AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮೌಢ್ಯದಾಚೆಗೂ ವಾತಾವರಣ ಶುದ್ಧೀಕರಣಕ್ಕೆ ಹೋಮ-ಹವನ ಮಾಡಿಸಿದ ಶಾಸಕ ಅಭಯ್ ಪಾಟೀಲ್

ಲಾಕ್ಡೌನ್ ನಡುವೆಯೂ ಬಿಜೆಪಿ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಮ-ಹವನ ಕಾರ್ಯ ನಡೆಯುತ್ತಿದ್ದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಡಾವಣೆಗಳ ಮನೆಗಳ ಮುಂದೆ ಅಗ್ನಿಕುಂಡ ಸ್ಥಾಪನೆ ಮಾಡಿ ಅಗ್ನಿಕುಂಡದಲ್ಲಿ ಬೆರಣಿ, ಕರ್ಪೂರ, ತುಪ್ಪ, ಗುಗ್ಗಳ, ಅಕ್ಕಿ, ಬೇವಿನ ಎಲೆ, ಕವಡಿ, ಧೂಪ, ಲವಂಗ ಹಾಕಿ ಹೋಮ ಮಾಡಲಾಗುತ್ತಿದೆ. ಹೋಮ ಹವನದಿಂದ ವಾತಾವರಣ ಶುದ್ಧಿಯಾಗಿ ಸೋಂಕು ನಿವಾರಣೆ ಆಗಲಿದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಕೇತ್ರದ ಗಲ್ಲಿ ಗಲ್ಲಿಗಳಲ್ಲಿ ಹೋಮ ಮಾಡಿಸಲಾಗುತ್ತಿದೆ.

ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಮೌಢ್ಯದಾಚೆಗೂ ವಾತಾವರಣ ಶುದ್ಧೀಕರಣಕ್ಕೆ ಹೋಮ-ಹವನ ಮಾಡಿಸಿದ ಶಾಸಕ ಅಭಯ್ ಪಾಟೀಲ್
ಹೋಮ ಹವನದ ದೃಶ್ಯ
Follow us
ಆಯೇಷಾ ಬಾನು
|

Updated on: May 25, 2021 | 2:00 PM

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಾತಾವರಣ ಶುದ್ಧಿ ಮಾಡಲು ಬಿಜೆಪಿ ಶಾಸಕ ಅಭಯ್ ಪಾಟೀಲ್ ಹೋಮ-ಹವನಗಳ ಮೊರೆ ಹೋಗಿದ್ದಾರೆ. ಶಿವಾಜಿ ಗಾರ್ಡನ್ ಸುತ್ತಮುತ್ತ ನಿನ್ನೆ 50 ಕಡೆ ಹೋಮ ಮಾಡಿಸಿದ್ದರು. ಈಗ ಇದೇ ರೀತಿ ಜೂನ್ 15ರೊಳಗೆ ಬೆಳಗಾವಿ ದಕ್ಷಿಣ ಕ್ಷೇತ್ರದ ಎಲ್ಲ ಕಡೆ ಹೋಮ ಮಾಡಿಸುವುದಕ್ಕೆ ನಿರ್ಧರಿಸಿದ್ದಾರೆ.

ಲಾಕ್ಡೌನ್ ನಡುವೆಯೂ ಬಿಜೆಪಿ ಶಾಸಕ ಅಭಯ ಪಾಟೀಲ್ ನೇತೃತ್ವದಲ್ಲಿ ಹೋಮ-ಹವನ ಕಾರ್ಯ ನಡೆಯುತ್ತಿದ್ದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಡಾವಣೆಗಳ ಮನೆಗಳ ಮುಂದೆ ಅಗ್ನಿಕುಂಡ ಸ್ಥಾಪನೆ ಮಾಡಿ ಅಗ್ನಿಕುಂಡದಲ್ಲಿ ಬೆರಣಿ, ಕರ್ಪೂರ, ತುಪ್ಪ, ಗುಗ್ಗಳ, ಅಕ್ಕಿ, ಬೇವಿನ ಎಲೆ, ಕವಡಿ, ಧೂಪ, ಲವಂಗ ಹಾಕಿ ಹೋಮ ಮಾಡಲಾಗುತ್ತಿದೆ. ಹೋಮ ಹವನದಿಂದ ವಾತಾವರಣ ಶುದ್ಧಿಯಾಗಿ ಸೋಂಕು ನಿವಾರಣೆ ಆಗಲಿದೆ ಎಂಬ ನಂಬಿಕೆ ಹಿನ್ನೆಲೆಯಲ್ಲಿ ಕೇತ್ರದ ಗಲ್ಲಿ ಗಲ್ಲಿಗಳಲ್ಲಿ ಹೋಮ ಮಾಡಿಸಲಾಗುತ್ತಿದೆ.

ವಾತಾವರಣ ಶುದ್ಧೀಕರಣಕ್ಕೆ ಹೋಮ ಮಾಡಿಸಿದೆ ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯೆ ನೀಡಿದ ಬಿಜೆಪಿ ಶಾಸಕ ಅಭಯ್ ಪಾಟೀಲ್‌, ಮೌಢ್ಯ ಎಂದು ತಿಳಿದುಕೊಳ್ಳುವವರಿಗೆ ಅದು ಮೌಢ್ಯ. ಈ ರೀತಿ ಮಾಡುವುದರಿಂದ ವಾತಾವರಣ ಶುದ್ಧವಾಗುತ್ತೆ. ಪರಿಸರ ಇಲಾಖೆಯ ಕೆಲವರಿಗೂ ಇದರ ಬಗ್ಗೆ ಹೇಳಿದ್ದೇನೆ. ಹೋಮ ಹವನ ಮಾಡಲು ಜನರೇ ಮುಂದೆ ಬರ್ತಿದ್ದಾರೆ. ಕ್ಷೇತ್ರದಲ್ಲಿ ಹೋಮ ಹವನ ಕಾರ್ಯ ಮುಂದುವರಿಯುತ್ತೆ ಎಂದು ಹೇಳಿದ್ದಾರೆ.

