AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣದ ಕಾಶ್ಮೀರ ಕೊಡಗಿನಲ್ಲಿ ‘ಶ್ವೇತ ಸುಂದರಿ’ ಕಲರವ

ಕೊಡಗು: ದಕ್ಷಿಣದ ಕಾಶ್ಮೀರ ಕೊಡಗು ಅಂದ್ರೆ, ನಿಸರ್ಗ ಸಿರಿಯ ಆಗರ.. ಯಾರ ಮುಡಿಗೂ ಏರದ.. ದೇವರ ಅಡಿಗೂ ಸೇರದ… ತನ್ನಷ್ಟಕ್ಕೆ ತಾನು ಅರಳಿ ಮರೆಯಾಗೋ ಶ್ವೇತ ವರ್ಣದ ಪುಷ್ಪಗಳ ರಾಶಿ, ತಾನಿರುವಷ್ಟು ದಿನ ತಾನಾರಿಗೆ ಕಡಿಮೆ ಎನ್ನುವಂತೆ ಅರಳಿ ಸೂಜಿಗಲ್ಲಿನಂತೆ ಸೆಳೆಯುತ್ತಿದೆ.. ಹಸಿರು ಹೊದ್ದ ಭೂರಮೆಯ ಅಂದ… ಐಸಿರಿಯ ಇಮ್ಮಡಿಗೊಳಿಸೋ ಕುಸುಮರಾಶಿ… ಎಲ್ಲೆಲ್ಲೂ ಹರಡಿಕೊಂಡು ಕಂಗೊಳಿಸೋ ಚಳಿಗಾಲದ ಪುಷ್ಪರಾಣಿ… ಹಾಲ್ಚೆಲ್ಲಿದಂತೆ ಹರಡಿರೋ ದಕ್ಷಿಣದ ಕಾಶ್ಮೀರಕ್ಕೆ ಮೆರುಗು ತಂದ ಕಾಡು ಮಲ್ಲಿಗೆ…. ಹೌದು, ಭೂ ಲೋಕದ ಸ್ವರ್ಗ ಹೇಳಿ […]

ದಕ್ಷಿಣದ ಕಾಶ್ಮೀರ ಕೊಡಗಿನಲ್ಲಿ ‘ಶ್ವೇತ ಸುಂದರಿ’ ಕಲರವ
ಸಾಧು ಶ್ರೀನಾಥ್​
|

Updated on:Dec 22, 2019 | 1:59 PM

Share

ಕೊಡಗು: ದಕ್ಷಿಣದ ಕಾಶ್ಮೀರ ಕೊಡಗು ಅಂದ್ರೆ, ನಿಸರ್ಗ ಸಿರಿಯ ಆಗರ.. ಯಾರ ಮುಡಿಗೂ ಏರದ.. ದೇವರ ಅಡಿಗೂ ಸೇರದ… ತನ್ನಷ್ಟಕ್ಕೆ ತಾನು ಅರಳಿ ಮರೆಯಾಗೋ ಶ್ವೇತ ವರ್ಣದ ಪುಷ್ಪಗಳ ರಾಶಿ, ತಾನಿರುವಷ್ಟು ದಿನ ತಾನಾರಿಗೆ ಕಡಿಮೆ ಎನ್ನುವಂತೆ ಅರಳಿ ಸೂಜಿಗಲ್ಲಿನಂತೆ ಸೆಳೆಯುತ್ತಿದೆ..

ಹಸಿರು ಹೊದ್ದ ಭೂರಮೆಯ ಅಂದ… ಐಸಿರಿಯ ಇಮ್ಮಡಿಗೊಳಿಸೋ ಕುಸುಮರಾಶಿ… ಎಲ್ಲೆಲ್ಲೂ ಹರಡಿಕೊಂಡು ಕಂಗೊಳಿಸೋ ಚಳಿಗಾಲದ ಪುಷ್ಪರಾಣಿ… ಹಾಲ್ಚೆಲ್ಲಿದಂತೆ ಹರಡಿರೋ ದಕ್ಷಿಣದ ಕಾಶ್ಮೀರಕ್ಕೆ ಮೆರುಗು ತಂದ ಕಾಡು ಮಲ್ಲಿಗೆ….

