ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಸದ್ಯದಲ್ಲೇ ಬೆಲೆ ಏರಿಕೆ ಬಿಸಿ! ಯಾಕೆ ಗೊತ್ತಾ?

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಊಟ, ಉಪಾಹಾರ ದರ ಪರಿಷ್ಕರಣೆಗೆ ಬಿಬಿಎಂಪಿ ಪ್ಲ್ಯಾನ್ ನಡೆಸಿದ್ದು, ಶೀಘ್ರದಲ್ಲೇ ಉಪಾಹಾರದ ಬೆಲೆ 5ರೂಪಾಯಿಯಿಂದ 10ರೂ.ಗೆ ಏರಿಕೆ ಹಾಗೂ ಊಟದ ಬೆಲೆ 10 ರೂ.ನಿಂದ 15 ರೂ.ಗೆ ಏರಿಕೆ ಮಾಡುವ ಸಾಧ್ಯತೆಯಿದೆ. ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಲು ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿದೆ. […]

ಇಂದಿರಾ ಕ್ಯಾಂಟೀನ್ ಗ್ರಾಹಕರಿಗೆ ಸದ್ಯದಲ್ಲೇ ಬೆಲೆ ಏರಿಕೆ ಬಿಸಿ! ಯಾಕೆ ಗೊತ್ತಾ?
ಸಾಧು ಶ್ರೀನಾಥ್​

Updated on: Feb 29, 2020 | 10:49 AM

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಅವಧಿಯ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಚಿಂತನೆ ನಡೆಸಿದೆ. ಊಟ, ಉಪಾಹಾರ ದರ ಪರಿಷ್ಕರಣೆಗೆ ಬಿಬಿಎಂಪಿ ಪ್ಲ್ಯಾನ್ ನಡೆಸಿದ್ದು, ಶೀಘ್ರದಲ್ಲೇ ಉಪಾಹಾರದ ಬೆಲೆ 5ರೂಪಾಯಿಯಿಂದ 10ರೂ.ಗೆ ಏರಿಕೆ ಹಾಗೂ ಊಟದ ಬೆಲೆ 10 ರೂ.ನಿಂದ 15 ರೂ.ಗೆ ಏರಿಕೆ ಮಾಡುವ ಸಾಧ್ಯತೆಯಿದೆ.

ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಆಗುತ್ತಿರುವ ಆರ್ಥಿಕ ಹೊರೆ ಕಡಿಮೆ ಮಾಡಲು ಇಂದಿರಾ ಕ್ಯಾಂಟೀನ್ ಊಟದ ದರ ಪರಿಷ್ಕರಣೆಗೆ ಬಿಬಿಎಂಪಿ ಮುಂದಾಗಿದೆ. ಗುತ್ತಿಗೆದಾರ ಸದ್ಯ ಒಂದು ಊಟಕ್ಕೆ 22 ರೂಪಾಯಿ ಚಾರ್ಜ್ ಮಾಡುತ್ತಿದ್ದು, ಸರ್ಕಾರ12 ರೂಪಾಯಿ ಸಬ್ಸಿಡಿ ನೀಡುತ್ತಿದೆ. ಊಟಕ್ಕೆ ಗ್ರಾಹಕರಿಂದ 10 ರೂಪಾಯಿ ಪಡೆಯಲಾಗ್ತಿದೆ. ಈಗ ಸರ್ಕಾರದ ಸಬ್ಸಿಡಿ ಹೊರೆ ಇಳಿಸಲು ಊಟದ ಬೆಲೆ ಏರಿಕೆ ಮಾಡಲು ಚಿಂತನೆ ನಡೆಸಿದೆ.

ಇದರಿಂದ ಬಹುತೇಕ ಸಬ್ಸಿಡಿ ಹೊರೆ ಕಡಿಮೆಯಾಗಲಿದೆ. ಕಳೆದ ಒಂದು ವರ್ಷದಿಂದ ಸರ್ಕಾರ ಇಂದಿರಾ ಕ್ಯಾಂಟೀನ್​ಗೆ ಅನುದಾನ ನೀಡಿಲ್ಲ. ಬಿಬಿಎಂಪಿಯೇ ನಿರ್ವಹಣೆ ಮಾಡುತ್ತಿರುವ ಕಾರಣ ಆರ್ಥಿಕ ಹೊರೆಯಾಗಿದೆ. ಈ ಬಾರಿ ಇಂದಿರಾ ಕ್ಯಾಂಟೀನ್​ಗೆ ಹೊಸದಾಗಿ ಟೆಂಡರ್ ಆಹ್ವಾನಿಸಿದ್ದು, ಹೊಸ ಗುತ್ತಿಗೆ ಜೊತೆ ಹೊಸ ದರ ಜಾರಿಗೆ ತರಲು ಬಿಬಿಎಂಪಿ ಮುಂದಾಗಿದೆ.

Published On - 9:26 am, Sat, 29 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us