AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ
ಶಾಸಕ ಅಖಂಡ ಶ್ರೀನಿವಾಸಮೂರ್ತಿ
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Feb 17, 2021 | 6:50 PM

Share

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಯಾವುದೇ ಕಾರಣಕ್ಕೂ BBMP ಚುನಾವಣೆಯಲ್ಲಿ ಟಿಕೆಟ್ ಸಿಗಬಾರದು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಎಐಸಿಸಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ರಣದೀಪ್​ ಸಿಂಗ್​ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಂಪತ್​ರಾಜ್​ರನ್ನು ಕಾಂಗ್ರೆಸ್​ನಿಂದ​​ ವಜಾ​ ಮಾಡಬೇಕು. BBMP ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಿದ್ದೇನೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎನ್ನುವ ಭರವಸೆ ನೀಡಿದ್ದಾರೆ.

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ. ಅಲ್ಲದೆ,  ಹೈಕಮಾಂಡ್ ಜತೆ ಚರ್ಚೆ ಬಳಿಕ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

ಏನಿದು ಪ್ರಕರಣ?

ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್​ ರಾಜ್ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್​ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಹೈಕೋರ್ಟ್​ ಅವರಿಗೆ ಜಾಮೀನು ನೀಡಿತ್ತು.

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಐಎಎಫ್ ಪೈಲಟ್ ಲೋಕೇಂದ್ರ ಸಿಂಧುಗೆ 1 ತಿಂಗಳ ಮಗನಿಂದ ಅಂತಿಮನಮನ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