ಹೌದು, ಭೂ ಲೋಕದ ಸ್ವರ್ಗ ಹೇಳಿ ಕೇಳಿ ನಿಸರ್ಗ ಸಿರಿಯ ತವರು. ಪಶ್ಚಿಮಘಟ್ಟದ ತಪ್ಪಲಿನ ಪುಟ್ಟ ಜಿಲ್ಲೆಯ ಪ್ರಕೃತಿ ಪ್ರಿಯರ ಹಾಟ್ ಸ್ಪಾಟ್. ಚಳಿಗಾಲಕ್ಕೆ ಅತಿಥಿಗಳಾದ ಶ್ವೇತ ವರ್ಣದ ಹೂಗಳ ಸೊಬಗು ಕಣ್ಮನ ಸೆಳೆಯುತ್ತಿವೆ. ಬೆಟ್ಟ ಗುಡ್ಡಗಳಲ್ಲಿ ಅರಳಿ ನಿಂತಿರೋ ಕಾಡು ಮಲ್ಲಿಗೆ ಹೂಗಳು ಕಂಪು ಬೀರ್ತಿವೆ. ಥೇಟ್ ಮಲ್ಲಿಗೆಯಂತೆ ಅರಳಿನಿಂತಿರೋ ಈ ಹೂಗಳು ತಮ್ಮ ನೈಜ ಸೌಂದರ್ಯದಿಂದ ಎಲ್ಲರನ್ನು ಸೆಳೀತಿವೆ.

ಮಡಿಕೇರಿ ಕುಶಾಲನಗರ, ಮಡಿಕೇರಿ, ವಿರಾಜಪೇಟೆ ಸಿದ್ದಾಪುರ ರಸ್ತೆಗಳಲ್ಲಿ ಎತೇಚ್ಚವಾಗಿ ಅರಳಿರುವ ಹೂಗಳನ್ನು ನೋಡೋದೆ ಅಂದ. ಶ್ವೇತ ಸುಂದರಿಯರನ್ನು ಕಂಡ ಪುಷ್ಪಪ್ರಿಯರು ತಮ್ಮ ಮೊಬೈಲ್​ಗಳಲ್ಲಿ ಸೌಂದರ್ಯರಾಣಿಯರನ್ನು ಸೆರೆಹಿಡಿಯುತ್ತಿದ್ದಾರೆ. ಕಾಡುಮಲ್ಲಿಗೆ ಎಂದು ಕರೆಯುವ ಈ ಹೂಗಳನ್ನು ಕ್ರಿಸ್ ಮಸ್ ಫ್ಲವರ್ ಅಂತಲೂ ಕರೆಯೋದು ವಿಶೇಷ.

ಒಟ್ನಲ್ಲಿ ವರ್ಷಕ್ಕೊಮ್ಮೆ ಚಳಿಗಾಲಕ್ಕೆ ಹಾಜರಾಗೋ ಈ ಪುಷ್ಪ ರಾಣಿಯರು ಮಂಜಿನ ನಗರಿ ಅಂದವನ್ನ ಇಮ್ಮಡಿಗೊಳಿಸುತ್ತವೆ. ಎಷ್ಟು ನೋಡಿದರೂ ಮತ್ತೆ ಮತ್ತೆ ನೋಡಬೇಕೆನಿಸುವಂತಾ ಸೌಂದರ್ಯದೊಂದಿಗೆ ನಳನಳಿಸುತ್ತಿರೋ ಹೂಗಳು ಚೆಲುವೆಲ್ಲಾ ತನ್ನದೇ ಅನ್ನುತ್ತಾ ಮಡಿಕೇರಿಗೆ ಬರೋ ಪ್ರವಾಸಿಗರಿಗೆ ಮುದನೀಡ್ತಿವೆ.

Published On - 1:57 pm, Sun, 22 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!