AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ. ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ […]

ಪೇದೆಗೆ ಕೊರೊನಾ​! ಆತಂಕದಲ್ಲಿ ಬೆಂಗಳೂರು ಪೊಲೀಸರು
ಸಾಧು ಶ್ರೀನಾಥ್​
|

Updated on:May 04, 2020 | 5:54 PM

Share

ಬೆಂಗಳೂರು: ಅಕ್ಷರಶಃ ಕೊರೊನಾ ವಾರಿಯರ್ಸ್​ ಆಗಿ ಹಗಲಿರುಳು ದುಡಿಯುತ್ತಿದ್ದ ರಾಜ್ಯ ಪೊಲೀಸ್ ಇಲಾಖೆಯ ಪೇದೆಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ. ರಾಜಧಾನಿಯ ಹಾಟ್​ ಸ್ಪಾಟ್ ಆಗಿ ಕಾಡುತ್ತಿರುವ ಹೊಂಗಸಂದ್ರದಿಂದಲೇ ಈ ಕೊರೊನಾ ಸುದ್ದಿ ಕೇಳಿಬಂದಿದೆ. 650ನೇ ಸೋಂಕಿತ ಬೆಂಗಳೂರಿನ 40 ವರ್ಷದ ಪೊಲೀಸ್ ಪೇದೆ.

ಮೂಲತಃ ಬೆಂಗಳೂರಿನ ಬೇಗೂರು ಪೊಲೀಸ್ ಠಾಣೆಯ ಪೇದೆಯಾಗಿರುವ ಈ ಸೋಂಕಿತ ಕೊರೊನಾ ವಾರಿಯರ್, ಹೊಂಗಸಂದ್ರದಲ್ಲಿ ಕೊರೊನಾ ಸೋಂಕಿತರ ಉಪಟಳ ಜಾಸ್ತಿಯಾಗಿದ್ದಾಗ ಪೊಲೀಸ್ ಬಂದೋಬಸ್ತ್​ಗೆ ತೆರಳಿದ್ದರು. ಆ ವೇಳೆ ಬೇಗೂರು ಠಾಣೆಯ ಪೇದೆಗೆ ಕೊರೊನಾ ಸೋಂಕು ಅಂಟಿಕೊಂಡಿದೆ ಎಂಬ ಆಘಾತಕಾರಿ ಸಂಗತಿ ತಿಳಿದುಬಂದಿದೆ.

ಠಾಣೆಯ ಇತರೆ ಪೇದೆಗಳಿಗೂ ಆತಂಕ! ಬೇಗೂರು ಪೊಲೀಸ್ ಠಾಣೆಯ ಪೇದೆಗೆ ಕೊರೊನಾ ಅಟ್ಯಾಕ್ ಆಗಿರುವ ಕಾರಣ ಠಾಣೆಯ ಉಳಿದ ಪೊಲೀಸರಿಗೂ ಆತಂಕ ಶುರುವಾಗಿದೆ. ಒಬ್ಬರಿಂದ ಮತ್ತೊಬ್ಬರಿಗೆ ಸೋಂಕು ಹರಡುವ ಕಾರಣದಿಂದ ಉಳಿದ ಪೇದೆಗಳಿಗೂ ಕೊರೊನಾ ಭಯ ಕಾಡುತ್ತಿದೆ.

ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ: 650ನೇ ಕೊರೊನಾ ಸೋಂಕಿತ ಬೆಂಗಳೂರಿನ ಪೊಲೀಸ್ ಪೇದೆ ಠಾಣೆಗೆ ಬಂದಿರಲಿಲ್ಲ. ಹೀಗಾಗಿ ಇಡೀ ಪೊಲೀಸ್ ಠಾಣೆ ಕ್ವಾರಂಟೈನ್ ಮಾಡುವಂತಿಲ್ಲ. ಪೇದೆಯ ಜತೆ ಸಂಪರ್ಕದಲ್ಲಿದ್ದವರ ಪತ್ತೆ ಹಚ್ಚಿ ಕ್ವಾರಂಟೈನ್​ ಮಾಡಲಾಗುವುದು ಎಂದು ಟಿವಿ9ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ತಿಳಿಸಿದ್ದಾರೆ.

Published On - 5:32 pm, Mon, 4 May 20

Follow Us
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ರಿಷಭ್ ಪಂತ್ ಮತ್ತು ಸಂಜೀವ್ ಗೋಯೆಂಕಾ ನಡುವಣ ವಿಡಿಯೋ ವೈರಲ್
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
Video: ಮದುವೆ ಒಂದು ವಾರವಿರುವಾಗ ಪ್ರೇಮಿಯೊಂದಿಗೆ ಓಡಿ ಹೋಗಲು ಯುವತಿ ಯತ್ನ
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
18 ಹಲ್ಲುಗಳಿಗೆ ಶಸ್ತ್ರ ಚಿಕಿತ್ಸೆ ಮಾಡಲು ದಂತ ವೈದ್ಯರ ಯತ್ನ, ಬಾಲಕಿ ಸಾವು
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