ಕರ್ನಾಟಕದಲ್ಲಿ ಬಿಯರ್ ಮಾರಾಟ ಭರ್ಜರಿ ಹೆಚ್ಚಳ: ಅಬಕಾರಿ ಇಲಾಖೆಗೆ ಹರಿದುಬಂತು ಆದಾಯ

ಕಳೆದ ವರ್ಷಕ್ಕೆ ಹೋಲಿಸಿದರೆ ಭಾರತೀಯ ನಿರ್ಮಿತ ಮದ್ಯದ ಮಾರಾಟದಲ್ಲಿ ಕುಸಿತ ಕಂಡುಬಂದಿದ್ದರೂ ಬಿಯರ್ ಮಾರಾಟದಲ್ಲಿ ಗಣನೀಯ ಏರಿಕೆ ಕಂಡುಬಂದಿದೆ ಎಂಬುದು ಕರ್ನಾಟಕ ಅಬಕಾರಿ ಇಲಾಖೆ ಅಂಕಿಅಂಶಗಳಿಂದ ತಿಳಿದುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದಲ್ಲಿ ಎಷ್ಟು ಬಿಯರ್ ಮಾರಾಟವಾಗಿದೆ? ಎಷ್ಟು ಆದಾಯ ಸಂಗ್ರಹವಾಗಿದೆ? ವಿವರ ಇಲ್ಲಿದೆ

ಕರ್ನಾಟಕದಲ್ಲಿ ಬಿಯರ್ ಮಾರಾಟ ಭರ್ಜರಿ ಹೆಚ್ಚಳ: ಅಬಕಾರಿ ಇಲಾಖೆಗೆ ಹರಿದುಬಂತು ಆದಾಯ
ಸಾಂದರ್ಭಿಕ ಚಿತ್ರ
Follow us
|

Updated on: Oct 10, 2024 | 11:03 AM

ಬೆಂಗಳೂರು, ಅಕ್ಟೋಬರ್ 10: ವಾತಾವರಣ, ಸಾಲು ರಜೆಗಳು ಇತ್ಯಾದಿ ಹಲವು ಕಾರಣಗಳಿಂದಾಗಿ ಕರ್ನಾಟಕದಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬಿಯರ್ ಮಾರಾಟದಲ್ಲಿ ಏರಿಕೆಯಾಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಹಣಕಾಸು ವರ್ಷಕ್ಕೆ ಹೋಲಿಸಿದರೆ 2024-25ರ ಹಣಕಾಸು ವರ್ಷದಲ್ಲಿ ಒಟ್ಟಾರೆ ಮದ್ಯ ಮಾರಾಟದಲ್ಲಿ ಶೇ 5.55 ರಷ್ಟು ಏರಿಕೆಯಾಗಿದೆ. ಅಬಕಾರಿ ಇಲಾಖೆ ದಾಖಲೆಗಳ ಪ್ರಕಾರ, ಏಪ್ರಿಲ್​ನಿಂದ ಸೆಪ್ಟೆಂಬರ್ ವರೆಗೆ 921.90 ಕೋಟಿ ರೂ. ಮೌಲ್ಯದ ಮದ್ಯ ಮಾರಾಟವಾಗಿದೆ.

