AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಮತ್ತೊಮ್ಮೆ ಜೆಸಿಬಿ ಸದ್ದು: ಅಕ್ರಮ 200 ಮನೆಗಳು ತೆರವು ಮಾಡಿದ ಬಿಡಿಎ

ಬೆಂಗಳೂರಿನಲ್ಲಿ ಬಿಡಿಎ ಅಕ್ರಮ ಮನೆಗಳನ್ನು ನೆಲಸಮ ಮಾಡಿದ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಗೊರೆಗುಂಟೆಪಾಳ್ಯದಲ್ಲಿ 200ಕ್ಕೂ ಹೆಚ್ಚು ಮನೆಗಳನ್ನು ಧ್ವಂಸ ಮಾಡಲಾಗಿದೆ. ವಯಸ್ಸಾದವರು, ಬಾಣಂತಿಯರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವವರು ವಾಸಿಸುತ್ತಿದ್ದ ಮನೆಗಳು ನೆಲಸಮವಾಗಿರುವುದು ದುರಂತ. ಜನರು ಪರಿಹಾರಕ್ಕಾಗಿ ಮನವಿ ಮಾಡುತ್ತಿದ್ದಾರೆ.

ಬೆಂಗಳೂರಲ್ಲಿ ಮತ್ತೊಮ್ಮೆ ಜೆಸಿಬಿ ಸದ್ದು: ಅಕ್ರಮ 200 ಮನೆಗಳು ತೆರವು ಮಾಡಿದ ಬಿಡಿಎ
ಬೆಂಗಳೂರಲ್ಲಿ ಮತ್ತೊಮ್ಮೆ ಜೆಸಿಬಿ ಸದ್ದು: ಅಕ್ರಮ 200 ಮನೆಗಳು ತೆರವು ಮಾಡಿದ ಬಿಡಿಎ
ಶಾಂತಮೂರ್ತಿ
| Edited By: |

Updated on:Nov 07, 2024 | 3:10 PM

Share

ಬೆಂಗಳೂರು, ನವೆಂಬರ್​​​ 07: ನಗರದಲ್ಲಿ ಇಂದು ಬೆಳಿಗ್ಗೆ ಬಿಡಿಎ (BDA) ಜೆಸಿಬಿ ಮತ್ತೆ ಘರ್ಜನೆ ಮಾಡಿದೆ. ಗೊರೆಗುಂಟೆಪಾಳ್ಯ ಬಳಿಯ ಆಶ್ರಯ ನಗರ ಬಡಾವಣೆಯಲ್ಲಿ ಅಕ್ರಮ 200 ಮನೆಗಳನ್ನು ಬಿಡಿಎ ನೆಲಸಮ ಮಾಡಿದೆ. ಆ ಮೂಲಕ ಕಳೆದ ಮೂವತ್ತು, ನಲವತ್ತು ವರ್ಷಗಳಿಂದ ವಾಸ ಮಾಡುತ್ತಿದ್ದ ಮನೆಗಳು ಧರೆಗುರುಳಿವೆ.

ಜಾಗ ಖಾಲಿ ಮಾಡಿ ಅಂತಾ ಬಿಡಿಎ ಸೂಚನೆ ನೀಡಲಾಗಿತ್ತು. ಆದರೆ ಜಾಗ ಖಾಲಿ ಮಾಡದ ಹಿನ್ನೆಲೆ ತೆರವು ಕಾರ್ಯಾಚರಣೆ ಮಾಡಲಾಗಿದೆ. ಮನೆಗಳನ್ನು ಬಿಡಿಎ ನೆಲಸಮ ಮಾಡಿದಕ್ಕೆ ಸಾರ್ಮಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ 279 ಅನಧಿಕೃತ ಲೇಔಟ್​​ಗಳು ಪತ್ತೆ: ಈ ಸ್ಥಳಗಳಲ್ಲಿ ಜಾಗ ಖರೀದಿಸದಂತೆ ಬಿಡಿಎ ಎಚ್ಚರಿಕೆ

