AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಕ್ಕೆ ಬೃಹತ್ ಅನುದಾನದ ಪ್ರಸ್ತಾವನೆ ಇಟ್ಟ ಬಿಬಿಎಂಪಿ, 2024-25 ನೇ ಬಜೆಟ್ ನಲ್ಲಿ 8050 ಕೋಟಿಗೆ ಡಿಮ್ಯಾಂಡ್

ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್​ಗೆ ತಯಾರಿ ನಡೆಸ್ತಿರೋ ಹೊತ್ತಲ್ಲೇ, ಸರ್ಕಾರದ ಮುಂದೆ ಬಿಬಿಎಂಪಿ ಬೃಹತ್ ಮೊತ್ತದ ಪ್ರಸ್ತಾವನೆ ಇಟ್ಟಿದೆ. ಬಜೆಟ್ ಮೇಲೆ ಭಾರೀ ನಿರೀಕ್ಷೆ ಇಟ್ಟಿರೋ ಪಾಲಿಕೆ, ಇಂದಿರಾ ಕ್ಯಾಂಟೀನ್, ನಮ್ಮ ಕ್ಲಿನಿಕ್, ಟ್ರಾಫಿಕ್ ಕಂಟ್ರೋಲ್ ಸೇರಿ ಹಲವು ಸಮಸ್ಯೆಗಳನ್ನ ಮುಂದಿಟ್ಟುಕೊಂಡು 8 ಸಾವಿರದ 50 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ರಾಜ್ಯ ಸರ್ಕಾರಕ್ಕೆ ಬೃಹತ್ ಅನುದಾನದ ಪ್ರಸ್ತಾವನೆ ಇಟ್ಟ ಬಿಬಿಎಂಪಿ, 2024-25 ನೇ ಬಜೆಟ್ ನಲ್ಲಿ 8050 ಕೋಟಿಗೆ ಡಿಮ್ಯಾಂಡ್
ಬಿಬಿಎಂಪಿ
TV9 Web
| Edited By: |

Updated on:Feb 13, 2024 | 11:45 AM

Share

ಬೆಂಗಳೂರು, ಫೆ.13: ರಾಜ್ಯ ಸರ್ಕಾರ 2024-25ನೇ ಸಾಲಿನ ಬಜೆಟ್ ಮಂಡನೆಗೆ (Karnataka Budget) ಸಕಲ ಸಿದ್ಧತೆ ನಡೆಸಿದೆ. ಈಗಾಗಲೇ ವಿವಿಧ ಕ್ಷೇತ್ರದ ಪ್ರಮುಖರ ಸಲಹೆ ಪಡೆದು ಬಜೆಟ್ ಮಂಡಿಸಲು ಸಜ್ಜಾಗ್ತಿದೆ. ಇತ್ತ ಬೆಂಗಳೂರಿನ ಅಭಿವೃದ್ಧಿ ಕೆಲಸಗಳಿಗೆ ವೇಗ ನೀಡಲು ಪ್ಲಾನ್ ಮಾಡಿಕೊಂಡ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP), ಇದೀಗ ಸರ್ಕಾರದ ಮುಂದೆ 8050 ಕೋಟಿ ಬೃಹತ್ ಮೊತ್ತದ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಇನ್ನು ಸರ್ಕಾರದ ಬಜೆಟ್ ಮೇಲೆ ಭಾರಿ ನಿರೀಕ್ಷೆ ಇಟ್ಟಿರೋ ಪಾಲಿಕೆ, ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಇಂತಿಷ್ಟು ಅನುದಾನದ ಅವಶ್ಯಕತೆಯಿದೆ ಅಂತಾ ವರದಿ ಸಲ್ಲಿಸಿದೆ. ಸದ್ಯ ಪಾಲಿಕೆ ಸರ್ಕಾರದ ಮುಂದಿಟ್ಟಿರೋ ಪ್ರಮುಖ ಅಭಿವೃದ್ಧಿ ಕಾರ್ಯ ಹಾಗೂ ಅದಕ್ಕೆ ಬೇಕಾದ ಅನುದಾನದ ಮೊತ್ತದ ವಿವರ ಇಲ್ಲಿದೆ.

ಬಜೆಟ್ ಮೇಲೆ ‘ಬೃಹತ್’ ನಿರೀಕ್ಷೆ!

