AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು

ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ದುರ್ಘಟನೆ ನಡೆದಿದೆ. ಒಟ್ಟು 6 ಜನರ ಪೈಕಿ ಈಜಿ ಪ್ರಾಣಾಪಾಯದಿಂದ ನಾಲ್ವರು ಕಮಾಂಡೋಗಳು ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್‌ ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
ತರಬೇತಿ ವೇಳೆ ಬೋಟ್​ ಮಗುಚಿ ಇಬ್ಬರು ಕಮಾಂಡೋಗಳು ಸಾವು: ನಾಲ್ವರು ಪಾರು
ಸಹದೇವ್​ ಮಾನೆ
| Edited By: |

Updated on: Sep 08, 2024 | 2:51 PM

Share

ಬೆಳಗಾವಿ, ಸೆಪ್ಟೆಂಬರ್​ 08: ತರಬೇತಿ ವೇಳೆ ಬೋಟ್ ಮಗುಚಿ ಇಬ್ಬರು ಜೂನಿಯರ್ ಕಮಾಂಡೋಗಳು (commandos) ಸಾವನ್ನಪ್ಪಿರುವಂತಹ ಘಟನೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಘಡ ತಾಲೂಕಿನ ಹಾಜಗೋಳಿ ಬಳಿ ನಡೆದಿದೆ. ರಾಜಸ್ಥಾನದ ವಿಜಯಕುಮಾರ್(28) ಮತ್ತು ಪಶ್ಚಿಮ ಬಂಗಾಳದ ದಿವಾಕರ್ ರಾಯ್(26) ಮೃತ ಜೂನಿಯರ್ ಕಮಾಂಡೋಗಳು. ತಿಲಾರಿ ಡ್ಯಾಂ ಹಿನ್ನೀರಿನಲ್ಲಿ ನದಿ ದಾಟುವ ತರಬೇತಿ ನೀಡುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ.

ಒಟ್ಟು ಆರು ಜನರಿದ್ದ ಬೋಟ್​ನಿಂದ ನಾಲ್ವರು ಈಜಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಜೆಎಲ್​ವಿಂಗ್ ಕಮಾಂಡೋ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ: ಸಾವು

ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ  ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆದಿದೆ. ಸುನೀಲ್ ಬಂಡರಗರ್ (10) ಮೃತ ಬಾಲಕ. ಟ್ಯೂಷನ್ ಮುಗಿಸಿ ಮೂತ್ರ ವಿಸರ್ಜನೆಗೆ ಗೆಳೆಯರ ಜೊತೆಗೆ ಹೊರ ಬಂದಿದ್ದಾಗ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಕಲಬುರಗಿ: ಮಾರಕಾಸ್ತ್ರಗಳಿಂದ ಹೊಡೆದು ವ್ಯಕ್ತಿಯ ಭೀಕರ ಕೊಲೆ

ಮಕ್ಕಳು ನಿಂತಿದ್ದನ್ನ ಗಮನಿಸಿದರೂ ಚಾಲಕ ಮಕ್ಕಳ ಮೇಲೆ ಬಸ್ ಹರಿಸಿದ್ದಾನೆ. ಚಾಲಕನ ನಿರ್ಲಕ್ಷ್ಯಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಥಣಿಯಿಂದ ಕಾರವಾರದ ಕಡೆ ಸರ್ಕಾರಿ ಬಸ್ ಹೋಗುತಿತ್ತು. ಭೀಕರ ರಸ್ತೆ ಅಪಘಾತ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ ಆಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಬೈಕ್​ ಮತ್ತು ಆಟೋ ಮಧ್ಯೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ತುಮಕೂರು: ಬೈಕ್ ಮತ್ತು​ ಆಟೋ ಮಧ್ಯೆ ಡಿಕ್ಕಿಯಾಗಿ ಮೂವರು ವ್ಯಕ್ತಿಗಳು ಗಂಭೀರ ಗಾಯಗೊಂಡಿರುವಂತಹ ಘಟನೆ ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ನಡೆದಿದೆ. ಬೈಕ್​ ಡಿಕ್ಕಿಯಾದ ಬಳಿಕ ಆಟೋ ಪಲ್ಟಿಯಾಗಿ ಮೂವರಿಗೆ ಗಾಯಗಳಿವೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವು

ಬಳ್ಳಾರಿ: ಜಿಲ್ಲೆ ಸಂಡೂರು ತಾಲೂಕಿನ‌ ದೋಣಿಮಲೈ ಕ್ರಾಸ್ ಬಳಿಯ ನಾರಿ ಹಳ್ಳಕ್ಕೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಸಂಡೂರು ನಿವಾಸಿ ಫಾರುಕ್ (45) ಮೃತ ದುರ್ದೈವಿ. ಬಾಬಯ್ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ದುರ್ಘಟನೆ ನಡೆದಿದೆ. ಸೇತುವೆ ಮೇಲಿಂದ ಆಯತಪ್ಪಿ ಹಳ್ಳಕ್ಕೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಹಾಲು ತರಲು ಹೋದ ಮಹಿಳೆಯನ್ನು ಎಳೆದೊಯ್ಯಲು ಯತ್ನ: ಖದೀಮನನ್ನು ನಗ್ನಗೊಳಿಸಿ ಥಳಿಸಿದ ಯುವಕರು

ಸದ್ಯ ಅಧಿಕಾರಿಗಳು ಹಳ್ಳದ ನೀರಿನಿಂದ ಮೃತದೇಹವನ್ನು ಹೊರ ತೆಗೆದಿದ್ದಾರೆ. ಮೃತ ವ್ಯಕ್ತಿ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಯುಡಿಆರ್​ ಅಡಿಯಲ್ಲಿ ಸಂಡೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಿಸಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್