರಾಜ್ಯಕ್ಕೆ ಒಟ್ಟು 3,137 ಪ್ರಯಾಣಿಕರು ಆಗಮಿಸಿದ್ದಾರೆ. ಈ ಪೈಕಿ 3,061 ಪ್ರಯಾಣಿಕರನ್ನು ಪತ್ತೆಹಚ್ಚಲಾಗಿದೆ. ಬೇರೆ ರಾಜ್ಯಗಳಿಂದ 594 ಪ್ರಯಾಣಿಕರು ಆಗಮಿಸಿದ್ದಾರೆ. ಆದರೆ, ಉಳಿದ 75 ಪ್ರಯಾಣಿಕರು ಈವರೆಗೆ ಪತ್ತೆಯಾಗಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ.

ಜೊತೆಗೆ, 2,292 ಪ್ರಯಾಣಿಕರ RTPCR ಪರೀಕ್ಷೆ ನಡೆಸಲಾಗಿದೆ. 176 ಪ್ರಯಾಣಿಕರ ತಪಾಸಣಾ ಫಲಿತಾಂಶ ಬರಬೇಕಿದೆ. 34 ಪ್ರಯಾಣಿಕರಿಗೆ ಕೊರೊನಾ-19 ಸೋಂಕು ಪತ್ತೆಯಾಗಿದೆ. 14 ಪ್ರಾಥಮಿಕ ಸೋಂಕಿತರಿಗೂ ಕೊವಿಡ್ ಸೋಂಕು ದೃಢಪಟ್ಟಿದೆ ಎಂದು ಸರ್ಕಾರ ಮಾಹಿತಿ ಕೊಟ್ಟಿದೆ. ಅದರಲ್ಲಿ, 9 ಪ್ರಯಾಣಿಕರಲ್ಲಿ ಬ್ರಿಟನ್​ ರೂಪಾಂತರಿ ಸೋಂಕು ಪತ್ತೆಯಾಗಿದೆ. ಓರ್ವ ಪ್ರಾಥಮಿಕ ಸೋಂಕಿತರಲ್ಲಿ ರೂಪಾಂತರಿ ಸೋಂಕು ಪತ್ತೆಯಾಗಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಸಲ್ಲಿಕೆಯಾಗಿದೆ.

ಈ ನಡುವೆ, 700ಕ್ಕೂ ಹೆಚ್ಚು ಪ್ರಯಾಣಿಕರಿಗೆ RTPCR ತಪಾಸಣೆ ಮಾಡಿಲ್ಲವೇಕೆ? ಎಂದು ರಾಜ್ಯ ಸರ್ಕಾರದಿಂದ ಹೈಕೋರ್ಟ್ ಸ್ಪಷ್ಟನೆ ಕೇಳಿದೆ. ಜೊತೆಗೆ, ಜ.12ರಂದು ಮಾಹಿತಿ ನೀಡಲು ಹೈಕೋರ್ಟ್ ಸೂಚನೆ ನೀಡಿದೆ.

ಕೊರೊನಾ ಲಸಿಕೆ ಬಗ್ಗೆ ಕರ್ನಾಟಕದ ರಾಜಕಾರಣಿಗಳು ಸೂಕ್ಷ್ಮವಾಗಿ ವರ್ತಿಸಿರುವುದು ಖುಷಿಯ ವಿಚಾರ: ತೇಜಸ್ವಿ ಸೂರ್ಯ

Published On - 10:05 pm, Tue, 5 January 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