AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗದಲ್ಲಿ ಕರಡಿ ಕಾಟ: ಆತಂಕಕ್ಕೊಳಗಾದ ಜನ

ಚಿತ್ರದುರ್ಗದಲ್ಲಿ ಕರಡಿ ಕಾಟದಿಂದಾಗಿ ಜನರು ಆತಂಕಕ್ಕೊಳಗಾಗಿದ್ದಾರೆ. ಈ ನಿಟ್ಟಿನಲ್ಲಿ, ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅನಾಹುತಗಳು ಸಂಭವಿಸುವ ಮುನ್ನ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಚಿತ್ರದುರ್ಗದಲ್ಲಿ ಕರಡಿ ಕಾಟ: ಆತಂಕಕ್ಕೊಳಗಾದ ಜನ
ಕರಡಿ ಭಯದಿಂದ ಚಿತ್ರದುರ್ಗ ಜನ ಆತಂಕಕ್ಕೆ ಒಳಗಾಗಿದ್ದಾರೆ.
shruti hegde
| Edited By: |

Updated on:Jan 16, 2021 | 6:29 AM

Share

ಚಿತ್ರದುರ್ಗ: ಜಿಲ್ಲೆಯ ಗ್ರಾಮ ಒಂದರ ಬಳಿ ಅಪರೂಪದ ಅತಿಥಿಗಳು ಬಂದು ನೆಲೆಸಿದ್ದಾರೆ. ನಿತ್ಯ ಒಂದಲ್ಲಾ ಒಂದು ಕಡೆ ಜನರೆದುರು ಪ್ರತ್ಯಕ್ಷವಾಗುತ್ತಿದ್ದಾರೆ. ಹೀಗಾಗಿ, ಕೋಟೆನಾಡಿನ ಗ್ರಾಮೀಣ ಭಾಗದ ಜನರು ಭೀತಿಯಲ್ಲೇ ಬದುಕು ನಡೆಸುತ್ತಿದ್ದಾರೆ.

ಜಿಲ್ಲೆ ಚಳ್ಳಕೆರೆ ತಾಲೂಕಿನ ಮೈಲನಹಳ್ಳಿಯಲ್ಲಿ ಜನರಿಗೆ ಕರಿ ಭೀತಿ ಹೆಚ್ಚಾಗಿದೆ.  ಕಳೆದ ಅನೇಕ‌ ದಿನಗಳಿಂದ ಗ್ರಾಮದ ಬಳಿ ಕರಡಿಗಳು ಬಿಡಾರ ಹೂಡಿವೆ. ಆಗಾಗ ಜನರೆದುರು ಪ್ರತ್ಯಕ್ಷ ಆಗುತ್ತಿದ್ದು ಜನರಲ್ಲಿ ಭೀತಿ‌ ಸೃಷ್ಟಿಸಿದೆ. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಪ್ರಯೋಜನ ಆಗಿಲ್ಲ ಎಂದು ಗ್ರಾಮದ ಜನರು ಆರೋಪಿಸಿದ್ದಾರೆ.

ಕರಡಿಯ ಬೀತಿಗೆ ಹೆದರಿದ ಜನ:

ಇನ್ನು, ಕರಡಿಗಳ ಭೀತಿಯಿಂದಾಗಿ ಜನರು ಮನೆಯಿಂದ ಹೊರ ಬರಲು ಹೆದರುತ್ತಿದ್ದಾರೆ. ಜಮೀನುಗಳಿಗೆ ಕೂಲಿ ಕೆಲಸಕ್ಕೆ ಬರಲು ಕಾರ್ಮಿಕರು ಹೆದರುವ ಪರಿಸ್ಥಿತಿ ಎದುರಾಗಿದೆ. ಅಂತೆಯೇ, ಸಂಜೆಯಾದರೆ ಸಾಕು ಮಹಿಳೆಯರು, ಮಕ್ಕಳು ಹೊರ ಹೋಗಲಾಗದ ಸ್ಥಿತಿ ನಿರ್ಮಾಣ ಆಗಿದೆ. ಹೀಗಿದ್ರೂ, ಕರಡಿಗಳನ್ನು ಸೆರೆ ಹೊಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ಸ್ಥಳಿಯ ನಿವಾಸಿ ಆಂಜನಪ್ಪ ಜನರ ನೋವನ್ನು ಹಂಚಿಕೊಂಡಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ಬೇಸಿಗೆಗೂ ಮುನ್ನವೇ ಕಾಡು ಪ್ರಾಣಿಗಳು ಆಹಾರ ಹುಡುಕಿಕೊಂಡು ನಾಡಿನತ್ತ ಹೆಜ್ಜೆ ಹಾಕುತ್ತಿವೆ. ಇನ್ನು, ಬೇಸಿಗೆಯಲ್ಲಿ‌ ಕಾಡು ಬರಿದಾದಾಗ ಇನ್ನೇನು ಗತಿ‌ ಎಂಬ ಭೀತಿ ಜನರಲ್ಲಿ ಮೂಡಿದೆ. ಹೀಗಾಗಿ, ಅರಣ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿ ಅನಾಹುತಗಳು ಸಂಭವಿಸುವ ಮುನ್ನ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

ಆಹಾರ ಅರಸಿ ಗ್ರಾಮಗಳಿಗೆ ನುಗ್ಗಿದ ಹಿಮಕರಡಿಗಳು

Published On - 10:42 pm, Fri, 15 January 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?