ಬಿಯರ್ ಮಾರಾಟದಲ್ಲಿ ತೀವ್ರ ಏರಿಕೆ ಕಂಡುಬಂದಿದೆ ಮತ್ತು ಭಾರತೀಯ ನಿರ್ಮಿತ ಮದ್ಯದ (ಐಎಂಎಲ್) ಮಾರಾಟದಲ್ಲಿ ಕುಸಿತ ಕಂಡುಬಂದಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, ಬಿಯರ್ ಮಾರಾಟದಲ್ಲಿ ಶೇ 14.90 ಏರಿಕೆ ಮತ್ತು ಐಎಂಎಲ್ ಮಾರಾಟದಲ್ಲಿ ಶೇ 2 ಇಳಿಕೆಯಾಗಿದೆ. ಕಳೆದ ಆರು ತಿಂಗಳಲ್ಲಿ, ಬಿಯರ್ ಮಾರಾಟವು ಶೇ 15 ರಷ್ಟು ಬೆಳವಣಿಗೆಯನ್ನು ತೋರಿಸಿದೆ. ಇದು ಹವಾಮಾನ, ವೆಚ್ಚ, ರಜಾದಿನಗಳು ಮತ್ತು ಇತರವುಗಳನ್ನು ಒಳಗೊಂಡಂತೆ ಅನೇಕ ಅಂಶಗಳಿಂದಾಗಿ ಆಗಿದೆ ಎಂದು ಅಬಕಾರಿ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್​ ಎಕ್ಸ್​ಪ್ರೆಸ್’ ವರದಿ ಮಾಡಿದೆ. ಎರಡು ತಿಂಗಳ ಹಿಂದೆ ಪ್ರೀಮಿಯಂ ಮತ್ತು ಸೆಮಿ ಪ್ರೀಮಿಯಂ ಬ್ರಾಂಡ್‌ಗಳ ಮೇಲಿನ ಬೆಲೆ ಏರಿಕೆ, ಕಡಿಮೆ ಉತ್ಪಾದನೆ ಮತ್ತು ಸ್ಟಾಕ್‌ಗಳಿಂದಾಗಿ ಐಎಂಎಲ್ ಮಾರಾಟದಲ್ಲಿ ಕುಸಿತವಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅಬಕಾರಿ ಇಲಾಖೆ ಅಧಿಕಾರಿಗಳ ಪ್ರಕಾರ, 2023-24ರಲ್ಲಿ ಏಪ್ರಿಲ್-ಸೆಪ್ಟೆಂಬರ್ ವರೆಗೆ 352.82 ಲಕ್ಷ ಪೆಟ್ಟಿಗೆಗಳಷ್ಟು ಐಎಂಎಲ್ ಮಾರಾಟವಾಗಿತ್ತು. 2024-25ರ ಅದೇ ಅವಧಿಯಲ್ಲಿ 345.76 ಲಕ್ಷ ಪೆಟ್ಟಿಗೆಗಳಷ್ಟು ಮಾರಾಟವಾಗಿವೆ. ಅದೇ ರೀತಿ, 2023-24ರಲ್ಲಿ ಏಪ್ರಿಲ್-ಸೆಪ್ಟೆಂಬರ್ ವರೆಗೆ 211.25 ಲಕ್ಷ ಸಿಬಿ ಬಿಯರ್ ಮಾರಾಟವಾಗಿದ್ದರೆ, 2024-25ರಲ್ಲಿ ಅದೇ ಅವಧಿಯಲ್ಲಿ 242.73 ಲಕ್ಷ ಸಿಬಿ ಮಾರಾಟವಾಗಿವೆ.

ಮದ್ಯ ಮಾರಾಟದಿಂದ ಆದಾಯ ಸಂಗ್ರಹ ಹೆಚ್ಚಳ

2023 ರ ಏಪ್ರಿಲ್-ಸೆಪ್ಟೆಂಬರ್ ವರೆಗೆ ಮದ್ಯ ಮಾರಾಟದಿಂದ 16,611.11 ಕೋಟಿ ರೂ. ಆದಾಯ ಸಂಗ್ರಹವಾಗಿದ್ದರೆ, ಈ ವರ್ಷದ ಅದೇ ಅವಧಿಯಲ್ಲಿ 17,533.01 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಆದಾಯದಲ್ಲಿ 921.90 ಕೋಟಿ ರೂ. ಅಥವಾ ಶೇ 5.55 ರಷ್ಟು ಏರಿಕೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ ಕ್ಲೌಡ್ ಕಿಚನ್​ಗಳು: ಇಲ್ಲಿ ಸಿದ್ಧವಾಗುವ ಆಹಾರ ಎಷ್ಟು ಸುರಕ್ಷಿತ?

ಕಳೆದ ಆರ್ಥಿಕ ವರ್ಷದಲ್ಲಿ ಶೇ 48.15ರಷ್ಟು ಮಾರಾಟ ಗುರಿ ಸಾಧಿಸಲಾಗಿದ್ದು, ಈ ವರ್ಷ ಶೇ 45.51ರಷ್ಟು ಗುರಿ ಸಾಧಿಸಲಾಗಿದೆ. 2024 ರ ಏಪ್ರಿಲ್​​ನಲ್ಲಿ ಸಂಚಿತ ಬೆಳವಣಿಗೆಯು ಶೇ 28.84 ಆಗಿದೆ. 2023 ರ ಏಪ್ರಿಲ್​ಗೆ ಹೋಲಿಸಿದರೆ ವ್ಯತ್ಯಾಸವು ಶೇ 11.13 ಆಗಿದೆ ಎಂದು ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
ನರಕದವರನ್ನು ಒಲಿಸಲು ತಪ್ಪು ನಿರ್ಧಾರ ತೆಗೆದುಕೊಂಡ್ರಾ ಹಂಸಾ?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?