AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಗ್ಗೆರೆಯಲ್ಲಿ ಏಕಾಏಕಿ ರಾಜಕಾಲುವೆ ತಡೆಗೋಡೆ ಒಡೆದ ಬಿಬಿಎಂಪಿ ಅಧಿಕಾರಿಗಳು; ಹತ್ತಾರು ಕುಟುಂಬಗಳು ಅತಂತ್ರ

ವೃಷಭಾವತಿ ನದಿಗೆ ಅಡ್ಡಲಾಗಿ ರಾಜಕಾಲುವೆ ಕಟ್ಟಲಾಗಿತ್ತು. ರಾಜಕಾಲುವೆ ಪಕ್ಕದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗಿತ್ತು. ಆದರೆ ಇದೀಗ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ತಡೆಗೋಡೆಯನ್ನು ಒಡೆದಿದ್ದಾರೆ. ಮನೆಗಳಿಗೆ ಮಾಹಿತಿ ನೀಡದೇ ರಾಜಕಾಲುವೆ ಒಡೆಯಲಾಗಿದೆ ಎಂದು ಸ್ಥಳೀಯ ನಿವಾಸಿಗಳ ಆರೋಪಿಸುತ್ತಿದ್ದಾರೆ.

ಲಗ್ಗೆರೆಯಲ್ಲಿ ಏಕಾಏಕಿ ರಾಜಕಾಲುವೆ ತಡೆಗೋಡೆ ಒಡೆದ ಬಿಬಿಎಂಪಿ ಅಧಿಕಾರಿಗಳು; ಹತ್ತಾರು ಕುಟುಂಬಗಳು ಅತಂತ್ರ
ಮನೆಗಳಿಗೆ ಕೊಳಚೆ ನೀರು ನುಗ್ಗಿದೆ
TV9 Web
| Edited By: |

Updated on:Jul 06, 2021 | 2:31 PM

Share

ಬೆಂಗಳೂರು: ಬಿಬಿಎಂಪಿ ಅಧಿಕಾರಿಗಳು ಏಕಾಏಕಿ ರಾಜಕಾಲುವೆ ತಡೆಗೋಡೆಯನ್ನು ಒಡೆದ ಪರಿಣಾಮ ಕೊಳಚೆ ನೀರು ಮನೆಗಳಿಗೆ ನುಗ್ಗಿದೆ. ಮನೆಗಳಿಗೆ ಕೊಳಚೆ ನೀರು ನುಗ್ಗಿದ್ದರಿಂದ ಹತ್ತಾರು ಕುಟುಂಬಗಳು ಅತಂತ್ರಗೊಂಡಿವೆ. ಜೊತೆಗೆ ರಾಜಕಾಲುವೆ ಪಕ್ಕದಲ್ಲೇ ಇದ್ದ ವೃದ್ಧಾಶ್ರಮಕ್ಕೂ ಕೊಳಚೆ ನೀರು ನುಗ್ಗಿದ್ದರಿಂದ ವೃದ್ಧಾಶ್ರಮದಲ್ಲಿದ್ದ 50ಕ್ಕೂ ಹೆಚ್ಚು ವೃದ್ಧರು ಬೀದಿ ಪಾಲಾಗುವಂತಾಗಿದೆ. ಈ ಘಟನೆ ಲಗ್ಗೆರೆಯ ವಾರ್ಡ್ ನಂಬರ್ 41ರಲ್ಲಿ ನಡೆದಿದೆ.

ವೃಷಭಾವತಿ ನದಿಗೆ ಅಡ್ಡಲಾಗಿ ರಾಜಕಾಲುವೆ ಕಟ್ಟಲಾಗಿತ್ತು. ರಾಜಕಾಲುವೆ ಪಕ್ಕದಲ್ಲೇ ಇಪ್ಪತ್ತಕ್ಕೂ ಹೆಚ್ಚು ಮನೆಗಳು ನಿರ್ಮಾಣವಾಗಿತ್ತು. ಆದರೆ ಇದೀಗ ಬಿಬಿಎಂಪಿ ಅಧಿಕಾರಿಗಳು ರಾಜಕಾಲುವೆ ತಡೆಗೋಡೆಯನ್ನು ಒಡೆದಿದ್ದಾರೆ. ಮನೆಗಳಿಗೆ ಮಾಹಿತಿ ನೀಡದೇ ರಾಜಕಾಲುವೆ ಒಡೆಯಲಾಗಿದೆ ಎಂದು ಸ್ಥಳೀಯ ನಿವಾಸಿಗಳ ಆರೋಪಿಸುತ್ತಿದ್ದಾರೆ.

ಸ್ಥಳೀಯ ಜೆಡಿಎಸ್ ಮುಖಂಡ ರುದ್ರೇಗೌಡನವರೇ ರಾಜಕಾಲುವೆ ಅಡ್ಡಗೋಡೆಯನ್ನು ಒಡೆಸಿದ್ದಾರೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ರುದ್ರೇಗೌಡ ಹೇಳಿದಂತೆ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಜೆಸಿಬಿ ಕರೆಸಿ ರಾಜಕಾಲುವೆ ಅಡ್ಡಗೋಡೆ ಒಡೆಸಿದ್ದಾರೆ ಎಂದು ನಿವಾಸಿಗಳು ಆರೋಪಿಸುತ್ತಿದ್ದಾರೆ. ಕೊಳಚೆ ನೀರು ನುಗ್ಗಿರುವ ಮನೆ ಮಾಲೀಕರ ಹಾಗೂ ರುದ್ರೇಗೌಡ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆಯಿತು. ಸ್ಥಳದಲ್ಲಿ ಪೊಲೀಸರು ಇದ್ದರು ಏನೂ ಮಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು.

ಇದನ್ನೂ ಓದಿ

ಏಕಾಏಕಿ ಬಜ್ಪೆ ಮಂಗಳೂರು ಏರ್​ಪೋರ್ಟ್​ ರನ್​ವೇಗೆ ನುಗ್ಗಿದ ಅಪರಿಚಿತ ವ್ಯಕ್ತಿ! ಮುಂದೇನಾಯ್ತು?

Karnataka Rain: ಇಂದಿನಿಂದ ಜುಲೈ 10 ರವರೆಗೆ ರಾಜ್ಯದಲ್ಲಿ ಭಾರಿ ಮಳೆ; ಎಲ್ಲೆಲ್ಲಿ ಯೆಲ್ಲೋ ಅಲರ್ಟ್ ಘೋಷಣೆ? ವಿವರ ಇಲ್ಲಿದೆ

(BBMP officials smashed a Raja Kaluve wall in laggere)

Published On - 2:23 pm, Tue, 6 July 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್