AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರೇಕೆರೂರು, ರಟ್ಟಿಹಳ್ಳಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಕೃಷಿ ಸಚಿವರ ಸಹಾಯ ಹಸ್ತ; ಕೊರೊನಾ ಸೋಂಕಿತರ ವೆಚ್ಚ ಭರಿಸಲು ಮುಂದಾದ ಬಿ.ಸಿ.ಪಾಟೀಲ್

ಜಿಲ್ಲೆಯಲ್ಲಿನ ಕೆಲವೊಂದು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಹಾಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಧಾವಿಸಿದ್ದಾರೆ.

ಹಿರೇಕೆರೂರು, ರಟ್ಟಿಹಳ್ಳಿ ವ್ಯಾಪ್ತಿಯ ಬಡ ಕುಟುಂಬಗಳಿಗೆ ಕೃಷಿ ಸಚಿವರ ಸಹಾಯ ಹಸ್ತ; ಕೊರೊನಾ ಸೋಂಕಿತರ ವೆಚ್ಚ ಭರಿಸಲು ಮುಂದಾದ ಬಿ.ಸಿ.ಪಾಟೀಲ್
ಬಿ.ಸಿ.ಪಾಟೀಲ್​
sandhya thejappa
|

Updated on: Apr 29, 2021 | 11:13 AM

Share

ಹಾವೇರಿ: ಈಗ ಎಲ್ಲೆಲ್ಲೂ ಕೊರೊನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಸಿಗುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಹಣಕ್ಕಾಗಿ ಸೋಂಕಿತರ ಜೀವದ ಜೊತೆ ಆಟವಾಡುತ್ತಿದ್ದಾರೆ. ಹಣ ನೀಡದಿದ್ದರೆ ಖಾಸಗಿ ಆಸ್ಪತ್ರೆ ಸೂಕ್ತ ಚಿಕಿತ್ಸೆ ನೀಡಲ್ಲ ಅಂತಾ ಹಲವರು ಆರೋಪಿಸುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ವಿರುದ್ಧ ಅದೆಷ್ಟೋ ಜನರು ಹಿಡಿಶಾಪ ಹಾಕುತ್ತಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಬಡವರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ.

ಸರ್ಕಾರಿ ಆಸ್ಪತ್ರೆಗಳ ಜೊತೆಗೆ ಜಿಲ್ಲೆಯಲ್ಲಿನ ಕೆಲವೊಂದು ಖಾಸಗಿ ಆಸ್ಪತ್ರೆಗಳಲ್ಲೂ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೀಗಾಗಿ ಜಿಲ್ಲೆಯ ಹಿರೇಕೆರೂರು ಮತಕ್ಷೇತ್ರದ ವ್ಯಾಪ್ತಿಗೆ ಬರುವ ಹಿರೇಕೆರೂರು ಮತ್ತು ರಟ್ಟಿಹಳ್ಳಿ ತಾಲೂಕಿನ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಲ್ಲಿ ಕೊರೊನಾ ಸೋಂಕಿನಿಂದ ಬಳಲುತ್ತಿರುವವರ ಸಹಾಯಕ್ಕೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಧಾವಿಸಿದ್ದಾರೆ.

ಈ ಸಂಬಂಧ ತಮ್ಮ ಹಿರೇಕೆರೂರಿನ ನಿವಾಸದಲ್ಲಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಹಿರೇಕೆರೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಬಡತನ ರೇಖೆಗಿಂತ ಕೆಳಗಿರುವ ಕುಟುಂಬದ ಸದಸ್ಯರು ಕೊರೊನಾ ಸೋಂಕಿಗೆ ತುತ್ತಾಗಿ ಹಿರೇಕೆರೂರು ಸೇರಿದಂತೆ ಹಾವೇರಿ ಜಿಲ್ಲೆಯ ಯಾವುದೇ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಲ್ಲಿ ಅವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ವೈಯಕ್ತಿಕವಾಗಿ ಭರಿಸುವುದಾಗಿ ಘೋಷಿಸಿದ್ದಾರೆ.

ಬಡತನ ರೇಖೆಗಿಂತ ಕೆಳಗಿನ ಕುಟುಂಬದಲ್ಲಿ ಕೊವಿಡ್ ಚಿಕಿತ್ಸೆಗೆ ಹಾವೇರಿ ಜಿಲ್ಲೆಗೆ ಒಳಪಟ್ಟ ಆಸ್ಪತ್ರೆಗಳಿಗೆ ಮಾತ್ರ ದಾಖಲಾಗಿರಬೇಕು. ಬಿಪಿಎಲ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ಚಿಕಿತ್ಸೆ ಪಡೆದ ವಿವರ, ಮಾಹಿತಿ ಮತ್ತು ಅಗತ್ಯ ದಾಖಲೆಗಳು ಹಾಗೂ ಆಸ್ಪತ್ರೆಯ ಬಿಲ್ಗಳನ್ನು ಸಲ್ಲಿಸಲು ಸಚಿವರ ಆಪ್ತ ಸಹಾಯಕರಾದ ಮನೋಜ್ ಹಾರನಹಳ್ಳಿ ಹಾಗೂ ನಾಗರಾಜ್ ಬಣಕಾರ್ ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಸಚಿವ ಪಾಟೀಲ ತಿಳಿಸಿದ್ದಾರೆ.

ಇದನ್ನೂ ಓದಿ

ಕೊರೊನಾ ಸೋಂಕಿತನ ತಪ್ಪು ಗ್ರಹಿಕೆಯಿಂದ ಚಿಕ್ಕಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಿತು ರಂಪಾಟ!

Coronavirus India Update: ದೇಶದಲ್ಲಿ ಒಂದೇ ದಿನ 3.79 ಲಕ್ಷ ಹೊಸ ಕೊವಿಡ್ ಪ್ರಕರಣ, 3,645 ಸಾವು

(BC Patil decided to donate money to poorest families of corona infected in haveri)

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್