1) ಟ್ರಾಫಿಕ್ ನಿವಾರಣೆಗೆ ಸುರಂಗಮಾರ್ಗ

  • ಬೆಂಗಳೂರಿನ ಪ್ರಮುಖ ಜಂಕ್ಷನ್ ಗಳಲ್ಲಿ ಸುರಂಗ ಮಾರ್ಗದ ಪ್ರಸ್ತಾವನೆ
  • ಮೊದಲ ಹಂತದಲ್ಲಿ 3 ಕಿ.ಮೀ.ಸುರಂಗ ಮಾರ್ಗಕ್ಕೆ ಪ್ಲಾನ್
  • ಸುರಂಗ ಮಾರ್ಗಕ್ಕೆ 1500 ಕೋಟಿ ಪ್ರಸ್ತಾವನೆ

2) ಇಂದಿರಾ ಕ್ಯಾಂಟೀನ್ ಗೆ 200 ಕೋಟಿ

3)ಘನತ್ಯಾಜ್ಯ ನಿರ್ವಹಣೆ

  • ಘನತ್ಯಾಜ್ಯ ನಿರ್ವಹಣೆಗೆ 600 ಕೋಟಿಗೆ ಪ್ರಸ್ತಾವನೆ
  • ಕಸ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಪ್ಲಾನ್
  • ಭೂ ಸ್ವಾಧೀನ, ಲಿಚೆಟ್ ಸಂಸ್ಕರಣೆಗೆ ತಯಾರಿ

4) ರಾಜಕಾಲುವೆ ಬಫರ್ ವಲಯಗಳನ್ನ ಸುಗಮ ಸಂಚಾರಕ್ಕೆ ಬಳಸಲು ಪ್ಲಾನ್

  • ಮೊದಲ ಹಂತದಲ್ಲಿ 200 ಕೋಟಿ ಅನುದಾನಕ್ಕೆ ಮನವಿ
  • ಸಂಚಾರದಟ್ಟಣೆ ಇರೋ 75 ಜಂಕ್ಷನ್ ಅಭಿವೃದ್ಧಿಗೆ 100 ಕೋಟಿ

5) ಪ್ರವಾಸಿತಾಣದ ಅಭಿವೃದ್ಧಿಗೆ ಸ್ಕೈಡೆಕ್ ಗೋಪುರ ನಿರ್ಮಾಣಕ್ಕೆ ಪ್ಲಾನ್

6) ಬಿಬಿಎಂಪಿ ಶಾಲಾ-ಕಾಲೇಜುಗಳ ಅಭಿವೃದ್ಧಿ

  • ಬಿಬಿಎಂಪಿಯಿಂದ ಹೊಸ ಇಂಗ್ಲಿಷ್ ಮೀಡಿಯಂ ಶಾಲೆಗಳ ನಿರ್ಮಾಣಕ್ಕೆ ಬಜೆಟ್ ನಲ್ಲಿ ಅನುದಾನ‌ ನಿರೀಕ್ಷೆ
  • ಬಿಬಿಎಂಪಿಯ ಹಳೆ ಶಾಲೆಗಳ ನಿರ್ವಹಣೆಗೆ ಸರ್ಕಾರದಿಂದ ಬಜೆಟ್ ನಿರೀಕ್ಷೆ

ಒಟ್ಟಾರೆ ಬ್ರ್ಯಾಂಡ್ ಬೆಂಗಳೂರಿನ ಕನಸು ಹೊತ್ತಿರೋ ಸರ್ಕಾರಕ್ಕೆ, ಇದೀಗ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಒದಗಿಸುವ ಸಮಯ ಹತ್ತಿರ ಬರ್ತಿದೆ. ಇತ್ತ ಬ್ರ್ಯಾಂಡ್ ಬೆಂಗಳೂರಿನ ಪರಿಕಲ್ಪನೆಯ ಜೊತೆ ಜೊತೆಗೆ ಪಾಲಿಕೆ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳನ್ನ ಕೂಡ ಸರ್ಕಾರದ ಮಡಿಲಿಗಿಟ್ಟಿರೋ ಪಾಲಿಕೆಗೆ ಬಜೆಟ್ ನಲ್ಲಿ ನಿರೀಕ್ಷಿತ ಅನುದಾನ ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:44 am, Tue, 13 February 24

Follow Us
Web contact
Web contact

TV9 Kannada

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