AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ.

ಸಂಪತ್ ರಾಜ್​ಗೆ BBMP ಟಿಕೆಟ್​ ಸಿಗಬಾರದು: ಹೈಕಮಾಂಡ್​ಗೆ ಅಖಂಡ ಶ್ರೀನಿವಾಸ ಮೂರ್ತಿ ಮನವಿ
ಶಾಸಕ ಅಖಂಡ ಶ್ರೀನಿವಾಸಮೂರ್ತಿ
Follow us
ರಾಜೇಶ್ ದುಗ್ಗುಮನೆ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Feb 17, 2021 | 6:50 PM

ಬೆಂಗಳೂರು: ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಅವರಿಗೆ ಯಾವುದೇ ಕಾರಣಕ್ಕೂ BBMP ಚುನಾವಣೆಯಲ್ಲಿ ಟಿಕೆಟ್ ಸಿಗಬಾರದು ಎಂದು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಎಐಸಿಸಿ ಕರ್ನಾಟಕ ಪ್ರಧಾನ ಕಾರ್ಯದರ್ಶಿ ರಣದೀಪ್​ ಸಿಂಗ್​ ಸುರ್ಜೇವಾಲ ಬಳಿ ಮನವಿ ಮಾಡಿದ್ದಾರೆ. ಈ ಮನವಿಗೆ ರಣದೀಪ್​ ಸಿಂಗ್​ ಧನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿರುವ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ, ಸಂಪತ್​ರಾಜ್​ರನ್ನು ಕಾಂಗ್ರೆಸ್​ನಿಂದ​​ ವಜಾ​ ಮಾಡಬೇಕು. BBMP ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಿದ್ದೇನೆ. ವರಿಷ್ಠರ ಜೊತೆ ಚರ್ಚಿಸಿ ನಿರ್ಧರಿಸುವ ಭರವಸೆ ನೀಡಿದ್ದಾರೆ. ಪಕ್ಷದಲ್ಲಿ ಎಲ್ಲರೂ ಸಹಕಾರ ನೀಡುತ್ತಾರೆ ಎಂಬ ವಿಶ್ವಾಸ ಇದೆ ಎನ್ನುವ ಭರವಸೆ ನೀಡಿದ್ದಾರೆ.

ಅಖಂಡ ಶ್ರೀನಿವಾಸ್​​ ಮನವಿಗೆ ಸುರ್ಜೇವಾಲಾರಿಂದ ಧನಾತ್ಮಕ ಪ್ರತಿಕ್ರೆಯೆ ವ್ಯಕ್ತವಾಗಿದೆ. ಸಂಪತ್ ರಾಜ್ ವಿರುದ್ಧ ಕ್ರಮ‌ ಕೈಗೊಳ್ಳುವ ಕುರಿತು ಭರವಸೆ ನೀಡಿದ್ದಾರೆ. ಅಲ್ಲದೆ,  ಹೈಕಮಾಂಡ್ ಜತೆ ಚರ್ಚೆ ಬಳಿಕ ಈ ಬಗ್ಗೆ ನಿರ್ಧರಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: Sampath Raj ಪರಪ್ಪನ ಅಗ್ರಹಾರ ಜೈಲಿನಿಂದ ಸಂಪತ್ ರಾಜ್ ಬಿಡುಗಡೆ

ಏನಿದು ಪ್ರಕರಣ?

ಬೆಂಗಳೂರಿನ ಕೆ.ಜೆ.ಹಳ್ಳಿ-ಡಿ.ಜೆ.ಹಳ್ಳಿ ಗಲಭೆ ಪ್ರಕರಣ ಮತ್ತು ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಸಂಪತ್​ ರಾಜ್ ಸಿಸಿಬಿ ಬಲೆಗೆ ಬಿದ್ದಿದ್ದರು. ಪ್ರಕರಣದಲ್ಲಿ ಚಾರ್ಜ್​ಶೀಟ್ ದಾಖಲಾದ ದಿನದಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ನ ಬಹಳ ಪ್ರಯಾಸದ ನಂತರ ಸಿಸಿಬಿ ಅಧಿಕಾರಿಗಳು ಬಂಧಿಸಿದ್ದರು. ನಂತರ ಹೈಕೋರ್ಟ್​ ಅವರಿಗೆ ಜಾಮೀನು ನೀಡಿತ್ತು.

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
‘ನಾವು ಗೌಡ್ರು, ಮಾತು ಸ್ಮೂತ್ ಇಲ್ಲ’; ಯಶ್ ತಾಯಿ ಪುಷ್ಪಾ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ
ಟಾಟಾ ಏಸ್ ಪ್ರೋ ಒಂದು ಮಹಾನ್ ಶಕ್ತಿ: ಅನಿರುದ್ಧ ಕುಲಕರ್ಣಿ