ಪ್ರತಿ ಮನೆಯಲ್ಲಿ ವಯಸ್ಸಾದವರು, ಬಾಣಂತಿಗರು ಸೇರಿದಂತೆ ಅನಾರೋಗ್ಯ ಪೀಡಿತರಿದ್ದಾರೆ. ಈ ರೀತಿ ಮನೆ ನೆಲಸಮ ಮಾಡಿದರೆ ಅವರು ಎಲ್ಲಿಗೆ ಹೋಗಬೇಕು. ಇದಕ್ಕೆಲ್ಲಾ ಅಧಿಕಾರಿಗಳೇ ಉತ್ತರ ನೀಡಬೇಕು. ಜನರು ಕಣ್ಣೀರು ಹಾಕುತ್ತಿದ್ದಾರೆ. ಇದಕ್ಕೆಲ್ಲಾ ಪರಿಹಾರ ಕೊಡಬೇಕು ಎಂದು ಮಹಿಳೆಯೊಬ್ಬರು ಟಿವಿ9 ಎದುರು ಅಳಲು ತೊಡಿಕೊಂಡಿದ್ದಾರೆ.

ಇನ್ನು ಇತ್ತೀಚೆಗೆ ಬೆಳ್ಳಂಬೆಳಿಗ್ಗೆ ಬಿಡಿಎ ಜೆಸಿಬಿಗಳು ನಾಗರಬಾವಿ ಸಮೀಪದ ಚಂದ್ರ ಲೇಔಟ್​ನಲ್ಲಿ ಕೂಡ ಜೆಸಿಬಿ ಘರ್ಜಿಸಿತ್ತು. ಅದರ ಎಫೆಕ್ಟ್​ಗೆ ಅಂಗಡಿಗಳೆಲ್ಲ ನೆಲಸಮವಾಗಿದ್ದವು. ಬಿಡಿಎ ಜಾಗದಲ್ಲಿದ್ದ 40ಕ್ಕೂ ಹೆಚ್ಚು ಅಂಗಡಿ-ಮುಂಗಟ್ಟುಗಳನ್ನ ಬಿಡಿಎ ಕ್ಷಣಮಾತ್ರದಲ್ಲಿ ನೆಲಸಮ ಮಾಡಿದ್ದು, ಬಿಡಿಎ ಇತಿಹಾಸದಲ್ಲೇ ಅತಿದೊಡ್ಡ ಡೆಮಾಲಿಷನ್ ಮಾಡಿ ಕಟ್ಟಡಗಳನ್ನ ಧರೆಗುರುಳಿಸಿತ್ತು.

ಇದನ್ನೂ ಓದಿ: ಯಡಿಯೂರಪ್ಪ ಮಂಜೂರು ಮಾಡಿದ್ದ ಜಾಗ 8 ವರ್ಷಗಳ ಬಳಿಕ ಪತ್ತೆ: ರುದ್ರಭೂಮಿಗೆ ಈಗ ಗುದ್ದಲಿ ಪೂಜೆ

9 ಎಕರೆ 13 ಗುಂಟೆಯ ಬಿಡಿಎ ಜಾಗ. ತನ್ನದೇ ಜಾಗವನ್ನ ಖಾಸಗಿ ವ್ಯಕ್ತಿ ಕಬ್ಜ ಮಾಡಿದ್ದು ಕೋರ್ಟ್ ಅಂಗಳದಲ್ಲಿ ಹಲವು ವರ್ಷಗಳಿಂದ ಜಾಗ ವಿವಾದದಲ್ಲಿತ್ತು. ವಿವಾದದ ಭೂಮಿ ಬಿಡಿಎಗೆ ಸೇರಿದೆ ಅಂತಾ ಆದೇಶ ಬಂದಿದ್ದೆ ತಡ ಪೊಲೀಸರ ಜೊತೆ ಎಂಟ್ರಿಕೊಟ್ಟ ಬಿಡಿಎ ಅಧಿಕಾರಿಗಳು ಸರ್ವೇ ನಂಬರ್ 78ರಲ್ಲಿದ್ದ 9 ಎಕರೆ ಜಾಗದ 500 ಕೋಟಿ ರೂ. ಮೌಲ್ಯದ ಜಾಗವನ್ನ ತೆಕ್ಕೆಗೆ ಪಡೆದುಕೊಂಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:09 pm, Thu, 7 November 24

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