AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರುತ್ತಲೇ ಇದೆ ಬೆಳಗಾವಿ ಅಧಿವೇಶನದ ವೆಚ್ಚ: ಈ ಬಾರಿ ಎಷ್ಟು ಖರ್ಚಾಗುತ್ತೆ ಗೊತ್ತಾ?

ಡಿಸೆಂಬರ್ 8 ರಿಂದ ವಿಧಾನಸಭೆ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರಂಭವಾಗಲಿದೆ. ಅದರೊಂದಿಗೆ, ಅಧಿವೇಶನದ ಖರ್ಚುವೆಚ್ಚ ಏರಿಕೆಯಾಗುತ್ತಿರುವುದರ ಬಗ್ಗೆಯೂ ಚರ್ಚೆ ಆರಂಭಗೊಂಡಿದೆ. ಹಾಗಾದರೆ, ಬೆಳಗಾವಿ ಅಧಿವೇಶನಕ್ಕೆ ಈವರೆಗೆ ಆದ ಖರ್ಚುವೆಚ್ಚಗಳೆಷ್ಟು? ಈ ಬಾರಿ ಎಷ್ಟು ಖರ್ಚಾಗಬಹುದು? ಇದು ಕಳೆದ ವರ್ಷಕ್ಕಿಂತ ಎಷ್ಟು ಹೆಚ್ಚು? ಇಲ್ಲಿದೆ ಮಾಹಿತಿ.

ಏರುತ್ತಲೇ ಇದೆ ಬೆಳಗಾವಿ ಅಧಿವೇಶನದ ವೆಚ್ಚ: ಈ ಬಾರಿ ಎಷ್ಟು ಖರ್ಚಾಗುತ್ತೆ ಗೊತ್ತಾ?
ಬೆಳಗಾವಿಯ ಸುವರ್ಣ ವಿಧಾನಸೌಧ
Ganapathi Sharma
|

Updated on: Dec 04, 2025 | 2:31 PM

Share

ಬೆಳಗಾವಿ, ಡಿಸೆಂಬರ್ 4: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕರ್ನಾಟಕ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು (Assembly Session) ಆಯೋಜಿಸುವ ವೆಚ್ಚ ಹೆಚ್ಚುತ್ತಲೇ ಇರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿರುವ ಹತ್ತು ದಿನಗಳ ಅಧಿವೇಶನಕ್ಕೆ ಜಿಲ್ಲಾಡಳಿತವು 21 ಕೋಟಿ ರೂ. ವೆಚ್ಚವನ್ನು ಅಂದಾಜಿಸಿದೆ. ಕಳೆದ ವರ್ಷ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನಕ್ಕೆ ಸರ್ಕಾರ 15.30 ಕೋಟಿ ರೂ. ಖರ್ಚು ಮಾಡಿತ್ತು. ಈ ವರ್ಷ 5.70 ಕೋಟಿ ರೂ. ಹೆಚ್ಚಳವಾಗಿದೆ. 2012 ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಗಳಿಗೆ ರಾಜ್ಯ ಸರ್ಕಾರ 169.6 ಕೋಟಿ ರೂ. ಖರ್ಚು ಮಾಡಿದೆ.

ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ ನೀಡುವುದು ಮತ್ತು ಆಡಳಿತ ವಿಕೇಂದ್ರೀಕರಣ, ಇಲಾಖಾ ಸಮತೋಲನವನ್ನು ಖಚಿತಪಡಿಸಿಕೊಳ್ಳುವ ಉದ್ದೇಶದೊಂದಿಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಗುತ್ತದೆ. ಆದಾಗ್ಯೂ ಈ ಉದ್ದೇಶಗಳು ಎಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿವೆ ಎಂಬುದರ ಬಗ್ಗೆ ಪ್ರಶ್ನೆಗಳು ಹಾಗೆಯೇ ಉಳಿದುಕೊಂಡಿದೆ.

ಬೆಳಗಾವಿ ಅಧಿವೇಶನ: ಯಾವುದಕ್ಕೆಲ್ಲ ಹೆಚ್ಚು ಖರ್ಚು?

