ಬೆಂಗಳೂರಿನಲ್ಲಿ ರಸ್ತೆಗಿಳಿಯೋಕು ಮುನ್ನ ಎಚ್ಚರ ಎಚ್ಚರ..!

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಭಾರತ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆಲ ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಯಾವ ವಾಹನಗಳು ಕೂಡ ಓಡಾಡುವ ಹಾಗಿಲ್ಲ. ಆದರೆ ಲಾಕ್​ಡೌನ್ ನಿಯಮ ಉಲ್ಲಂಘಿ ರಸ್ತೆಗಳಿಯುವವರಿಗೆ ಈಗ ಬಿಗ್ ಶಾಕ್ ಕಾದಿದೆ. ಹೆಲ್ಮೆಟ್ ಧರಿಸದೆ ಸಂಚರಿಸುವ ಸವಾರರಿಗೆ ಭಾರಿ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಟ್ರಿನಿಟಿ ಸರ್ಕಲ್​ ಬಳಿಯ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಸವಾರ ಹಾಗೂ ಚಾಲಕರ ಫೋಟೋ ಪಡೆದು ನೋಟಿಸ್ ನೀಡಿ ಭಾರಿ ದಂಡ ವಿಧಿಸಲು ಮುಂದಾಗಿದ್ದಾರೆ. ಮಾಸ್ಕ್ […]

ಬೆಂಗಳೂರಿನಲ್ಲಿ ರಸ್ತೆಗಿಳಿಯೋಕು ಮುನ್ನ ಎಚ್ಚರ ಎಚ್ಚರ..!
ಸಾಧು ಶ್ರೀನಾಥ್​

Updated on: Apr 22, 2020 | 12:06 PM

ಬೆಂಗಳೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಭಾರತ ಲಾಕ್​ಡೌನ್ ಮಾಡಲಾಗಿದೆ. ಈ ವೇಳೆ ಕೆಲ ಅನುಮತಿ ಇರುವ ವಾಹನಗಳನ್ನು ಹೊರತುಪಡಿಸಿ ಯಾವ ವಾಹನಗಳು ಕೂಡ ಓಡಾಡುವ ಹಾಗಿಲ್ಲ. ಆದರೆ ಲಾಕ್​ಡೌನ್ ನಿಯಮ ಉಲ್ಲಂಘಿ ರಸ್ತೆಗಳಿಯುವವರಿಗೆ ಈಗ ಬಿಗ್ ಶಾಕ್ ಕಾದಿದೆ.

ಹೆಲ್ಮೆಟ್ ಧರಿಸದೆ ಸಂಚರಿಸುವ ಸವಾರರಿಗೆ ಭಾರಿ ದಂಡ ವಿಧಿಸಲು ಪೊಲೀಸರು ಮುಂದಾಗಿದ್ದಾರೆ. ಟ್ರಿನಿಟಿ ಸರ್ಕಲ್​ ಬಳಿಯ ಚೆಕ್​ಪೋಸ್ಟ್​ನಲ್ಲಿ ತಪಾಸಣೆ ಮಾಡಲಾಗುತ್ತಿದ್ದು, ಸವಾರ ಹಾಗೂ ಚಾಲಕರ ಫೋಟೋ ಪಡೆದು ನೋಟಿಸ್ ನೀಡಿ ಭಾರಿ ದಂಡ ವಿಧಿಸಲು ಮುಂದಾಗಿದ್ದಾರೆ. ಮಾಸ್ಕ್ ಹಾಕದೆ ಸಂಚರಿಸುವ ಕಾರು ಚಾಲಕರಿಗೂ ಪೈನ್ ಬೀಳಲಿದೆ.

ಲಾಕ್​​ಡೌನ್ ನಡುವೆ ನಿಯಮ ಉಲ್ಲಂಘಿಸಿ ಅನಗತ್ಯವಾಗಿ ಸಂಚರಿಸಿದ ಬಹುತೇಕ ವಾಹನಗಳನ್ನು ಈಗಾಗಲೇ ಜಪ್ತಿ ಮಾಡಲಾಗಿದೆ. ಇದುವರೆಗೂ 38,974 ವಾಹನಗಳು ಜಪ್ತಿಯಾಗಿವೆ. ನಗರದಲ್ಲಿ 36,375 ದ್ವಿಚಕ್ರವಾಹನಗಳು, 1602 ಕಾರುಗಳು ಹಾಗೂ ಆಟೋ ಇನ್ನಿತರ ವಾಹನಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರತಿಯೊಂದು ವಾಹನಗಳ ಪಾಸ್, ದಾಖಲೆಗಳ ಪರಿಶೀಲನೆ ಮಾಡಲಾಗುತ್ತಿದೆ. ತುರ್ತು ಸೇವೆ ನೆಪದಲ್ಲಿ ಪಾಸ್​​​​​​ ಪಡೆದು ಬೇಕಾಬಿಟ್ಟಿ ಸಂಚಾರ ಮಾಡುತ್ತಿದ್ದು, ಪರಿಶೀಲನೆ ವೇಳೆ ಪಾಸ್ ದುರ್ಬಳಕೆ ಪ್ರಕರಣಗಳು ಬೆಳಕಿಗೆ ಬಂದಿವೆ. ಹೀಗಾಗಿ ಖಾಕಿ ಕೆಲವೆಡೆ ಪಾಸ್ ದುರ್ಬಳಕೆ ಮಾಡಿದ ವಾಹನಗಳನ್ನ ಕಂಪ್ಲೀಟ್ ಸೀಜ್ ಮಾಡ್ತಿದೆ.

Published On - 9:39 am, Wed, 22 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us