ಮನೆಯಲ್ಲಿ ರೋಗಿಗಳಿದ್ದರೆ ಪರಿಣಾಮ ಏನಾಗುತ್ತೆ ಅಂತಾ ಅವಲೋಕನ ಮಾಡಿ ಹೋಮ ಮಾಡಿದ್ದೇವೆ. ಕೊರೊನಾ ಸಂದರ್ಭದಲ್ಲಿ ವಾತಾವರಣ ಕಲುಷಿತ ಆಗಿದೆ ಅನ್ನುವ ಕಾರಣಕ್ಕೆ ವಾತಾವರಣ ತಿಳಿ ಆಗಲಿ ಅಂತಾ ಮಾಡಿದ್ದೇವೆ. ಹೋಮ ಹವನ ಕಾರ್ಯಕ್ರಮ ಮಾಡಲು ಜನರೇ ಮುಂದೆ ಬರ್ತಿದ್ದಾರೆ. ಮಹಾನಗರ ಪಾಲಿಕೆ ಪರಿಸರ ಇಲಾಖೆ ಅಧಿಕಾರಿಗೆ ಹೇಳಿದ್ದೇನೆ. ಹೋಮ ಹವನ ಮಾಡುವುದರಿಂದ ಏನಾಗುತ್ತೆ ಅನ್ನುವುದನ್ನ ಚೆಕ್ ಮಡ್ತಾರಂತೆ. ಹೋಮ ಹವನ ಕಾರ್ಯ ಮುಂದುವರೆಯುತ್ತೆ ಕರೆದ್ರೇ ಕಾರ್ಯಕ್ರಮಕ್ಕೆ ನಾನು ಹೋಗ್ತೆನಿ ಎಂದು ತಿಳಿಸಿದ್ರು.

bgm homa havana

ಹೋಮ ಹವನದ ದೃಶ್ಯ

ಹೋಮ ಹವನ ಮಾಡಿದ ಕಾಲೋನಿಗಳಿಗೆ ಔಷಧಿ ಸಿಂಪಡಣೆ ವಾತಾವರಣ ಶುದ್ಧಿಯಾಗುತ್ತೆ ಎಂದು ಬೆಳಗಾವಿಯ ಶಿವಾಜಿ ಗಾರ್ಡನ್ ಸುತ್ತಮುತ್ತ ಶಾಸಕ ಅಭಯ್ ಪಾಟೀಲ್‌ ಹೋಮ ಮಾಡಿಸಿದ್ದಾರೆ. ಆದರೆ ಹೋಮ ಮಾಡಿದ ಸ್ಥಳದಲ್ಲಿಯೇ ಇಂದು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಹೋಮ ನಡೆದ ಏರಿಯಾಗಳಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದಾರೆ.

ಬೆಳಗಾವಿ ನಗರದ ಹೊಸೂರ, ಬಸವಣ್ಣ ಗಲ್ಲಿ, ಶಿವಾಜಿ ಗಾರ್ಡ್ ಸೇರಿದಂತೆ ಕೆಲವು ಕಡೆಗಳಲ್ಲಿ ವೀರ ಮದಕರಿ ಘರ್ಜನೆ ಸಂಘದ ಕಾರ್ಯಕರ್ತರಿಂದ ಸ್ಯಾನಿಟೈಸ್ ಮಾಡಲಾಗುತ್ತಿದೆ. ಒಂದೆಡೆ ಅಭಯ್ ಪಾಟೀಲ್‌ರಿಂದ ಹೋಮ ಹವನ ನಡೆದ್ರೆ ಮತ್ತೊಂದೆಡೆ ಅದೇ ಪ್ರದೇಶದಲ್ಲಿ ಸತೀಶ್ ಜಾರಕಿಹೊಳಿ‌ ಅಭಿಮಾನಿಗಳಿಂದ ಔಷಧಿ ಸಿಂಪಡಣೆ ಕಾರ್ಯ ನಡೆಯುತ್ತಿದೆ.

ಇದನ್ನೂ ಓದಿ: ಮಹಾಮಾರಿ ಕೊರೊನಾ ನಿವಾರಣೆಗಾಗಿ ದೇವಾಲಯದಲ್ಲಿ ಹೋಮ-ಹವನ

ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಪಾಕ್​ ಡ್ರೋನ್​ ಆಕಾಶದಲ್ಲೇ ಉಡೀಸ್: ಭಯಾನಕ ಸೌಂಡ್​ಗೆ ಬೆಚ್ಚಿಬಿದ್ದ ಜಮ್ಮು
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಾರತೀಯ ಸೇನೆಯಿಂದ ಅಗ್ನಿವೀರರಿಗೆ ಕಠಿಣ ತರಬೇತಿ
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ತೆಲುಗಿನಲ್ಲಿ ಕನ್ನಡದ ನಟರಿಗೆ ಹೆಚ್ಚು ಸಂಬಳ ಸಿಗುತ್ತಾ? ಚಂದು ಗೌಡ ಉತ್ತರ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
‘ದರ್ಶನ್ ಎದುರು ನಾನು ವಿಲನ್, ನಟಿಸುವಾಗ ನಾನೇ ನಡುಗುತ್ತಿದ್ದೆ’
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