ಕಲಾಪದ ದಿನಗಳ ಸಂಖ್ಯೆ, ಶಾಸಕರ ಹಾಜರಾತಿ ಪ್ರಮಾಣ ಮತ್ತು ಚರ್ಚೆಗಳ ಗಂಭೀರತೆ ಹೊರತಾಗಿ ಅಧಿವೇಶನದ ಹೆಚ್ಚಿನ ವೆಚ್ಚವು ಪ್ರಯಾಣ, ವಸತಿ, ಭದ್ರತೆ, ಅತಿಥಿಗಳ ನಿರ್ವಹಣೆ, ತಾಂತ್ರಿಕ ಬೆಂಬಲ, ವಿಶೇಷ ಸಿಬ್ಬಂದಿಯ ನಿಯೋಜನೆ, ಸಾರಿಗೆ ಮತ್ತು ಸುವರ್ಣ ಸೌಧದ ನಿರ್ವಹಣೆ ಸೇರಿದಂತೆ ಇತರ ಕೆಲಸಗಳಿಗೇ ಹೆಚ್ಚಿನ ವೆಚ್ಚ ವಿನಿಯೋಗವಾಗುತ್ತವೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​​ಪ್ರೆಸ್’ ವರದಿ ಮಾಡಿದೆ.

ಇದನ್ನೂ ಓದಿ: ಬೆಳಗಾವಿ ಅಧಿವೇಶನಕ್ಕೆ ಸುವರ್ಣಸೌಧ ಸಜ್ಜು: 12 ಸಾವಿರ ಸಿಬ್ಬಂದಿ, 3 ಸಾವಿರ ರೂಮ್​ಗಳು ಬುಕ್

ಉಳಿದಂತೆ ಸಂಪುಟ ಸಭೆಗಳು, ವಿಶೇಷ ಶಾಸಕಾಂಗ ಸಭೆಗಳು, ಮಾಧ್ಯಮ ಸೌಲಭ್ಯ, ಪೊಲೀಸ್ ವ್ಯವಸ್ಥೆ, ಸಾರಿಗೆ ಲಾಜಿಸ್ಟಿಕ್ಸ್ ಮತ್ತು ಶಿಷ್ಟಾಚಾರ ನಿರ್ವಹಣೆಗೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ. ಪ್ರತಿ ವರ್ಷ ಬೆಳಗಾವಿ ಅಧಿವೇಶನಕ್ಕೆ ಖರ್ಚು ಹೆಚ್ಚುತ್ತಿದೆ. ಇದರೊಂದಿಗೆ, ಬೆಳಗಾವಿಯಲ್ಲಿ ಅಧಿವೇಶನವನ್ನು ನಡೆಸುವ ಅನಿವಾರ್ಯ, ಅಗತ್ಯತೆಯ ಕುರಿತಾದ ಚರ್ಚೆ ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ಧ್ರುವಂತ್ ಮೇಲೆ ಬುಕ್ ಬರೆಯುತ್ತಾರಂತೆ ಗಿಲ್ಲಿ: ಸೀರಿಯಸ್ ಪ್ರಶ್ನೆಗೆ ಕಾಮಿಡಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ರಷ್ಯಾ ಅಧ್ಯಕ್ಷ ಪುಟಿನ್​​ ಸ್ವಾಗತಕ್ಕೆ ವಿಮಾನ ನಿಲ್ದಾಣಕ್ಕೆ ತೆರಳಿದ ಮೋದಿ
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಜಾರ್ಖಂಡ್ ಕಲ್ಲಿದ್ದಲು ಪ್ರದೇಶದಲ್ಲಿ ವಿಷಕಾರಿ ಅನಿಲ ಸೋರಿಕೆ; ಇಬ್ಬರು ಸಾವು
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ಸಾಕ್ಷಿ ಕೇಳ್ತಿದ್ದ ಸಿದ್ರಾಮಯ್ಯಗೆ ವಿಡಿಯೋ ಪ್ಲೇ ಮಾಡಿ ತೋರಿಸಿದ ಅಶೋಕ್​
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ನಿರ್ದೇಶಕ ಸಂಗೀತ್ ಸಾಗರ್ ನಿಧನಕ್ಕೂ ಮುನ್ನ ಪರಿಸ್ಥಿತಿ ಹೇಗಿತ್ತು?
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಶೂಟಿಂಗ್ ವೇಳೆ ನಿರ್ದೇಶಕ ಸಾವು, ಘಟನೆ ವಿವರಿಸಿದ ನಿರ್ಮಾಪಕ: ವಿಡಿಯೋ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ
ಹಿಜಾಬ್ Vs ಕೇಸರಿ ಶಾಲು: ಮತ್ತೆ ಮುನ್ನೆಲೆಗೆ ಬಂದ ವಿವಾದ